ಬ್ರೇಕಿಂಗ್ ನ್ಯೂಸ್
23-07-21 06:03 pm Headline Karnataka News Network ಕ್ರೈಂ
ಮುಂಬೈ, ಜುಲೈ 23: ತಾಯಿಗೆ ಮಕ್ಕಳು ಹೆಗ್ಗಣ ಆಗಿದ್ದರೂ ಚಿನ್ನವಂತೆ. ಆದರೆ, ಮಕ್ಕಳಿಗೆ ಹಾಗೇನೂ ಇಲ್ವಲ್ಲ. ಇಲ್ಲೊಬ್ಬ 18 ವರ್ಷದ ಹುಡುಗ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ತಾಯಿಯನ್ನು ಮನೆಯೊಳಗೆ ಕೂಡಿಹಾಕಿ ಕುತ್ತಿಗೆ ಅಮುಕಿ ಕೊಲೆ ಮಾಡಿದ್ದಾನೆ. ಹೌದು.. ಮುಂಬೈನ ವಸಾಯಿ ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಕೋಲಿವಾಡದಲ್ಲಿ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ.
ಒಂದು ವರ್ಷದ ಹಿಂದೆ ಗಂಡ ತೀರಿಕೊಂಡ ಬಳಿಕ 59 ವರ್ಷದ ಮಹಿಳೆ ಕುಡಿಯಲು ತೊಡಗಿದ್ದರು. ಮನೆಯಲ್ಲಿ ಮಕ್ಕಳ ಜೊತೆ ಗಲಾಟೆ ಮಾಡುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರ ಇಬ್ಬರು ಮಕ್ಕಳು ಮತ್ತು ತಾಯಿ ನಡುವೆ ಕಂದಕ ತಂದಿಟ್ಟಿತ್ತು. ಮೊನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ತಾಯಿ, ಮಕ್ಕಳ ನಡುವೆ ಜಗಳ ಆಗಿತ್ತು.

ಎಂಟನೇ ಕ್ಲಾಸ್ ಓದುತ್ತಿದ್ದ 18 ವರ್ಷದ ಹುಡುಗ, ತನ್ನ ತಂಗಿಯನ್ನು ಮನೆಯಿಂದ ಹೊರಗೆ ಹೋಗುವಂತೆ ಹೇಳಿದ್ದಾನೆ. ಆಕೆ ಹೊರ ನಡೆಯುತ್ತಿದ್ದಂತೆ, ಮನೆಯ ಬಾಗಿಲನ್ನು ಒಳಗಿಂದ ಲಾಕ್ ಮಾಡಿದ್ದ ಹುಡುಗ ತಾಯಿಯ ಕುತ್ತಿಗೆ ಬೆಲ್ಟ್ ನಲ್ಲಿ ಅದುಮಿದ್ದಾನೆ. ವಿಲವಿಲ ಒದ್ದಾಡಿ ಸಾಯುವ ತನಕವೂ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.
ಸ್ವಲ್ಪ ಹೊತ್ತಿನ ಬಳಿಕ ತಂಗಿ ಮನೆಗೆ ಮರಳಿದ್ದು, ಅಲ್ಲಿನ ದೃಶ್ಯ ನೋಡಿ ಹೌಹಾರಿದ್ದಾಳೆ. ತಾಯಿಯನ್ನೇ ಕೊಲೆ ಮಾಡಿದ್ದು ನೋಡಿ ಸ್ಥಳೀಯರನ್ನು ಕರೆದಿದ್ದಾಳೆ. ಬಳಿಕ ವಸಾಯಿ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ತಾಯಿಯನ್ನು ಕೊಲೆಗೈದ ಬಳಿಕ ಅಲ್ಲಿಯೇ ಕುಳಿತಿದ್ದ ಮಗನನ್ನು ವಶಕ್ಕೆ ಪಡೆದಿದ್ದಾರೆ. ತಂದೆಯ ಉಳಿಸಿದ್ದ ಹಣವನ್ನು ತಾಯಿ ಕುಡಿತಕ್ಕೇ ಮುಗಿಸುತ್ತಿದ್ದಾಳೆಂದು ಕೊಲೆ ಮಾಡಿದ್ದಾಗಿ ಹುಡುಗ ಹೇಳಿದ್ದಾನಂತೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm