ಬ್ರೇಕಿಂಗ್ ನ್ಯೂಸ್
28-07-21 08:26 pm Mangaluru correspondent ಕ್ರೈಂ
ಮಂಗಳೂರು, ಜುಲೈ 28: ಆಟೋ ರಿಕ್ಷಾ ಚಾಲಕನಿಂದ ಕಿರುಕುಳ ಆಗ್ತಿದೆ ಎಂದು ಅಪ್ರಾಪ್ತ ಬಾಲಕಿಯೊಬ್ಬಳು ತಾಯಿ ಜೊತೆಗೆ ಪೊಲೀಸರಿಗೆ ದೂರು ನೀಡಲು ಬಂದಿದ್ದಳು. ದೂರು ಪಡೆದ ಪೊಲೀಸ್ ಪೇದೆ ಆಟೋ ಚಾಲಕನನ್ನು ಗದರಿಸಿ, ಹುಡುಗಿಯ ನಂಬರ್ ಪಡೆದಿದ್ದ. ಆನಂತರ ಕಿರುಕುಳಕ್ಕೆ ಒಳಗಾದ ಹುಡುಗಿಯ ಜೊತೆ ತಾನೇ ಚಾಟ್ ಮಾಡಲು ಆರಂಭಿಸಿದ್ದ. ನ್ಯಾಯ ಕೇಳಿಕೊಂಡು ಬಂದ ಹುಡುಗಿಗೆ ತಾನೇ ಕಿರುಕುಳ ಕೊಡಲು ಆರಂಭಿಸಿದ್ದ.
ಸಿನಿಮಾಗಳಲ್ಲಿ ಸ್ಲಂ ಹುಡುಗಿಯರನ್ನು ಯಾಮಾರಿಸಿದ ಆಟೋ ಚಾಲಕನನ್ನು ದೂರಕ್ಕೆ ತಳ್ಳಿ ಪೊಲೀಸರೇ ಕಾಮತೃಷೆ ತೀರಿಸಿಕೊಳ್ಳುವ ಕತೆಯಿರುತ್ತೆ. ಆದರೆ, ಈಗ ನಾವು ಹೇಳ್ತಿರೋದು ಯಾವ ಸಿನಿಮಾ ಕತೆಯೂ ಅಲ್ಲ. ಬುದ್ಧಿವಂತರು ಎಂದು ಕರೆಸಿಕೊಳ್ಳುವ ಮಂಗಳೂರು ನಗರದಲ್ಲೇ ಆಗಿರುವ ರಿಯಲ್ ಕತೆ.


ಅಪ್ರಾಪ್ತ ಹುಡುಗಿ ಕಳೆದ ಜನವರಿಯಲ್ಲಿ ಆಟೋ ಚಾಲಕನ ಕಿರುಕುಳ ತಾಳಲಾರದೆ ದೂರು ಹಿಡಿದು ಬಂದಿದ್ದಳು. ಈ ಬಗ್ಗೆ ಆಟೋ ಚಾಲಕನನ್ನು ಗದರಿಸುತ್ತೇನೆಂದು ಹುಡುಗಿಯ ನಂಬರ್ ಪಡೆದಿದ್ದ ಪೊಲೀಸಪ್ಪ ತಾನು ಹೇಳಿದ ಕೆಲಸವನ್ನು ಮಾಡಿದ್ದಾನೆ. ಆದರೆ, ಸದಾ ಕಳ್ಳರು, ದರೋಡೆಕೋರರು, ಪಾಪಿಗಳ ಜೊತೆಗೆ ಇದ್ದುಕೊಂಡಿದ್ದ ಕಾರಣಕ್ಕೋ ಏನೋ, ಆ ಪೊಲೀಸಪ್ಪನಿಗೂ ಅದೇ ವರ್ತನೆ ಬಂದಿದೆ. ಪಾಪದ ಹುಡುಗಿಗೆ ವಿಕೃತ ಕಿರುಕುಳ ನೀಡಲು ಮುಂದಾಗಿದ್ದ. ಸೆಕ್ಸ್ ವಿಚಾರದಲ್ಲಿ ಚಾಟಿಂಗ್ ಮಾಡುತ್ತಾ ಕಿರುಕುಳ ಕೊಟ್ಟಿದ್ದಾನೆ. ತಾನು ಪೊಲೀಸ್, ತನ್ನದೇನೂ ಹೊರಗೆ ಬರುವುದಿಲ್ಲ. ಪಾಪದ ಹುಡುಗಿ ಏನು ಮಾಡುತ್ತಾಳೆಂಬ ದರ್ಪದಲ್ಲಿ ಇಂಥ ಕೃತ್ಯಕ್ಕೆ ಇಳಿದಿದ್ದನೋ ಏನೋ..
ಹುಡುಗಿಯ ಮನೆಯವರು ಪೊಲೀಸ್ ಪೇದೆಯ ಕಿರುಕುಳ ತಾಳಲಾರದೆ, ವಿಧಿ ಕಾಣದೆ ಯಾರೋ ಹೇಳಿದರೆಂದು ಚೈಲ್ಡ್ ಲೈನ್ ಸಂಸ್ಥೆಯವರಲ್ಲಿ ವಿಷಯ ಹೇಳಿಕೊಂಡಿದ್ದಾರೆ. ಮೊಬೈಲಿನಲ್ಲಿ ವಿಕೃತವಾಗಿದ್ದ ಚಾಟಿಂಗ್ ರೆಕಾರ್ಡನ್ನು ನೋಡಿದ ಅಲ್ಲಿನ ಸಿಬಂದಿ ಮಂಗಳೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿ ಕಂಕನಾಡಿ ನಗರ ಠಾಣೆಯ ಪೇದೆ ಬೆಂಗ್ರೆ ನಿವಾಸಿ ವಿನೋದ್ ನನ್ನು ಬಂಧಿಸಿದ್ದಾರೆ. ಅಲ್ಲದೆ, ಅಪ್ರಾಪ್ತ ಹುಡುಗಿಗೆ ಕಿರುಕುಳ ನೀಡಿದ್ದ ಕಾರಣಕ್ಕೆ ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
ಪೊಲೀಸ್ ಕರ್ತವ್ಯದಲ್ಲಿದ್ದುಕೊಂಡು ಈ ರೀತಿಯ ಕೃತ್ಯ ಮಾಡಬಾರದು ಎಂದು ಖುದ್ದು ಪೊಲೀಸ್ ಕಮಿಷನರ್ ಸಾಹೇಬ್ರೇ ವಿಷಯ ಗೊತ್ತಾಗುತ್ತಲೇ ಖಡಕ್ಕಾಗಿ ಕ್ರಮ ಜರುಗಿಸಲು ಸೂಚಿಸಿದ್ದಾರೆ.
POCSO case is filed against a police constable of Kankandy Town Police. The police constable has been arrested. The arrested has been identified as Vinod.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm