ಬ್ರೇಕಿಂಗ್ ನ್ಯೂಸ್
24-07-21 12:55 pm Mangalore Correspondent ಕ್ರೈಂ
ಮಂಗಳೂರು, ಜುಲೈ 24: ತನ್ನನ್ನು ಸೈನಿಕನೆಂದು ನಂಬಿಸಿದ ವ್ಯಕ್ತಿಯೊಬ್ಬ ಮನೆ ಬಾಡಿಗೆ ಪಡೆಯುವ ನೆಪದಲ್ಲಿ ಸಂಪರ್ಕಿಸಿ, ಮನೆ ಮಾಲೀಕನಿಂದಲೇ ಲಕ್ಷಾಂತರ ರೂ. ಎಗರಿಸಿದ ಬಗ್ಗೆ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರಿನ ಕುಳಾಯಿಯಲ್ಲಿ ಫ್ಲ್ಯಾಟ್ ಹೊಂದಿರುವ ವ್ಯಕ್ತಿಯೊಬ್ಬರು ಮ್ಯಾಜಿಕ್ ಬ್ರಿಕ್ ಎನ್ನುವ ವೆಬ್ಸೈಟ್ನಲ್ಲಿ ಫ್ಲಾಟ್ ಬಾಡಿಗೆ ನೀಡುವುದಾಗಿ ಜಾಹಿರಾತು ಹಾಕಿದ್ದರು. ಇದನ್ನು ನೋಡಿದ ಅಂಕಿತ್ ವಿಜಯ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಜು.20 ರಂದು ಕರೆ ಮಾಡಿದ್ದು ಸೈನಿಕ ವೃತ್ತಿಯಲ್ಲಿದ್ದು ಪ್ರಸ್ತುತ ಅಹಮದಾಬಾದ್ನಲ್ಲಿ ಕರ್ತವ್ಯದಲ್ಲಿದ್ದೇನೆ. ಈಗ ಮಂಗಳೂರಿಗೆ ವರ್ಗಾವಣೆಯಾಗಿದ್ದೇನೆ. ತನಗೆ ಕುಳಾಯಿಯಲ್ಲಿರುವ ಫ್ಲಾಟ್ ಬಾಡಿಗೆಗೆ ಬೇಕೆಂದು ತಿಳಿಸಿ ಮಿಲಿಟರಿ ಸಮವಸ್ತ್ರದಲ್ಲಿರುವ ತನ್ನ ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ಅನ್ನು ವಾಟ್ಸಪ್ ಮಾಡಿದ್ದ. ಬಳಿಕ ಮನೆಯ ಫೋಟೊಗಳನ್ನು ಕಳುಹಿಸಿಕೊಡುವಂತೆ ಕೇಳಿದ್ದಾನೆ.

ಅದರಂತೆ ಫ್ಲಾಟ್ನ ಭಾವಚಿತ್ರವನ್ನು ಕಳುಹಿಸಿದ್ದು, ಜು.20ರಂದು ಆರೋಪಿ ಕರೆಮಾಡಿ ಮನೆಯವರಿಗೆ ಫ್ಲ್ಯಾಟ್ ಇಷ್ಟವಾಗಿದ್ದು ಫ್ಲಾಟ್ ಬಾಡಿಗೆಗೆ ನೀಡುವಂತೆ ತಿಳಿಸಿದ್ದಾನೆ. ತಿಂಗಳಿಗೆ 10 ಸಾವಿರ ರೂ. ಬಾಡಿಗೆ ಹಾಗೂ 25 ಸಾವಿರ ರೂ. ಡೆಪಾಸಿಡ್ ಬಗ್ಗೆ ತಿಳಿಸಿದ್ದರು. ಆರೋಪಿ ವ್ಯಕ್ತಿ ಮುಂಗಡ ಹಣವನ್ನು ಮೇಲಾಧಿಕಾರಿಯ ಮೂಲಕ ಪಾವತಿಸುವುದಾಗಿ ತಿಳಿಸಿ ಅಕೌಂಟ್ ಮಾಹಿತಿ ಪಡೆದಿದ್ದ.
ಬಳಿಕ ಆರೋಪಿ ಕಡೆಯಿಂದ ಫ್ಲ್ಯಾಟ್ ಮಾಲೀಕರಿಗೆ 50 ರೂ. ಎಚ್ಡಿಎಫ್ಸಿ ಬ್ಯಾಂಕ್ ಖಾತೆಯಿಂದ ಬಂದಿತ್ತು. ಆದರೆ ಸ್ವಲ್ಪ ಹೊತ್ತಿನಲ್ಲಿ ಮನೆ ಮಾಲೀಕರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ 2,23,500 ರೂ. ಖಾಲಿಯಾಗಿದೆ. ಈ ಹಣವನ್ನು ಆರೋಪಿಯೇ ಆತನ ಖಾತೆಗೆ ವರ್ಗಾಯಿಸಿದ್ದಾನೆ ಎಂದು ಮನೆ ಮಾಲೀಕ ವ್ಯಕ್ತಿ ಆರೋಪಿಸಿದ್ದಾರೆ. ಘಟನೆ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Flat house owner cheated in the name of Indian Army soldier lakhs of the amount lost case filed. A case has been registered at the cybercrime police station in Mangalore.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm