ಬ್ರೇಕಿಂಗ್ ನ್ಯೂಸ್
23-07-21 02:06 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಬೀದಿ ಬದಿ ವ್ಯಾಪಾರಿಯಿಂದ ಹಣ ಕೀಳಲು ಯತ್ನಿಸಿ ಸಾಧ್ಯವಾಗದೇ ಇದ್ದಾಗ, ಆತನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ಆರ್ಎಂಸಿ ಯಾರ್ಡ್ ಠಾಣೆಯ ಮಹಿಳಾ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.
ಇನ್ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಸಬ್ ಇನ್ಸ್ಪೆಕ್ಟರ್ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಅಮಾನತಾದವರು. ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್ ಹಾಗೂ ಸ್ನೇಹಿತ ನಾಗೇಂದ್ರ ಅವರನ್ನು ಜು.14 ರಂದು ಪಿಎಸ್ಐ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಠಾಣೆಗೆ ಕರೆತಂದಿದ್ದರು. ಹಣ ಕೊಡಲು ನಿರಾಕರಿಸಿದ ಕಾರಣಕ್ಕೆ ಶಿವರಾಜ್ಗೆ ಸಿಗರೇಟಿನಲ್ಲಿ ಗಾಂಜಾ ಸೇವಿಸುವಂತೆ ಒತ್ತಡ ಹಾಕಿದ್ದರು. ಸಿಗರೇಟು ಸೇದಿದರೆ ಬಿಡುವುದಾಗಿ ಹೇಳಿ ಸೇದುವಂತೆ ಮಾಡಿದ್ದರು. ನಂತರ ವೈದ್ಯಕೀಯ ಪರೀಕ್ಷೆ ಮಾಡಿಸಿ ಮಾದಕ ವಸ್ತು ಸೇವನೆ ಆರೋಪ ಹೊರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್, ಪೊಲೀಸರು ಹೀಗೆ ಮಾಡಿ ಕೇಸ್ ಹಾಕಿದ್ದರಿಂದ ಬೇಸರಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದ್ರೆ ಕೂಡಲೇ ಮನೆಯವರು ಆಸ್ಪತ್ರೆಗೆ ಸೇರಿಸಿದ್ದರಿಂದ ಶಿವರಾಜ್ ಅಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಶಿವರಾಜ್, ನಡೆದ ಘಟನೆ ಬಗ್ಗೆ ಹೇಳಿ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್ ಕುಟುಂಬಸ್ಥರು, ಮನೆ ಮುಂದೆ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದವನನ್ನು ಕರೆದೊಯ್ದು ಗಾಂಜಾ ಸೇವನೆ ಮಾಡಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದಾರೆ. ಬಲವಂತವಾಗಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.
ಪ್ರಕರಣದ ಬಗ್ಗೆ ಕಮಿಷನರ್ ಕಮಲ್ ಪಂತ್, ಇಲಾಖಾ ತನಿಖೆಗೆ ಆದೇಶ ಮಾಡಿದ್ದರು. ಮೂವರು ಪೊಲೀಸರು ಪ್ರಕರಣದಲ್ಲಿ ಶಾಮೀಲು ಆಗಿದ್ದು ಕಂಡುಬಂದು ಅವರನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ.
Bengaluru Urban False Case on Streetside Dealer Investigation Against Both Police Officers.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm