ಬ್ರೇಕಿಂಗ್ ನ್ಯೂಸ್
23-07-21 02:06 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಬೀದಿ ಬದಿ ವ್ಯಾಪಾರಿಯಿಂದ ಹಣ ಕೀಳಲು ಯತ್ನಿಸಿ ಸಾಧ್ಯವಾಗದೇ ಇದ್ದಾಗ, ಆತನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ಆರ್ಎಂಸಿ ಯಾರ್ಡ್ ಠಾಣೆಯ ಮಹಿಳಾ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.
ಇನ್ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಸಬ್ ಇನ್ಸ್ಪೆಕ್ಟರ್ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಅಮಾನತಾದವರು. ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್ ಹಾಗೂ ಸ್ನೇಹಿತ ನಾಗೇಂದ್ರ ಅವರನ್ನು ಜು.14 ರಂದು ಪಿಎಸ್ಐ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಠಾಣೆಗೆ ಕರೆತಂದಿದ್ದರು. ಹಣ ಕೊಡಲು ನಿರಾಕರಿಸಿದ ಕಾರಣಕ್ಕೆ ಶಿವರಾಜ್ಗೆ ಸಿಗರೇಟಿನಲ್ಲಿ ಗಾಂಜಾ ಸೇವಿಸುವಂತೆ ಒತ್ತಡ ಹಾಕಿದ್ದರು. ಸಿಗರೇಟು ಸೇದಿದರೆ ಬಿಡುವುದಾಗಿ ಹೇಳಿ ಸೇದುವಂತೆ ಮಾಡಿದ್ದರು. ನಂತರ ವೈದ್ಯಕೀಯ ಪರೀಕ್ಷೆ ಮಾಡಿಸಿ ಮಾದಕ ವಸ್ತು ಸೇವನೆ ಆರೋಪ ಹೊರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್, ಪೊಲೀಸರು ಹೀಗೆ ಮಾಡಿ ಕೇಸ್ ಹಾಕಿದ್ದರಿಂದ ಬೇಸರಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದ್ರೆ ಕೂಡಲೇ ಮನೆಯವರು ಆಸ್ಪತ್ರೆಗೆ ಸೇರಿಸಿದ್ದರಿಂದ ಶಿವರಾಜ್ ಅಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಶಿವರಾಜ್, ನಡೆದ ಘಟನೆ ಬಗ್ಗೆ ಹೇಳಿ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್ ಕುಟುಂಬಸ್ಥರು, ಮನೆ ಮುಂದೆ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದವನನ್ನು ಕರೆದೊಯ್ದು ಗಾಂಜಾ ಸೇವನೆ ಮಾಡಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದಾರೆ. ಬಲವಂತವಾಗಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.
ಪ್ರಕರಣದ ಬಗ್ಗೆ ಕಮಿಷನರ್ ಕಮಲ್ ಪಂತ್, ಇಲಾಖಾ ತನಿಖೆಗೆ ಆದೇಶ ಮಾಡಿದ್ದರು. ಮೂವರು ಪೊಲೀಸರು ಪ್ರಕರಣದಲ್ಲಿ ಶಾಮೀಲು ಆಗಿದ್ದು ಕಂಡುಬಂದು ಅವರನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ.
Bengaluru Urban False Case on Streetside Dealer Investigation Against Both Police Officers.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm