ಬ್ರೇಕಿಂಗ್ ನ್ಯೂಸ್
23-07-21 03:29 pm Headline Karnataka News Network ಕ್ರೈಂ
ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಬಂಧನವಾಗಿರುವ ಉದ್ಯಮಿ, ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾರನ್ನು ಜುಲೈ 27ರವರೆಗೂ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಂತೆ ಮುಂಬೈ ನ್ಯಾಯಾಲಯ ಆದೇಶಿಸಿದೆ.
ಜುಲೈ 19 ರಂದು ಮುಂಬೈ ಪೊಲೀಸರು ರಾಜ್ ಕುಂದ್ರಾರನ್ನು ಬಂಧಿಸಿದ್ದರು. ಜುಲೈ 23ರವರೆಗೂ ಪೊಲೀಸರ ಕಸ್ಟಡಿಗೆ ನೀಡಲಾಗಿತ್ತು. ಅವಧಿ ಮುಗಿದ ಹಿನ್ನೆಲೆ ಶನಿವಾರ ಮತ್ತೊಮ್ಮೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ರಾಜ್ ಕುಂದ್ರಾ ತನಿಖೆಗೆ ಸೂಕ್ತ ರೀತಿಯಲ್ಲಿ ಸಹಕರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಇನ್ನು ನಾಲ್ಕು ದಿನ ವಶಕ್ಕೆ ಪಡೆಯುವಂತೆ ಮುಂಬೈ ಕೋರ್ಟ್ ಪೊಲೀಸರಿಗೆ ಸೂಚಿಸಿದೆ.




ಫೆಬ್ರವರಿಯಲ್ಲಿ ಪ್ರಕರಣ ದಾಖಲು
ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್ಗಳ ಮೂಲಕ ಪ್ರಕಟಿಸುವ ಬಗ್ಗೆ ಫೆಬ್ರವರಿ 2021 ರಲ್ಲಿ ಮುಂಬೈ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ. ಈ ಕೇಸ್ನಲ್ಲಿ ರಾಜ್ ಕುಂದ್ರಾ ಜುಲೈ 19 ರಂದು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆ ವೇಳೆ ರಾಜ್ ಕುಂದ್ರಾ ವಿರುದ್ಧ ಪ್ರಬಲ ಸಾಕ್ಷ್ಯಗಳು ಲಭ್ಯವಾಗಿದ್ದು, ಈ ಕೇಸ್ನಲ್ಲಿ ಪ್ರಮುಖ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದರು.
ರಾಜ್ ಕುಂದ್ರಾ ಬಂಧನಕ್ಕೂ ಮುಂಚೆ ಈ ಪ್ರಕರಣದಲ್ಲಿ ನಟಿ ಪೂನಂ ಪಾಂಡೆ ಮತ್ತು ಶೆರ್ಲಿನ್ ಚೋಪ್ರಾರನ್ನು ವಿಚಾರಣೆಗೆ ಒಳಪಡಿಸಿ, ಹೇಳಿಕೆ ಪಡೆಯಲಾಗಿದೆ ಎಂಬ ವಿಚಾರ ವರದಿಯಾಗಿದೆ.
ಈ ಕೇಸ್ ಬಗ್ಗೆ ಪ್ರತಿಕ್ರಿಯಿಸಿದ್ದ ಪೂನಂ ಪಾಂಡೆ, ರಾಜ್ ಕುಂದ್ರಾ ಅವರೇ ನನ್ನನ್ನು ಈ ಅಶ್ಲೀಲ ಜಗತ್ತಿಗೆ ಪರಿಚಯಿಸಿದ್ದು, ನನಗೆ ಬೆದರಿಕೆ ಹಾಕಿ ವಿಡಿಯೋ ಮಾಡುತ್ತಿದ್ದರು. ಅವರ ಸಂಸ್ಥೆ ಜೊತೆ ಒಪ್ಪಂದ ಕಡಿದುಕೊಂಡಿದ್ದಕ್ಕೆ ನನ್ನ ಖಾಸಗಿ ನಂಬರ್ ಮತ್ತು ಸಂದೇಶಗಳನ್ನು ಸೋರಿಕೆ ಮಾಡಿದ್ದರು ಎಂದು ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಯ ಯಾವುದೇ ಪಾತ್ರ ಇಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
Raj Kundra had a tie-up with a London-based company involved in streaming pornographic content through Hotshots, a mobile app, according to Mumbai Police.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am