ಬ್ರೇಕಿಂಗ್ ನ್ಯೂಸ್
23-07-21 06:03 pm Headline Karnataka News Network ಕ್ರೈಂ
ಮುಂಬೈ, ಜುಲೈ 23: ತಾಯಿಗೆ ಮಕ್ಕಳು ಹೆಗ್ಗಣ ಆಗಿದ್ದರೂ ಚಿನ್ನವಂತೆ. ಆದರೆ, ಮಕ್ಕಳಿಗೆ ಹಾಗೇನೂ ಇಲ್ವಲ್ಲ. ಇಲ್ಲೊಬ್ಬ 18 ವರ್ಷದ ಹುಡುಗ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ತಾಯಿಯನ್ನು ಮನೆಯೊಳಗೆ ಕೂಡಿಹಾಕಿ ಕುತ್ತಿಗೆ ಅಮುಕಿ ಕೊಲೆ ಮಾಡಿದ್ದಾನೆ. ಹೌದು.. ಮುಂಬೈನ ವಸಾಯಿ ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಕೋಲಿವಾಡದಲ್ಲಿ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ.
ಒಂದು ವರ್ಷದ ಹಿಂದೆ ಗಂಡ ತೀರಿಕೊಂಡ ಬಳಿಕ 59 ವರ್ಷದ ಮಹಿಳೆ ಕುಡಿಯಲು ತೊಡಗಿದ್ದರು. ಮನೆಯಲ್ಲಿ ಮಕ್ಕಳ ಜೊತೆ ಗಲಾಟೆ ಮಾಡುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರ ಇಬ್ಬರು ಮಕ್ಕಳು ಮತ್ತು ತಾಯಿ ನಡುವೆ ಕಂದಕ ತಂದಿಟ್ಟಿತ್ತು. ಮೊನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ತಾಯಿ, ಮಕ್ಕಳ ನಡುವೆ ಜಗಳ ಆಗಿತ್ತು.

ಎಂಟನೇ ಕ್ಲಾಸ್ ಓದುತ್ತಿದ್ದ 18 ವರ್ಷದ ಹುಡುಗ, ತನ್ನ ತಂಗಿಯನ್ನು ಮನೆಯಿಂದ ಹೊರಗೆ ಹೋಗುವಂತೆ ಹೇಳಿದ್ದಾನೆ. ಆಕೆ ಹೊರ ನಡೆಯುತ್ತಿದ್ದಂತೆ, ಮನೆಯ ಬಾಗಿಲನ್ನು ಒಳಗಿಂದ ಲಾಕ್ ಮಾಡಿದ್ದ ಹುಡುಗ ತಾಯಿಯ ಕುತ್ತಿಗೆ ಬೆಲ್ಟ್ ನಲ್ಲಿ ಅದುಮಿದ್ದಾನೆ. ವಿಲವಿಲ ಒದ್ದಾಡಿ ಸಾಯುವ ತನಕವೂ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.
ಸ್ವಲ್ಪ ಹೊತ್ತಿನ ಬಳಿಕ ತಂಗಿ ಮನೆಗೆ ಮರಳಿದ್ದು, ಅಲ್ಲಿನ ದೃಶ್ಯ ನೋಡಿ ಹೌಹಾರಿದ್ದಾಳೆ. ತಾಯಿಯನ್ನೇ ಕೊಲೆ ಮಾಡಿದ್ದು ನೋಡಿ ಸ್ಥಳೀಯರನ್ನು ಕರೆದಿದ್ದಾಳೆ. ಬಳಿಕ ವಸಾಯಿ ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದಾರೆ. ತಾಯಿಯನ್ನು ಕೊಲೆಗೈದ ಬಳಿಕ ಅಲ್ಲಿಯೇ ಕುಳಿತಿದ್ದ ಮಗನನ್ನು ವಶಕ್ಕೆ ಪಡೆದಿದ್ದಾರೆ. ತಂದೆಯ ಉಳಿಸಿದ್ದ ಹಣವನ್ನು ತಾಯಿ ಕುಡಿತಕ್ಕೇ ಮುಗಿಸುತ್ತಿದ್ದಾಳೆಂದು ಕೊಲೆ ಮಾಡಿದ್ದಾಗಿ ಹುಡುಗ ಹೇಳಿದ್ದಾನಂತೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm