ಬ್ರೇಕಿಂಗ್ ನ್ಯೂಸ್
23-07-21 02:06 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಬೀದಿ ಬದಿ ವ್ಯಾಪಾರಿಯಿಂದ ಹಣ ಕೀಳಲು ಯತ್ನಿಸಿ ಸಾಧ್ಯವಾಗದೇ ಇದ್ದಾಗ, ಆತನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ಆರ್ಎಂಸಿ ಯಾರ್ಡ್ ಠಾಣೆಯ ಮಹಿಳಾ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.
ಇನ್ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಸಬ್ ಇನ್ಸ್ಪೆಕ್ಟರ್ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಅಮಾನತಾದವರು. ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್ ಹಾಗೂ ಸ್ನೇಹಿತ ನಾಗೇಂದ್ರ ಅವರನ್ನು ಜು.14 ರಂದು ಪಿಎಸ್ಐ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಠಾಣೆಗೆ ಕರೆತಂದಿದ್ದರು. ಹಣ ಕೊಡಲು ನಿರಾಕರಿಸಿದ ಕಾರಣಕ್ಕೆ ಶಿವರಾಜ್ಗೆ ಸಿಗರೇಟಿನಲ್ಲಿ ಗಾಂಜಾ ಸೇವಿಸುವಂತೆ ಒತ್ತಡ ಹಾಕಿದ್ದರು. ಸಿಗರೇಟು ಸೇದಿದರೆ ಬಿಡುವುದಾಗಿ ಹೇಳಿ ಸೇದುವಂತೆ ಮಾಡಿದ್ದರು. ನಂತರ ವೈದ್ಯಕೀಯ ಪರೀಕ್ಷೆ ಮಾಡಿಸಿ ಮಾದಕ ವಸ್ತು ಸೇವನೆ ಆರೋಪ ಹೊರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್, ಪೊಲೀಸರು ಹೀಗೆ ಮಾಡಿ ಕೇಸ್ ಹಾಕಿದ್ದರಿಂದ ಬೇಸರಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದ್ರೆ ಕೂಡಲೇ ಮನೆಯವರು ಆಸ್ಪತ್ರೆಗೆ ಸೇರಿಸಿದ್ದರಿಂದ ಶಿವರಾಜ್ ಅಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಶಿವರಾಜ್, ನಡೆದ ಘಟನೆ ಬಗ್ಗೆ ಹೇಳಿ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್ ಕುಟುಂಬಸ್ಥರು, ಮನೆ ಮುಂದೆ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದವನನ್ನು ಕರೆದೊಯ್ದು ಗಾಂಜಾ ಸೇವನೆ ಮಾಡಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದಾರೆ. ಬಲವಂತವಾಗಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.
ಪ್ರಕರಣದ ಬಗ್ಗೆ ಕಮಿಷನರ್ ಕಮಲ್ ಪಂತ್, ಇಲಾಖಾ ತನಿಖೆಗೆ ಆದೇಶ ಮಾಡಿದ್ದರು. ಮೂವರು ಪೊಲೀಸರು ಪ್ರಕರಣದಲ್ಲಿ ಶಾಮೀಲು ಆಗಿದ್ದು ಕಂಡುಬಂದು ಅವರನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ.
Bengaluru Urban False Case on Streetside Dealer Investigation Against Both Police Officers.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am