ಬ್ರೇಕಿಂಗ್ ನ್ಯೂಸ್
28-07-21 10:28 pm Mangaluru Correspondent ಕ್ರೈಂ
ಮಂಗಳೂರು, ಜುಲೈ 28: ಮಂಜೇಶ್ವರದ ಹೊಸಂಗಡಿಯ ರಾಜಧಾನಿ ಜುವೆಲ್ಲರಿಯಲ್ಲಿ ದರೋಡೆ ನಡೆಸಿದ ತಂಡದ ಬಗ್ಗೆ ಮಂಗಳೂರು ಪೊಲೀಸರಿಗೆ ಖಚಿತ ಸುಳಿವು ಲಭಿಸಿದೆ. ಫರಂಗಿಪೇಟೆಯ ಮೊಹಮ್ಮದ್ ಗೌಸ್ ಮತ್ತು ಸುರತ್ಕಲ್ಲಿನ ಇಮ್ರಾನ್ ಎಂಬವರ ತಂಡ ಸೇರಿ ದರೋಡೆ ಕೃತ್ಯ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಳ್ಳಾಲ ಪೊಲೀಸರು ಸೋಮವಾರ ನಸುಕಿನಲ್ಲಿ ತಲಪಾಡಿಯ ಕೆ.ಸಿ.ರೋಡ್ ಬಳಿ ರಾತ್ರಿ ಗಸ್ತಿನಲ್ಲಿದ್ದಾಗ, ಸಂಶಯದ ಮೇರೆಗೆ ಇನ್ನೋವಾ ಕಾರನ್ನು ತಡೆದಿದ್ದರು. ಆದರೆ, ತಪಾಸಣೆಗೆ ಮುಂದಾಗುವ ವೇಳೆಗೆ ಅದರಲ್ಲಿದ್ದ ಏಳು ಮಂದಿ ಪಿಎಸ್ಐ ಪ್ರದೀಪ್ ಟಿ.ಆರ್. ಸೇರಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ, ಪರಾರಿಯಾಗಿದ್ದಾರೆ. ಕಾರನ್ನು ತಪಾಸಣೆ ನಡೆಸಿದಾಗ ಬೆಳ್ಳಿ ಆಭರಣ, ಮಾರಕಾಸ್ತ್ರಗಳು ಪತ್ತೆಯಾಗಿವೆ.





ಕಾರಿನಲ್ಲಿ 7.75 ಕೇಜಿ ಬೆಳ್ಳಿಯ ಆಭರಣ, ನಗದು 1.90 ಲಕ್ಷ ರೂಪಾಯಿ, ವಿವಿಧ ರೀತಿಯ ವಿವಿಧ ಬಣ್ಣದ ಹರಳುಗಳು, ವಿವಿಧ ಕಂಪನಿಯ ವಾಚ್ ಗಳು, ಸಿಸಿಟಿವಿಯ ಡಿವಿಆರ್, ಕಬ್ಬಿಣದ ಕತ್ತರಿ, ಮೆಣಸಿನ ಹುಡಿ ಪ್ಯಾಕೆಟ್, ಸ್ಪ್ರೇ ಪೈಂಟ್ ಡಬ್ಬಿ, ಇಲೆಕ್ಟ್ರಾನಿಕ್ ತೂಕ ಮಾಪಕ, ಸೈರನ್ ಮೆಶಿನ್, ಸಣ್ಣ ಗ್ಯಾಸ್ ಸಿಲಿಂಡರ್, ನಕಲಿ ನಂಬರ್ ಪ್ಲೇಟ್, ಕಬ್ಬಿಣದ ರಾಡ್ ಗಳು, ಮಚ್ಚು, ಕತ್ತಿ ಪತ್ತೆಯಾಗಿದ್ದು, ಅವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನೋವಾ ಕಾರು ಸೇರಿ ಸೊತ್ತಿನ ಒಟ್ಟು ಮೌಲ್ಯ 14.35 ಲಕ್ಷ ಆಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿ ಈ ಹಿಂದೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಫರಂಗಿಪೇಟೆಯ ಮೊಹಮ್ಮದ್ ಗೌಸ್ ಮತ್ತು ಸುರತ್ಕಲ್ ನಿವಾಸಿ ಇಮ್ರಾನ್ ಮತ್ತಿತರರು ಇದ್ದು ಆರೋಪಿಗಳು ಮಂಜೇಶ್ವರದ ಹೊಸಂಗಡಿಯ ರಾಜಧಾನಿ ಜುವೆಲ್ಲರಿಯಲ್ಲಿ ರಾತ್ರಿ ವೇಳೆ ದರೋಡೆ ನಡೆಸಿ ಪರಾರಿಯಾಗುತ್ತಿದ್ದರು. ಕಾರಿನಲ್ಲಿ ಮಂಜೇಶ್ವರ ಕಡೆಯಿಂದ ಬರುತ್ತಿದ್ದಾಗ ಪೊಲೀಸರು ಅಡ್ಡಗಟ್ಟಿದ್ದರು. ಪೊಲೀಸರ ಮೇಲೆ ಕೊಲೆಗೆ ಯತ್ನಿಸಿದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಉಳ್ಳಾಲ ಮತ್ತು ಮಂಜೇಶ್ವರ ಪೊಲೀಸರು ಬಲೆಬೀಸಿದ್ದಾರೆ.
Surathkal and Farangipete gang behind Jewellery Shop robbery of Rajadhani Jewelley in Manjeshwar Kasaragod said Mangalore Police Commissioner Shashi Kumar and DCP Hariram Shankar. a gang made away with ornaments worth Rs 16 lakh from a jewellery store in Kasaragod district’s Hosangadi. The robbery happened at the Rajadhani jewellery store in the wee hours of Monday, July 26. As per reports, some cash and silver ornaments were stolen from the shop.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am