ಬ್ರೇಕಿಂಗ್ ನ್ಯೂಸ್
23-07-21 01:03 pm Headline Karnataka News Network ಕ್ರೈಂ
ಕಾಸರಗೋಡು, ಜು.23: ಮನೆಯಲ್ಲಿ ಅಸೌಖ್ಯದಿಂದ ಮಲಗಿದ್ದ ಗಂಡನನ್ನು ಪತ್ನಿಯೇ ಕೊಲೆಗೈದ ಘಟನೆ ಚಂದೇರದ ಪಿಲಿಕ್ಕೋಡು ಮಡಿವಯಲ್ ಎಂಬಲ್ಲಿ ಬುಧವಾರ ರಾತ್ರಿ ನಡೆದಿದ್ದು, ಪತ್ನಿ ಸೇರಿದಂತೆ ಮೂವರನ್ನು ಚಂದೇರ ಪೊಲೀಸರು ಬಂಧಿಸಿದ್ದಾರೆ.
ಮಡಿವಯಲ್ ನ ಕುಂಞಂಬು(66) ಕೊಲೆಗೀಡಾದವರು. ಪ್ರಕರಣಕ್ಕೆ ಸಂಬಂಧಿಸಿ ಕೊಲೆಯಾದವರ ಪತ್ನಿ ಜಾನಕಿ, ಸಂಬಂಧಿಕರಾದ ವಿ.ರಾಜೇಶ್ ಹಾಗೂ ಅನಿಲ್ ಎಂಬಾತನನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.
ಕೋವಿಡ್ ಸೋಂಕಿಗೆ ಒಳಗಾಗಿದ್ದ ಕುಂಞಂಬು ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದ್ದರು. ಇವರನ್ನು ನೋಡಿಕೊಳ್ಳಲು ಕಷ್ಟವಾಗುತ್ತೆ ಅಂತ ಬುಧವಾರ ತಡರಾತ್ರಿ ಕೊಲೆ ನಡೆಸಿರುವುದಾಗಿ ಬಂಧಿತರು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ.
ಬುಧವಾರ ರಾತ್ರಿ ಸ್ಥಳೀಯ ಆ್ಯಂಬುಲೆನ್ಸ್ ಚಾಲಕರೊಬ್ಬರಿಗೆ ಅನಾಮಧೇಯ ಕರೆ ಬಂದಿತ್ತು. ಮಡಿವಯಲ್ ನಲ್ಲಿ ವ್ಯಕ್ತಿಯೋರ್ವರು ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಗೆ ತಲಪಿಸುವಂತೆ ತಿಳಿಸಿದ್ದ. ಬಳಿಕ ಆ್ಯಂಬುಲೆನ್ಸ್ ಚಾಲಕ ಅದೇ ನಂಬರ್ ಗೆ ಮರಳಿ ಕರೆ ಮಾಡಿದಾಗ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಇದರಿಂದ ಸಂಶಯಗೊಂಡು ಪರಿಸರದ ನಿವಾಸಿಗಳಿಗೆ ಮಾಹಿತಿ ನೀಡಿದ್ದ. ಸ್ಥಳೀಯರು ವಿಚಾರಿಸಿದಾಗ ಕುಂಞಂಬು ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಆದರೆ ಅವರ ಕುತ್ತಿಗೆಯಲ್ಲಿ ಗಾಯದ ಗುರುತು ಹಾಗೂ ನೆಲದಲ್ಲಿ ರಕ್ತದ ಕಲೆಗಳು ಕಂಡುಬಂದಿತ್ತು. ಈ ಬಗ್ಗೆ ಮೃತರ ಪತ್ನಿ ಜಾನಕಿಯನ್ನು ಪ್ರಶ್ನಿಸಿದಾಗ ಮಂಚದಿಂದ ಬಿದ್ದು ಗಾಯಗೊಂಡಿರುವುದಾಗಿ ತಿಳಿಸಿದ್ದಳು. ಸ್ಥಳೀಯರು ಚಂದೇರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ನಡುವೆ ಕುಂಞಂಬು ಮನೆಗೆ ಬುಧವಾರ ರಾತ್ರಿ ಇಬ್ಬರು ಆಗಮಿಸಿರುವ ಬಗ್ಗೆ ಮಾಹಿತಿ ಪಡೆದು ಪೊಲೀಸರು ಜಾನಕಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
Wife and three others kill husband infected with Covid 19 disease in Kasaragod. The incident happened at Pilikkod Madivayal within Chandera police station limits. Kunhambu (66) from Madivayal was murdered in this case. His wife Janaki, and relatives V Rajesh and Anil, have been arrested. The police, who took the trio into custody, subjected them to intense questioning before arresting them on Thursday night.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
01-06-25 12:32 pm
Mangalore Correspondent
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
01-06-25 07:56 pm
HK News Desk
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm