ಬ್ರೇಕಿಂಗ್ ನ್ಯೂಸ್
23-07-21 02:06 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಬೀದಿ ಬದಿ ವ್ಯಾಪಾರಿಯಿಂದ ಹಣ ಕೀಳಲು ಯತ್ನಿಸಿ ಸಾಧ್ಯವಾಗದೇ ಇದ್ದಾಗ, ಆತನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ಆರ್ಎಂಸಿ ಯಾರ್ಡ್ ಠಾಣೆಯ ಮಹಿಳಾ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.
ಇನ್ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಸಬ್ ಇನ್ಸ್ಪೆಕ್ಟರ್ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಅಮಾನತಾದವರು. ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್ ಹಾಗೂ ಸ್ನೇಹಿತ ನಾಗೇಂದ್ರ ಅವರನ್ನು ಜು.14 ರಂದು ಪಿಎಸ್ಐ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಠಾಣೆಗೆ ಕರೆತಂದಿದ್ದರು. ಹಣ ಕೊಡಲು ನಿರಾಕರಿಸಿದ ಕಾರಣಕ್ಕೆ ಶಿವರಾಜ್ಗೆ ಸಿಗರೇಟಿನಲ್ಲಿ ಗಾಂಜಾ ಸೇವಿಸುವಂತೆ ಒತ್ತಡ ಹಾಕಿದ್ದರು. ಸಿಗರೇಟು ಸೇದಿದರೆ ಬಿಡುವುದಾಗಿ ಹೇಳಿ ಸೇದುವಂತೆ ಮಾಡಿದ್ದರು. ನಂತರ ವೈದ್ಯಕೀಯ ಪರೀಕ್ಷೆ ಮಾಡಿಸಿ ಮಾದಕ ವಸ್ತು ಸೇವನೆ ಆರೋಪ ಹೊರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್, ಪೊಲೀಸರು ಹೀಗೆ ಮಾಡಿ ಕೇಸ್ ಹಾಕಿದ್ದರಿಂದ ಬೇಸರಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದ್ರೆ ಕೂಡಲೇ ಮನೆಯವರು ಆಸ್ಪತ್ರೆಗೆ ಸೇರಿಸಿದ್ದರಿಂದ ಶಿವರಾಜ್ ಅಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಶಿವರಾಜ್, ನಡೆದ ಘಟನೆ ಬಗ್ಗೆ ಹೇಳಿ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್ ಕುಟುಂಬಸ್ಥರು, ಮನೆ ಮುಂದೆ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದವನನ್ನು ಕರೆದೊಯ್ದು ಗಾಂಜಾ ಸೇವನೆ ಮಾಡಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದಾರೆ. ಬಲವಂತವಾಗಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.
ಪ್ರಕರಣದ ಬಗ್ಗೆ ಕಮಿಷನರ್ ಕಮಲ್ ಪಂತ್, ಇಲಾಖಾ ತನಿಖೆಗೆ ಆದೇಶ ಮಾಡಿದ್ದರು. ಮೂವರು ಪೊಲೀಸರು ಪ್ರಕರಣದಲ್ಲಿ ಶಾಮೀಲು ಆಗಿದ್ದು ಕಂಡುಬಂದು ಅವರನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ.
Bengaluru Urban False Case on Streetside Dealer Investigation Against Both Police Officers.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm