ಬ್ರೇಕಿಂಗ್ ನ್ಯೂಸ್
23-07-21 02:06 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಬೀದಿ ಬದಿ ವ್ಯಾಪಾರಿಯಿಂದ ಹಣ ಕೀಳಲು ಯತ್ನಿಸಿ ಸಾಧ್ಯವಾಗದೇ ಇದ್ದಾಗ, ಆತನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ಆರ್ಎಂಸಿ ಯಾರ್ಡ್ ಠಾಣೆಯ ಮಹಿಳಾ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.
ಇನ್ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಸಬ್ ಇನ್ಸ್ಪೆಕ್ಟರ್ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಅಮಾನತಾದವರು. ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್ ಹಾಗೂ ಸ್ನೇಹಿತ ನಾಗೇಂದ್ರ ಅವರನ್ನು ಜು.14 ರಂದು ಪಿಎಸ್ಐ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಠಾಣೆಗೆ ಕರೆತಂದಿದ್ದರು. ಹಣ ಕೊಡಲು ನಿರಾಕರಿಸಿದ ಕಾರಣಕ್ಕೆ ಶಿವರಾಜ್ಗೆ ಸಿಗರೇಟಿನಲ್ಲಿ ಗಾಂಜಾ ಸೇವಿಸುವಂತೆ ಒತ್ತಡ ಹಾಕಿದ್ದರು. ಸಿಗರೇಟು ಸೇದಿದರೆ ಬಿಡುವುದಾಗಿ ಹೇಳಿ ಸೇದುವಂತೆ ಮಾಡಿದ್ದರು. ನಂತರ ವೈದ್ಯಕೀಯ ಪರೀಕ್ಷೆ ಮಾಡಿಸಿ ಮಾದಕ ವಸ್ತು ಸೇವನೆ ಆರೋಪ ಹೊರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್, ಪೊಲೀಸರು ಹೀಗೆ ಮಾಡಿ ಕೇಸ್ ಹಾಕಿದ್ದರಿಂದ ಬೇಸರಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದ್ರೆ ಕೂಡಲೇ ಮನೆಯವರು ಆಸ್ಪತ್ರೆಗೆ ಸೇರಿಸಿದ್ದರಿಂದ ಶಿವರಾಜ್ ಅಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಶಿವರಾಜ್, ನಡೆದ ಘಟನೆ ಬಗ್ಗೆ ಹೇಳಿ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್ ಕುಟುಂಬಸ್ಥರು, ಮನೆ ಮುಂದೆ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದವನನ್ನು ಕರೆದೊಯ್ದು ಗಾಂಜಾ ಸೇವನೆ ಮಾಡಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದಾರೆ. ಬಲವಂತವಾಗಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.
ಪ್ರಕರಣದ ಬಗ್ಗೆ ಕಮಿಷನರ್ ಕಮಲ್ ಪಂತ್, ಇಲಾಖಾ ತನಿಖೆಗೆ ಆದೇಶ ಮಾಡಿದ್ದರು. ಮೂವರು ಪೊಲೀಸರು ಪ್ರಕರಣದಲ್ಲಿ ಶಾಮೀಲು ಆಗಿದ್ದು ಕಂಡುಬಂದು ಅವರನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ.
Bengaluru Urban False Case on Streetside Dealer Investigation Against Both Police Officers.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am