ಬ್ರೇಕಿಂಗ್ ನ್ಯೂಸ್
24-07-21 12:55 pm Mangalore Correspondent ಕ್ರೈಂ
ಮಂಗಳೂರು, ಜುಲೈ 24: ತನ್ನನ್ನು ಸೈನಿಕನೆಂದು ನಂಬಿಸಿದ ವ್ಯಕ್ತಿಯೊಬ್ಬ ಮನೆ ಬಾಡಿಗೆ ಪಡೆಯುವ ನೆಪದಲ್ಲಿ ಸಂಪರ್ಕಿಸಿ, ಮನೆ ಮಾಲೀಕನಿಂದಲೇ ಲಕ್ಷಾಂತರ ರೂ. ಎಗರಿಸಿದ ಬಗ್ಗೆ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರಿನ ಕುಳಾಯಿಯಲ್ಲಿ ಫ್ಲ್ಯಾಟ್ ಹೊಂದಿರುವ ವ್ಯಕ್ತಿಯೊಬ್ಬರು ಮ್ಯಾಜಿಕ್ ಬ್ರಿಕ್ ಎನ್ನುವ ವೆಬ್ಸೈಟ್ನಲ್ಲಿ ಫ್ಲಾಟ್ ಬಾಡಿಗೆ ನೀಡುವುದಾಗಿ ಜಾಹಿರಾತು ಹಾಕಿದ್ದರು. ಇದನ್ನು ನೋಡಿದ ಅಂಕಿತ್ ವಿಜಯ್ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಜು.20 ರಂದು ಕರೆ ಮಾಡಿದ್ದು ಸೈನಿಕ ವೃತ್ತಿಯಲ್ಲಿದ್ದು ಪ್ರಸ್ತುತ ಅಹಮದಾಬಾದ್ನಲ್ಲಿ ಕರ್ತವ್ಯದಲ್ಲಿದ್ದೇನೆ. ಈಗ ಮಂಗಳೂರಿಗೆ ವರ್ಗಾವಣೆಯಾಗಿದ್ದೇನೆ. ತನಗೆ ಕುಳಾಯಿಯಲ್ಲಿರುವ ಫ್ಲಾಟ್ ಬಾಡಿಗೆಗೆ ಬೇಕೆಂದು ತಿಳಿಸಿ ಮಿಲಿಟರಿ ಸಮವಸ್ತ್ರದಲ್ಲಿರುವ ತನ್ನ ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ಅನ್ನು ವಾಟ್ಸಪ್ ಮಾಡಿದ್ದ. ಬಳಿಕ ಮನೆಯ ಫೋಟೊಗಳನ್ನು ಕಳುಹಿಸಿಕೊಡುವಂತೆ ಕೇಳಿದ್ದಾನೆ.

ಅದರಂತೆ ಫ್ಲಾಟ್ನ ಭಾವಚಿತ್ರವನ್ನು ಕಳುಹಿಸಿದ್ದು, ಜು.20ರಂದು ಆರೋಪಿ ಕರೆಮಾಡಿ ಮನೆಯವರಿಗೆ ಫ್ಲ್ಯಾಟ್ ಇಷ್ಟವಾಗಿದ್ದು ಫ್ಲಾಟ್ ಬಾಡಿಗೆಗೆ ನೀಡುವಂತೆ ತಿಳಿಸಿದ್ದಾನೆ. ತಿಂಗಳಿಗೆ 10 ಸಾವಿರ ರೂ. ಬಾಡಿಗೆ ಹಾಗೂ 25 ಸಾವಿರ ರೂ. ಡೆಪಾಸಿಡ್ ಬಗ್ಗೆ ತಿಳಿಸಿದ್ದರು. ಆರೋಪಿ ವ್ಯಕ್ತಿ ಮುಂಗಡ ಹಣವನ್ನು ಮೇಲಾಧಿಕಾರಿಯ ಮೂಲಕ ಪಾವತಿಸುವುದಾಗಿ ತಿಳಿಸಿ ಅಕೌಂಟ್ ಮಾಹಿತಿ ಪಡೆದಿದ್ದ.
ಬಳಿಕ ಆರೋಪಿ ಕಡೆಯಿಂದ ಫ್ಲ್ಯಾಟ್ ಮಾಲೀಕರಿಗೆ 50 ರೂ. ಎಚ್ಡಿಎಫ್ಸಿ ಬ್ಯಾಂಕ್ ಖಾತೆಯಿಂದ ಬಂದಿತ್ತು. ಆದರೆ ಸ್ವಲ್ಪ ಹೊತ್ತಿನಲ್ಲಿ ಮನೆ ಮಾಲೀಕರ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ 2,23,500 ರೂ. ಖಾಲಿಯಾಗಿದೆ. ಈ ಹಣವನ್ನು ಆರೋಪಿಯೇ ಆತನ ಖಾತೆಗೆ ವರ್ಗಾಯಿಸಿದ್ದಾನೆ ಎಂದು ಮನೆ ಮಾಲೀಕ ವ್ಯಕ್ತಿ ಆರೋಪಿಸಿದ್ದಾರೆ. ಘಟನೆ ಸಂಬಂಧ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Flat house owner cheated in the name of Indian Army soldier lakhs of the amount lost case filed. A case has been registered at the cybercrime police station in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am