ಬ್ರೇಕಿಂಗ್ ನ್ಯೂಸ್
29-07-21 12:13 pm Mangaluru Correspondent ಕ್ರೈಂ
Photo credits : Representative Photo
ಮಂಗಳೂರು, ಜುಲೈ 29: ಮಂಗಳೂರಿನಿಂದ ಗುಜರಾತಿಗೆ ಒಯ್ಯುತ್ತಿದ್ದ ಎರಡು ಕೋಟಿ ಮೌಲ್ಯದ ಅಡಿಕೆಯೊಂದಿಗೆ ಚಾಲಕರು ಪರಾರಿಯಾದ ಘಟನೆ ನಡೆದಿದ್ದು, ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 19 ಮತ್ತು 20ರಂದು ಎರಡು ಲಾರಿಗಳಲ್ಲಿ ಅಡಿಕೆಯನ್ನು ಗುಜರಾತಿನ ರಾಜಕೋಟ್ ಗೆ ಸಾಗಿಸಲಾಗಿತ್ತು. ಒಂದು ಲಾರಿಯಲ್ಲಿ 291 ಚೀಲ ಮತ್ತು ಇನ್ನೊಂದು ಲಾರಿಯಲ್ಲಿ 301 ಚೀಲ ಅಡಿಕೆ ಸಂಗ್ರಹ ಇತ್ತು. ಜುಲೈ 24ರಂದು ಅಡಿಕೆ ಹೊಂದಿದ್ದ ಲಾರಿ ಗುಜರಾತ್ ತಲುಪಬೇಕಾಗಿತ್ತು. ಆದರೆ, ಲಾರಿ ಅಲ್ಲಿಗೆ ತಲುಪದೇ ಅದರ ಚಾಲಕರು ಅಡಿಕೆಯೊಂದಿಗೆ ನಾಪತ್ತೆಯಾಗಿದ್ದಾರೆ.
ಲಾರಿ ಚಾಲಕರಾದ ಭವೇಶ್ ಕೆ. ಷಾ, ಆಶಿಷ್ ಯಾದವ್ ಮತ್ತು ಮಹಾರಾಷ್ಟ್ರದ ನಾಸಿಕ್ ನಲ್ಲಿ ಜೋಷಿ ಹೆಸರಲ್ಲಿ ಟ್ರಾನ್ಸ್ ಪೋರ್ಟ್ ಹೊಂದಿರುವ ಅದರ ಮಾಲೀಕ ವಿಜಯ್ ಜೋಷಿ ಈ ಮೂವರ ವಿರುದ್ದ ಕೇಸು ದಾಖಲಾಗಿದೆ. ಮಂಗಳೂರು, ಭಟ್ಕಳ ಸೇರಿದಂತೆ ವಿವಿಧ ಕಡೆ ಕಚೇರಿಯನ್ನು ಹೊಂದಿರುವ ಸೌತ್ ಇಂಡಿಯಾ ಟ್ರಾನ್ಸ್ ಪೋರ್ಟ್ ಕಂಪನಿಯು ಅಡಿಕೆ ಸೇರಿದಂತೆ ವಿವಿಧ ಮಾದರಿಯ ತೋಟಗಾರಿಕೆ ಸಾಮಗ್ರಿಗಳನ್ನು ಖರೀದಿಸಿ, ಬೇರೆ ಬೇರೆ ರಾಜ್ಯಗಳಿಗೆ ರವಾನಿಸುತ್ತದೆ.
ಅದೇ ರೀತಿ ಅಡಿಕೆಯನ್ನು ಖರೀದಿಸಿ, ಗುಜರಾತಿನ ರಾಜಕೋಟ್ ನಲ್ಲಿರುವ ಸೌತ್ ಇಂಡಿಯಾ ಟ್ರಾನ್ಸ್ ಪೋರ್ಟ್ ಕಚೇರಿಗೆ ಕಳುಹಿಸಿಕೊಟ್ಟಿತ್ತು. ಇದಕ್ಕಾಗಿ ಬೋಳೂರಿನ ಜಯಲಕ್ಷ್ಮೀ ಟ್ರಾನ್ಸ್ ಪೋರ್ಟ್ ಬುಕ್ಕಿಂಗ್ ಕಚೇರಿಯಿಂದ ಲಾರಿ ಬಾಡಿಗೆ ಪಡೆಯಲಾಗಿತ್ತು. ಆದರೆ, ಲಾರಿ ನಿಗದಿತ ದಿನಾಂಕ ಜುಲೈ 24ಕ್ಕೆ ಅಲ್ಲಿಗೆ ತಲುಪದೇ ಅಡಿಕೆಯನ್ನು ಬೇರೆಡೆಗೆ ಒಯ್ದು ಕಳವು ಮಾಡಿರುವ ಸಂಶಯ ಬಂದಿದೆ. ಲಾರಿ ಚಾಲಕರ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಇಬ್ಬರೂ ನಾಪತ್ತೆಯಾಗಿದ್ದಾರೆ.
Truck carrying Areca nuts worth Rs two crore from Mangalore to Gujarat goes missing. Four persons have made good their escape with areca nuts worth about two crore rupees. The stock of areca nuts had been sent by two trucks to Rajkot in Gujarat. Lorry driver, driver Bhavesh K Shah, Ashish Yadav, and Vijay Joshi, owner of Joshi Transport, Nasik, Maharashtra, have been named as the accused.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am