ಬ್ರೇಕಿಂಗ್ ನ್ಯೂಸ್
23-07-21 02:29 pm Udupi Correspondent ಕ್ರೈಂ
ಉಡುಪಿ, ಜುಲೈ 23: ಷೇರು ಬ್ರೋಕರ್ ಒಬ್ಬನನ್ನು ಅಪಹರಿಸಿ ದರೋಡೆಗೈದ ಪ್ರಕರಣದಲ್ಲಿ ಪೊಲೀಸರು ಕಾರ್ಕಳ ಮೂಲದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ಬೋವಿ, ಅನಿಲ್ ಪೂಜಾರಿ ಮತ್ತು ಮಣಿ ಅಲಿಯಾಸ್ ಮಣಿಕಂಠ ಖಾರ್ವಿ ಬಂಧಿತರು.
ತುಮಕೂರು ಜಿಲ್ಲೆ ಮೂಲದ ಅಶೋಕ್ ಕುಮಾರ್ ಎಂಬವರು ಉಡುಪಿ ಪೇಟೆಯ ವಾದಿರಾಜ್ ಕಾಂಪ್ಲೆಕ್ಸ್ ನಲ್ಲಿ ಷೇರು ಬ್ರೋಕರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮೊನ್ನೆ ಜುಲೈ 16ರಂದು ಕಚೇರಿಗೆ ಬಂದಿದ್ದ ಸಂತೋಷ್ ಎಂಬಾತ ವ್ಯವಹಾರದ ಬಗ್ಗೆ ಮಾತನಾಡಲೆಂದು ಕಾರಿನಲ್ಲಿ ಕರೆದೊಯ್ದಿದ್ದ. ಅಜ್ಜರಕಾಡು ಸಮೀಪಿಸುತ್ತಿದ್ದಂತೆ ಕಾರಿಗೆ ಇತರ ನಾಲ್ವರು ಯುವಕರು ಕೂಡ ಬಂದಿದ್ದು ಅಲ್ಲಿಂದ ಅಶೋಕ್ ಕುಮಾರ್ ಅವರನ್ನು ಮುಖಕ್ಕೆ ಬಟ್ಟೆ ಸುತ್ತಿಕೊಂಡು ನಿಗೂಢ ಜಾಗಕ್ಕೆ ಕರೆದೊಯ್ದಿದ್ದಾರೆ.
ಅಲ್ಲಿ ಆತನನ್ನು ಕೂಡಿಹಾಕಿ ಬೆದರಿಸಿ, ಎರಡು ಲಕ್ಷ ರೂಪಾಯಿ ಹಣ ಮತ್ತು ಎರಡು ಮೊಬೈಲ್ ಫೋನ್ ಕಿತ್ತುಕೊಂಡಿದ್ದಾರೆ. ಅಲ್ಲದೆ, ನಿನ್ನನ್ನು ಜೀವಂತ ಬಿಡಬೇಕಿದ್ದರೆ 70 ಲಕ್ಷ ರೂ. ನಗದು ನೀಡಬೇಕೆಂದು ಬೆದರಿಕೆ ಒಡ್ಡಿದ್ದರು. ಮರುದಿನ ಬ್ಯಾಂಕಿನಿಂದ ಹತ್ತು ಲಕ್ಷ ತೆಗೆಸಿಕೊಡುವುದಾಗಿ ಹೇಳಿ ಅಶೋಕ್ ಕುಮಾರ್, ಅದರಲ್ಲಿ ಒಬ್ಬ ಯುವಕನ ಜೊತೆ ಬ್ಯಾಂಕ್ ಒಳಗೆ ಹೋಗಿದ್ದ. ಆದರೆ ಅಶೋಕ್ ಕುಮಾರ್ ನೇರವಾಗಿ ಬ್ಯಾಂಕ್ ಮ್ಯಾನೇಜರ್ ಇದ್ದ ಚೇಂಬರಿಗೆ ತೆರಳಿದ್ದು, ತನ್ನನ್ನು ಯುವಕರು ಸೇರಿ ದರೋಡೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾನೆ. ಅಷ್ಟಾಗುತ್ತಿದ್ದಂತೆ, ಜೊತೆಗಿದ್ದ ಯುವಕ ತನ್ನನ್ನು ಬ್ಯಾಂಕ್ ಸಿಬಂದಿ ಸೇರಿ ಹಿಡಿದುಬಿಡುತ್ತಾರೆಂಬ ಭಯದಲ್ಲಿ ಅಲ್ಲಿಂದ ಕಾಲ್ಕಿತ್ತಿದ್ದು ಹೊರಗೆ ಓಡಿದ್ದಾನೆ.
ಕೂಡಲೇ ಅಶೋಕ್ ಕುಮಾರ್ ಉಡುಪಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, 1.35 ಲಕ್ಷ ರೂಪಾಯಿ ನಗದು ಮತ್ತು ಪಿಸ್ತೂಲ್ ಅನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಾರ್ಕಳದಲ್ಲಿ ಸಂಘಟನೆಯೊಂದರ ಕಾರ್ಯಕರ್ತರು ಎನ್ನಲಾಗುತ್ತಿದ್ದು, ಕೃತ್ಯದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The Udupi town police have arrested three persons in connection with the robbery and kidnap of a Share broker on July 22. The arrested have been identified as Santhosh Bovi, Anil Poojary and Mani alias Manikanta Kharvi. According to the police, the victim Ashok Kumar a native of Tumkur district was working as a share broker at the Vadiraj Complex in Car Street.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am