ಬ್ರೇಕಿಂಗ್ ನ್ಯೂಸ್
23-07-21 06:03 pm Headline Karnataka News Network ಕ್ರೈಂ
ಮುಂಬೈ, ಜುಲೈ 23: ತಾಯಿಗೆ ಮಕ್ಕಳು ಹೆಗ್ಗಣ ಆಗಿದ್ದರೂ ಚಿನ್ನವಂತೆ. ಆದರೆ, ಮಕ್ಕಳಿಗೆ ಹಾಗೇನೂ ಇಲ್ವಲ್ಲ. ಇಲ್ಲೊಬ್ಬ 18 ವರ್ಷದ ಹುಡುಗ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ತಾಯಿಯನ್ನು ಮನೆಯೊಳಗೆ ಕೂಡಿಹಾಕಿ ಕುತ್ತಿಗೆ ಅಮುಕಿ ಕೊಲೆ ಮಾಡಿದ್ದಾನೆ. ಹೌದು.. ಮುಂಬೈನ ವಸಾಯಿ ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಕೋಲಿವಾಡದಲ್ಲಿ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ.
ಒಂದು ವರ್ಷದ ಹಿಂದೆ ಗಂಡ ತೀರಿಕೊಂಡ ಬಳಿಕ 59 ವರ್ಷದ ಮಹಿಳೆ ಕುಡಿಯಲು ತೊಡಗಿದ್ದರು. ಮನೆಯಲ್ಲಿ ಮಕ್ಕಳ ಜೊತೆ ಗಲಾಟೆ ಮಾಡುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರ ಇಬ್ಬರು ಮಕ್ಕಳು ಮತ್ತು ತಾಯಿ ನಡುವೆ ಕಂದಕ ತಂದಿಟ್ಟಿತ್ತು. ಮೊನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ತಾಯಿ, ಮಕ್ಕಳ ನಡುವೆ ಜಗಳ ಆಗಿತ್ತು.

ಎಂಟನೇ ಕ್ಲಾಸ್ ಓದುತ್ತಿದ್ದ 18 ವರ್ಷದ ಹುಡುಗ, ತನ್ನ ತಂಗಿಯನ್ನು ಮನೆಯಿಂದ ಹೊರಗೆ ಹೋಗುವಂತೆ ಹೇಳಿದ್ದಾನೆ. ಆಕೆ ಹೊರ ನಡೆಯುತ್ತಿದ್ದಂತೆ, ಮನೆಯ ಬಾಗಿಲನ್ನು ಒಳಗಿಂದ ಲಾಕ್ ಮಾಡಿದ್ದ ಹುಡುಗ ತಾಯಿಯ ಕುತ್ತಿಗೆ ಬೆಲ್ಟ್ ನಲ್ಲಿ ಅದುಮಿದ್ದಾನೆ. ವಿಲವಿಲ ಒದ್ದಾಡಿ ಸಾಯುವ ತನಕವೂ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.
ಸ್ವಲ್ಪ ಹೊತ್ತಿನ ಬಳಿಕ ತಂಗಿ ಮನೆಗೆ ಮರಳಿದ್ದು, ಅಲ್ಲಿನ ದೃಶ್ಯ ನೋಡಿ ಹೌಹಾರಿದ್ದಾಳೆ. ತಾಯಿಯನ್ನೇ ಕೊಲೆ ಮಾಡಿದ್ದು ನೋಡಿ ಸ್ಥಳೀಯರನ್ನು ಕರೆದಿದ್ದಾಳೆ. ಬಳಿಕ ವಸಾಯಿ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ತಾಯಿಯನ್ನು ಕೊಲೆಗೈದ ಬಳಿಕ ಅಲ್ಲಿಯೇ ಕುಳಿತಿದ್ದ ಮಗನನ್ನು ವಶಕ್ಕೆ ಪಡೆದಿದ್ದಾರೆ. ತಂದೆಯ ಉಳಿಸಿದ್ದ ಹಣವನ್ನು ತಾಯಿ ಕುಡಿತಕ್ಕೇ ಮುಗಿಸುತ್ತಿದ್ದಾಳೆಂದು ಕೊಲೆ ಮಾಡಿದ್ದಾಗಿ ಹುಡುಗ ಹೇಳಿದ್ದಾನಂತೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am