ಬ್ರೇಕಿಂಗ್ ನ್ಯೂಸ್
23-07-21 02:06 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಬೀದಿ ಬದಿ ವ್ಯಾಪಾರಿಯಿಂದ ಹಣ ಕೀಳಲು ಯತ್ನಿಸಿ ಸಾಧ್ಯವಾಗದೇ ಇದ್ದಾಗ, ಆತನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದ ಆರ್ಎಂಸಿ ಯಾರ್ಡ್ ಠಾಣೆಯ ಮಹಿಳಾ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.
ಇನ್ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಸಬ್ ಇನ್ಸ್ಪೆಕ್ಟರ್ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಅಮಾನತಾದವರು. ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್ ಹಾಗೂ ಸ್ನೇಹಿತ ನಾಗೇಂದ್ರ ಅವರನ್ನು ಜು.14 ರಂದು ಪಿಎಸ್ಐ ಆಂಜಿನಪ್ಪ ಹಾಗೂ ಕಾನ್ಸ್ಟೇಬಲ್ ಉಮೇಶ್ ಠಾಣೆಗೆ ಕರೆತಂದಿದ್ದರು. ಹಣ ಕೊಡಲು ನಿರಾಕರಿಸಿದ ಕಾರಣಕ್ಕೆ ಶಿವರಾಜ್ಗೆ ಸಿಗರೇಟಿನಲ್ಲಿ ಗಾಂಜಾ ಸೇವಿಸುವಂತೆ ಒತ್ತಡ ಹಾಕಿದ್ದರು. ಸಿಗರೇಟು ಸೇದಿದರೆ ಬಿಡುವುದಾಗಿ ಹೇಳಿ ಸೇದುವಂತೆ ಮಾಡಿದ್ದರು. ನಂತರ ವೈದ್ಯಕೀಯ ಪರೀಕ್ಷೆ ಮಾಡಿಸಿ ಮಾದಕ ವಸ್ತು ಸೇವನೆ ಆರೋಪ ಹೊರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಬೀದಿ ಬದಿ ವ್ಯಾಪಾರಿಯಾಗಿರುವ ಶಿವರಾಜ್, ಪೊಲೀಸರು ಹೀಗೆ ಮಾಡಿ ಕೇಸ್ ಹಾಕಿದ್ದರಿಂದ ಬೇಸರಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದ್ರೆ ಕೂಡಲೇ ಮನೆಯವರು ಆಸ್ಪತ್ರೆಗೆ ಸೇರಿಸಿದ್ದರಿಂದ ಶಿವರಾಜ್ ಅಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಶಿವರಾಜ್, ನಡೆದ ಘಟನೆ ಬಗ್ಗೆ ಹೇಳಿ ಪೊಲೀಸರ ವಿರುದ್ಧ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವರಾಜ್ ಕುಟುಂಬಸ್ಥರು, ಮನೆ ಮುಂದೆ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದವನನ್ನು ಕರೆದೊಯ್ದು ಗಾಂಜಾ ಸೇವನೆ ಮಾಡಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದಾರೆ. ಬಲವಂತವಾಗಿ ಸಿಗರೇಟಿನಲ್ಲಿ ಗಾಂಜಾ ಸೇರಿಸಿ ಸೇದುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದರು.
ಪ್ರಕರಣದ ಬಗ್ಗೆ ಕಮಿಷನರ್ ಕಮಲ್ ಪಂತ್, ಇಲಾಖಾ ತನಿಖೆಗೆ ಆದೇಶ ಮಾಡಿದ್ದರು. ಮೂವರು ಪೊಲೀಸರು ಪ್ರಕರಣದಲ್ಲಿ ಶಾಮೀಲು ಆಗಿದ್ದು ಕಂಡುಬಂದು ಅವರನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ.
Bengaluru Urban False Case on Streetside Dealer Investigation Against Both Police Officers.
02-01-26 06:09 pm
HK News Desk
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 02:02 pm
Mangalore Correspondent
Dr Vinaya Hegde Death, NItte Mangalore: ನಿಟ್ಟ...
01-01-26 09:43 am
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm