ಬ್ರೇಕಿಂಗ್ ನ್ಯೂಸ್
24-07-21 12:55 pm Mangalore Correspondent ಕ್ರೈಂ
ಮಂಗಳೂರು, ಜುಲೈ 24: ತನ್ನನ್ನು ಸೈನಿಕನೆಂದು ನಂಬಿಸಿದ ವ್ಯಕ್ತಿಯೊಬ್ಬ ಮನೆ ಬಾಡಿಗೆ ಪಡೆಯುವ ನೆಪದಲ್ಲಿ ಸಂಪರ್ಕಿಸಿ, ಮನೆ ಮಾಲೀಕನಿಂದಲೇ ಲಕ್ಷಾಂತರ ರೂ. ಎಗರಿಸಿದ ಬಗ್ಗೆ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರಿನ ಕುಳಾಯಿಯಲ್ಲಿ ಫ್ಲ್ಯಾಟ್ ಹೊಂದಿರುವ ವ್ಯಕ್ತಿಯೊಬ್ಬರು ಮ್ಯಾಜಿಕ್ ಬ್ರಿಕ್ ಎನ್ನುವ ವೆಬ್ಸೈಟ್ನಲ್ಲಿ ಫ್ಲಾಟ್ ಬಾಡಿಗೆ ನೀಡುವುದಾಗಿ ಜಾಹಿರಾತು ಹಾಕಿದ್ದರು. ಇದನ್ನು ನೋಡಿದ ಅಂಕಿತ್ ವಿಜಯ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಜು.20 ರಂದು ಕರೆ ಮಾಡಿದ್ದು ಸೈನಿಕ ವೃತ್ತಿಯಲ್ಲಿದ್ದು ಪ್ರಸ್ತುತ ಅಹಮದಾಬಾದ್ನಲ್ಲಿ ಕರ್ತವ್ಯದಲ್ಲಿದ್ದೇನೆ. ಈಗ ಮಂಗಳೂರಿಗೆ ವರ್ಗಾವಣೆಯಾಗಿದ್ದೇನೆ. ತನಗೆ ಕುಳಾಯಿಯಲ್ಲಿರುವ ಫ್ಲಾಟ್ ಬಾಡಿಗೆಗೆ ಬೇಕೆಂದು ತಿಳಿಸಿ ಮಿಲಿಟರಿ ಸಮವಸ್ತ್ರದಲ್ಲಿರುವ ತನ್ನ ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ಅನ್ನು ವಾಟ್ಸಪ್ ಮಾಡಿದ್ದ. ಬಳಿಕ ಮನೆಯ ಫೋಟೊಗಳನ್ನು ಕಳುಹಿಸಿಕೊಡುವಂತೆ ಕೇಳಿದ್ದಾನೆ.

ಅದರಂತೆ ಫ್ಲಾಟ್ನ ಭಾವಚಿತ್ರವನ್ನು ಕಳುಹಿಸಿದ್ದು, ಜು.20ರಂದು ಆರೋಪಿ ಕರೆಮಾಡಿ ಮನೆಯವರಿಗೆ ಫ್ಲ್ಯಾಟ್ ಇಷ್ಟವಾಗಿದ್ದು ಫ್ಲಾಟ್ ಬಾಡಿಗೆಗೆ ನೀಡುವಂತೆ ತಿಳಿಸಿದ್ದಾನೆ. ತಿಂಗಳಿಗೆ 10 ಸಾವಿರ ರೂ. ಬಾಡಿಗೆ ಹಾಗೂ 25 ಸಾವಿರ ರೂ. ಡೆಪಾಸಿಡ್ ಬಗ್ಗೆ ತಿಳಿಸಿದ್ದರು. ಆರೋಪಿ ವ್ಯಕ್ತಿ ಮುಂಗಡ ಹಣವನ್ನು ಮೇಲಾಧಿಕಾರಿಯ ಮೂಲಕ ಪಾವತಿಸುವುದಾಗಿ ತಿಳಿಸಿ ಅಕೌಂಟ್ ಮಾಹಿತಿ ಪಡೆದಿದ್ದ.
ಬಳಿಕ ಆರೋಪಿ ಕಡೆಯಿಂದ ಫ್ಲ್ಯಾಟ್ ಮಾಲೀಕರಿಗೆ 50 ರೂ. ಎಚ್ಡಿಎಫ್ಸಿ ಬ್ಯಾಂಕ್ ಖಾತೆಯಿಂದ ಬಂದಿತ್ತು. ಆದರೆ ಸ್ವಲ್ಪ ಹೊತ್ತಿನಲ್ಲಿ ಮನೆ ಮಾಲೀಕರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ 2,23,500 ರೂ. ಖಾಲಿಯಾಗಿದೆ. ಈ ಹಣವನ್ನು ಆರೋಪಿಯೇ ಆತನ ಖಾತೆಗೆ ವರ್ಗಾಯಿಸಿದ್ದಾನೆ ಎಂದು ಮನೆ ಮಾಲೀಕ ವ್ಯಕ್ತಿ ಆರೋಪಿಸಿದ್ದಾರೆ. ಘಟನೆ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Flat house owner cheated in the name of Indian Army soldier lakhs of the amount lost case filed. A case has been registered at the cybercrime police station in Mangalore.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm