ಬ್ರೇಕಿಂಗ್ ನ್ಯೂಸ್
28-07-21 08:26 pm Mangaluru correspondent ಕ್ರೈಂ
ಮಂಗಳೂರು, ಜುಲೈ 28: ಆಟೋ ರಿಕ್ಷಾ ಚಾಲಕನಿಂದ ಕಿರುಕುಳ ಆಗ್ತಿದೆ ಎಂದು ಅಪ್ರಾಪ್ತ ಬಾಲಕಿಯೊಬ್ಬಳು ತಾಯಿ ಜೊತೆಗೆ ಪೊಲೀಸರಿಗೆ ದೂರು ನೀಡಲು ಬಂದಿದ್ದಳು. ದೂರು ಪಡೆದ ಪೊಲೀಸ್ ಪೇದೆ ಆಟೋ ಚಾಲಕನನ್ನು ಗದರಿಸಿ, ಹುಡುಗಿಯ ನಂಬರ್ ಪಡೆದಿದ್ದ. ಆನಂತರ ಕಿರುಕುಳಕ್ಕೆ ಒಳಗಾದ ಹುಡುಗಿಯ ಜೊತೆ ತಾನೇ ಚಾಟ್ ಮಾಡಲು ಆರಂಭಿಸಿದ್ದ. ನ್ಯಾಯ ಕೇಳಿಕೊಂಡು ಬಂದ ಹುಡುಗಿಗೆ ತಾನೇ ಕಿರುಕುಳ ಕೊಡಲು ಆರಂಭಿಸಿದ್ದ.
ಸಿನಿಮಾಗಳಲ್ಲಿ ಸ್ಲಂ ಹುಡುಗಿಯರನ್ನು ಯಾಮಾರಿಸಿದ ಆಟೋ ಚಾಲಕನನ್ನು ದೂರಕ್ಕೆ ತಳ್ಳಿ ಪೊಲೀಸರೇ ಕಾಮತೃಷೆ ತೀರಿಸಿಕೊಳ್ಳುವ ಕತೆಯಿರುತ್ತೆ. ಆದರೆ, ಈಗ ನಾವು ಹೇಳ್ತಿರೋದು ಯಾವ ಸಿನಿಮಾ ಕತೆಯೂ ಅಲ್ಲ. ಬುದ್ಧಿವಂತರು ಎಂದು ಕರೆಸಿಕೊಳ್ಳುವ ಮಂಗಳೂರು ನಗರದಲ್ಲೇ ಆಗಿರುವ ರಿಯಲ್ ಕತೆ.


ಅಪ್ರಾಪ್ತ ಹುಡುಗಿ ಕಳೆದ ಜನವರಿಯಲ್ಲಿ ಆಟೋ ಚಾಲಕನ ಕಿರುಕುಳ ತಾಳಲಾರದೆ ದೂರು ಹಿಡಿದು ಬಂದಿದ್ದಳು. ಈ ಬಗ್ಗೆ ಆಟೋ ಚಾಲಕನನ್ನು ಗದರಿಸುತ್ತೇನೆಂದು ಹುಡುಗಿಯ ನಂಬರ್ ಪಡೆದಿದ್ದ ಪೊಲೀಸಪ್ಪ ತಾನು ಹೇಳಿದ ಕೆಲಸವನ್ನು ಮಾಡಿದ್ದಾನೆ. ಆದರೆ, ಸದಾ ಕಳ್ಳರು, ದರೋಡೆಕೋರರು, ಪಾಪಿಗಳ ಜೊತೆಗೆ ಇದ್ದುಕೊಂಡಿದ್ದ ಕಾರಣಕ್ಕೋ ಏನೋ, ಆ ಪೊಲೀಸಪ್ಪನಿಗೂ ಅದೇ ವರ್ತನೆ ಬಂದಿದೆ. ಪಾಪದ ಹುಡುಗಿಗೆ ವಿಕೃತ ಕಿರುಕುಳ ನೀಡಲು ಮುಂದಾಗಿದ್ದ. ಸೆಕ್ಸ್ ವಿಚಾರದಲ್ಲಿ ಚಾಟಿಂಗ್ ಮಾಡುತ್ತಾ ಕಿರುಕುಳ ಕೊಟ್ಟಿದ್ದಾನೆ. ತಾನು ಪೊಲೀಸ್, ತನ್ನದೇನೂ ಹೊರಗೆ ಬರುವುದಿಲ್ಲ. ಪಾಪದ ಹುಡುಗಿ ಏನು ಮಾಡುತ್ತಾಳೆಂಬ ದರ್ಪದಲ್ಲಿ ಇಂಥ ಕೃತ್ಯಕ್ಕೆ ಇಳಿದಿದ್ದನೋ ಏನೋ..
ಹುಡುಗಿಯ ಮನೆಯವರು ಪೊಲೀಸ್ ಪೇದೆಯ ಕಿರುಕುಳ ತಾಳಲಾರದೆ, ವಿಧಿ ಕಾಣದೆ ಯಾರೋ ಹೇಳಿದರೆಂದು ಚೈಲ್ಡ್ ಲೈನ್ ಸಂಸ್ಥೆಯವರಲ್ಲಿ ವಿಷಯ ಹೇಳಿಕೊಂಡಿದ್ದಾರೆ. ಮೊಬೈಲಿನಲ್ಲಿ ವಿಕೃತವಾಗಿದ್ದ ಚಾಟಿಂಗ್ ರೆಕಾರ್ಡನ್ನು ನೋಡಿದ ಅಲ್ಲಿನ ಸಿಬಂದಿ ಮಂಗಳೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿ ಕಂಕನಾಡಿ ನಗರ ಠಾಣೆಯ ಪೇದೆ ಬೆಂಗ್ರೆ ನಿವಾಸಿ ವಿನೋದ್ ನನ್ನು ಬಂಧಿಸಿದ್ದಾರೆ. ಅಲ್ಲದೆ, ಅಪ್ರಾಪ್ತ ಹುಡುಗಿಗೆ ಕಿರುಕುಳ ನೀಡಿದ್ದ ಕಾರಣಕ್ಕೆ ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
ಪೊಲೀಸ್ ಕರ್ತವ್ಯದಲ್ಲಿದ್ದುಕೊಂಡು ಈ ರೀತಿಯ ಕೃತ್ಯ ಮಾಡಬಾರದು ಎಂದು ಖುದ್ದು ಪೊಲೀಸ್ ಕಮಿಷನರ್ ಸಾಹೇಬ್ರೇ ವಿಷಯ ಗೊತ್ತಾಗುತ್ತಲೇ ಖಡಕ್ಕಾಗಿ ಕ್ರಮ ಜರುಗಿಸಲು ಸೂಚಿಸಿದ್ದಾರೆ.
POCSO case is filed against a police constable of Kankandy Town Police. The police constable has been arrested. The arrested has been identified as Vinod.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am