ಬ್ರೇಕಿಂಗ್ ನ್ಯೂಸ್
28-07-21 08:26 pm Mangaluru correspondent ಕ್ರೈಂ
ಮಂಗಳೂರು, ಜುಲೈ 28: ಆಟೋ ರಿಕ್ಷಾ ಚಾಲಕನಿಂದ ಕಿರುಕುಳ ಆಗ್ತಿದೆ ಎಂದು ಅಪ್ರಾಪ್ತ ಬಾಲಕಿಯೊಬ್ಬಳು ತಾಯಿ ಜೊತೆಗೆ ಪೊಲೀಸರಿಗೆ ದೂರು ನೀಡಲು ಬಂದಿದ್ದಳು. ದೂರು ಪಡೆದ ಪೊಲೀಸ್ ಪೇದೆ ಆಟೋ ಚಾಲಕನನ್ನು ಗದರಿಸಿ, ಹುಡುಗಿಯ ನಂಬರ್ ಪಡೆದಿದ್ದ. ಆನಂತರ ಕಿರುಕುಳಕ್ಕೆ ಒಳಗಾದ ಹುಡುಗಿಯ ಜೊತೆ ತಾನೇ ಚಾಟ್ ಮಾಡಲು ಆರಂಭಿಸಿದ್ದ. ನ್ಯಾಯ ಕೇಳಿಕೊಂಡು ಬಂದ ಹುಡುಗಿಗೆ ತಾನೇ ಕಿರುಕುಳ ಕೊಡಲು ಆರಂಭಿಸಿದ್ದ.
ಸಿನಿಮಾಗಳಲ್ಲಿ ಸ್ಲಂ ಹುಡುಗಿಯರನ್ನು ಯಾಮಾರಿಸಿದ ಆಟೋ ಚಾಲಕನನ್ನು ದೂರಕ್ಕೆ ತಳ್ಳಿ ಪೊಲೀಸರೇ ಕಾಮತೃಷೆ ತೀರಿಸಿಕೊಳ್ಳುವ ಕತೆಯಿರುತ್ತೆ. ಆದರೆ, ಈಗ ನಾವು ಹೇಳ್ತಿರೋದು ಯಾವ ಸಿನಿಮಾ ಕತೆಯೂ ಅಲ್ಲ. ಬುದ್ಧಿವಂತರು ಎಂದು ಕರೆಸಿಕೊಳ್ಳುವ ಮಂಗಳೂರು ನಗರದಲ್ಲೇ ಆಗಿರುವ ರಿಯಲ್ ಕತೆ.


ಅಪ್ರಾಪ್ತ ಹುಡುಗಿ ಕಳೆದ ಜನವರಿಯಲ್ಲಿ ಆಟೋ ಚಾಲಕನ ಕಿರುಕುಳ ತಾಳಲಾರದೆ ದೂರು ಹಿಡಿದು ಬಂದಿದ್ದಳು. ಈ ಬಗ್ಗೆ ಆಟೋ ಚಾಲಕನನ್ನು ಗದರಿಸುತ್ತೇನೆಂದು ಹುಡುಗಿಯ ನಂಬರ್ ಪಡೆದಿದ್ದ ಪೊಲೀಸಪ್ಪ ತಾನು ಹೇಳಿದ ಕೆಲಸವನ್ನು ಮಾಡಿದ್ದಾನೆ. ಆದರೆ, ಸದಾ ಕಳ್ಳರು, ದರೋಡೆಕೋರರು, ಪಾಪಿಗಳ ಜೊತೆಗೆ ಇದ್ದುಕೊಂಡಿದ್ದ ಕಾರಣಕ್ಕೋ ಏನೋ, ಆ ಪೊಲೀಸಪ್ಪನಿಗೂ ಅದೇ ವರ್ತನೆ ಬಂದಿದೆ. ಪಾಪದ ಹುಡುಗಿಗೆ ವಿಕೃತ ಕಿರುಕುಳ ನೀಡಲು ಮುಂದಾಗಿದ್ದ. ಸೆಕ್ಸ್ ವಿಚಾರದಲ್ಲಿ ಚಾಟಿಂಗ್ ಮಾಡುತ್ತಾ ಕಿರುಕುಳ ಕೊಟ್ಟಿದ್ದಾನೆ. ತಾನು ಪೊಲೀಸ್, ತನ್ನದೇನೂ ಹೊರಗೆ ಬರುವುದಿಲ್ಲ. ಪಾಪದ ಹುಡುಗಿ ಏನು ಮಾಡುತ್ತಾಳೆಂಬ ದರ್ಪದಲ್ಲಿ ಇಂಥ ಕೃತ್ಯಕ್ಕೆ ಇಳಿದಿದ್ದನೋ ಏನೋ..
ಹುಡುಗಿಯ ಮನೆಯವರು ಪೊಲೀಸ್ ಪೇದೆಯ ಕಿರುಕುಳ ತಾಳಲಾರದೆ, ವಿಧಿ ಕಾಣದೆ ಯಾರೋ ಹೇಳಿದರೆಂದು ಚೈಲ್ಡ್ ಲೈನ್ ಸಂಸ್ಥೆಯವರಲ್ಲಿ ವಿಷಯ ಹೇಳಿಕೊಂಡಿದ್ದಾರೆ. ಮೊಬೈಲಿನಲ್ಲಿ ವಿಕೃತವಾಗಿದ್ದ ಚಾಟಿಂಗ್ ರೆಕಾರ್ಡನ್ನು ನೋಡಿದ ಅಲ್ಲಿನ ಸಿಬಂದಿ ಮಂಗಳೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿ ಕಂಕನಾಡಿ ನಗರ ಠಾಣೆಯ ಪೇದೆ ಬೆಂಗ್ರೆ ನಿವಾಸಿ ವಿನೋದ್ ನನ್ನು ಬಂಧಿಸಿದ್ದಾರೆ. ಅಲ್ಲದೆ, ಅಪ್ರಾಪ್ತ ಹುಡುಗಿಗೆ ಕಿರುಕುಳ ನೀಡಿದ್ದ ಕಾರಣಕ್ಕೆ ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
ಪೊಲೀಸ್ ಕರ್ತವ್ಯದಲ್ಲಿದ್ದುಕೊಂಡು ಈ ರೀತಿಯ ಕೃತ್ಯ ಮಾಡಬಾರದು ಎಂದು ಖುದ್ದು ಪೊಲೀಸ್ ಕಮಿಷನರ್ ಸಾಹೇಬ್ರೇ ವಿಷಯ ಗೊತ್ತಾಗುತ್ತಲೇ ಖಡಕ್ಕಾಗಿ ಕ್ರಮ ಜರುಗಿಸಲು ಸೂಚಿಸಿದ್ದಾರೆ.
POCSO case is filed against a police constable of Kankandy Town Police. The police constable has been arrested. The arrested has been identified as Vinod.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm