ಬ್ರೇಕಿಂಗ್ ನ್ಯೂಸ್
28-07-21 08:26 pm Mangaluru correspondent ಕ್ರೈಂ
ಮಂಗಳೂರು, ಜುಲೈ 28: ಆಟೋ ರಿಕ್ಷಾ ಚಾಲಕನಿಂದ ಕಿರುಕುಳ ಆಗ್ತಿದೆ ಎಂದು ಅಪ್ರಾಪ್ತ ಬಾಲಕಿಯೊಬ್ಬಳು ತಾಯಿ ಜೊತೆಗೆ ಪೊಲೀಸರಿಗೆ ದೂರು ನೀಡಲು ಬಂದಿದ್ದಳು. ದೂರು ಪಡೆದ ಪೊಲೀಸ್ ಪೇದೆ ಆಟೋ ಚಾಲಕನನ್ನು ಗದರಿಸಿ, ಹುಡುಗಿಯ ನಂಬರ್ ಪಡೆದಿದ್ದ. ಆನಂತರ ಕಿರುಕುಳಕ್ಕೆ ಒಳಗಾದ ಹುಡುಗಿಯ ಜೊತೆ ತಾನೇ ಚಾಟ್ ಮಾಡಲು ಆರಂಭಿಸಿದ್ದ. ನ್ಯಾಯ ಕೇಳಿಕೊಂಡು ಬಂದ ಹುಡುಗಿಗೆ ತಾನೇ ಕಿರುಕುಳ ಕೊಡಲು ಆರಂಭಿಸಿದ್ದ.
ಸಿನಿಮಾಗಳಲ್ಲಿ ಸ್ಲಂ ಹುಡುಗಿಯರನ್ನು ಯಾಮಾರಿಸಿದ ಆಟೋ ಚಾಲಕನನ್ನು ದೂರಕ್ಕೆ ತಳ್ಳಿ ಪೊಲೀಸರೇ ಕಾಮತೃಷೆ ತೀರಿಸಿಕೊಳ್ಳುವ ಕತೆಯಿರುತ್ತೆ. ಆದರೆ, ಈಗ ನಾವು ಹೇಳ್ತಿರೋದು ಯಾವ ಸಿನಿಮಾ ಕತೆಯೂ ಅಲ್ಲ. ಬುದ್ಧಿವಂತರು ಎಂದು ಕರೆಸಿಕೊಳ್ಳುವ ಮಂಗಳೂರು ನಗರದಲ್ಲೇ ಆಗಿರುವ ರಿಯಲ್ ಕತೆ.


ಅಪ್ರಾಪ್ತ ಹುಡುಗಿ ಕಳೆದ ಜನವರಿಯಲ್ಲಿ ಆಟೋ ಚಾಲಕನ ಕಿರುಕುಳ ತಾಳಲಾರದೆ ದೂರು ಹಿಡಿದು ಬಂದಿದ್ದಳು. ಈ ಬಗ್ಗೆ ಆಟೋ ಚಾಲಕನನ್ನು ಗದರಿಸುತ್ತೇನೆಂದು ಹುಡುಗಿಯ ನಂಬರ್ ಪಡೆದಿದ್ದ ಪೊಲೀಸಪ್ಪ ತಾನು ಹೇಳಿದ ಕೆಲಸವನ್ನು ಮಾಡಿದ್ದಾನೆ. ಆದರೆ, ಸದಾ ಕಳ್ಳರು, ದರೋಡೆಕೋರರು, ಪಾಪಿಗಳ ಜೊತೆಗೆ ಇದ್ದುಕೊಂಡಿದ್ದ ಕಾರಣಕ್ಕೋ ಏನೋ, ಆ ಪೊಲೀಸಪ್ಪನಿಗೂ ಅದೇ ವರ್ತನೆ ಬಂದಿದೆ. ಪಾಪದ ಹುಡುಗಿಗೆ ವಿಕೃತ ಕಿರುಕುಳ ನೀಡಲು ಮುಂದಾಗಿದ್ದ. ಸೆಕ್ಸ್ ವಿಚಾರದಲ್ಲಿ ಚಾಟಿಂಗ್ ಮಾಡುತ್ತಾ ಕಿರುಕುಳ ಕೊಟ್ಟಿದ್ದಾನೆ. ತಾನು ಪೊಲೀಸ್, ತನ್ನದೇನೂ ಹೊರಗೆ ಬರುವುದಿಲ್ಲ. ಪಾಪದ ಹುಡುಗಿ ಏನು ಮಾಡುತ್ತಾಳೆಂಬ ದರ್ಪದಲ್ಲಿ ಇಂಥ ಕೃತ್ಯಕ್ಕೆ ಇಳಿದಿದ್ದನೋ ಏನೋ..
ಹುಡುಗಿಯ ಮನೆಯವರು ಪೊಲೀಸ್ ಪೇದೆಯ ಕಿರುಕುಳ ತಾಳಲಾರದೆ, ವಿಧಿ ಕಾಣದೆ ಯಾರೋ ಹೇಳಿದರೆಂದು ಚೈಲ್ಡ್ ಲೈನ್ ಸಂಸ್ಥೆಯವರಲ್ಲಿ ವಿಷಯ ಹೇಳಿಕೊಂಡಿದ್ದಾರೆ. ಮೊಬೈಲಿನಲ್ಲಿ ವಿಕೃತವಾಗಿದ್ದ ಚಾಟಿಂಗ್ ರೆಕಾರ್ಡನ್ನು ನೋಡಿದ ಅಲ್ಲಿನ ಸಿಬಂದಿ ಮಂಗಳೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆರೋಪಿ ಕಂಕನಾಡಿ ನಗರ ಠಾಣೆಯ ಪೇದೆ ಬೆಂಗ್ರೆ ನಿವಾಸಿ ವಿನೋದ್ ನನ್ನು ಬಂಧಿಸಿದ್ದಾರೆ. ಅಲ್ಲದೆ, ಅಪ್ರಾಪ್ತ ಹುಡುಗಿಗೆ ಕಿರುಕುಳ ನೀಡಿದ್ದ ಕಾರಣಕ್ಕೆ ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
ಪೊಲೀಸ್ ಕರ್ತವ್ಯದಲ್ಲಿದ್ದುಕೊಂಡು ಈ ರೀತಿಯ ಕೃತ್ಯ ಮಾಡಬಾರದು ಎಂದು ಖುದ್ದು ಪೊಲೀಸ್ ಕಮಿಷನರ್ ಸಾಹೇಬ್ರೇ ವಿಷಯ ಗೊತ್ತಾಗುತ್ತಲೇ ಖಡಕ್ಕಾಗಿ ಕ್ರಮ ಜರುಗಿಸಲು ಸೂಚಿಸಿದ್ದಾರೆ.
POCSO case is filed against a police constable of Kankandy Town Police. The police constable has been arrested. The arrested has been identified as Vinod.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm