ಬ್ರೇಕಿಂಗ್ ನ್ಯೂಸ್
30-07-21 12:18 pm Mangaluru Correspondent ಕ್ರೈಂ
ಮಂಗಳೂರು, ಜುಲೈ 30: ಮನೆಯ ಕಪಾಟಿನಲ್ಲಿರಿಸಿದ್ದ ತಂಗಿಯ ಒಡವೆಗಳನ್ನು ದೋಚಿಕೊಂಡು ಅಕ್ಕನೇ ತನ್ನ ಪ್ರಿಯತಮನ ಜೊತೆ ಪರಾರಿಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದ್ದು ಈ ಬಗ್ಗೆ ಮಗಳನ್ನು ಹುಡುಕಿಕೊಡುವಂತೆ ತಂದೆಯೇ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ನಿವಾಸಿ ಇಬ್ರಾಹಿಂ ಅವರ ಹಿರಿಯ ಮಗಳು ರಿಜ್ವಾನಾ(25) ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು, ಗಂಡ ದುಬೈನಲ್ಲಿರುವ ಕಾರಣ ತಂದೆಯ ಮನೆಯಲ್ಲಿಯೇ ಉಳಿದಿದ್ದಳು. ಆಕೆಯ ತಂಗಿ ರಾಝ್ವಿನಾಳಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಮದುವೆಯಾಗಿದ್ದು, ಆಕೆಯ ಒಡವೆಗಳನ್ನು ತಂದೆಯ ಮನೆಯಲ್ಲಿಯೇ ಇರಿಸಿದ್ದಳು. ಒಡವೆಗಳಿದ್ದ ಕಪಾಟಿನ ಕೀ ಹಿರಿಯ ಮಗಳಾದ ರಿಜ್ವಾನಾ ಬಳಿ ಇತ್ತು. ಇತ್ತೀಚೆಗೆ ತಂದೆ ಇಬ್ರಾಹಿಂ ತನಗೆ ಹಣದ ಅವಶ್ಯಕತೆ ಇದ್ದ ಕಾರಣ ಒಡವೆಗಳನ್ನು ಅಡವಿರಿಸಲೆಂದು ಜುಲೈ 26ರಂದು ಕಪಾಟಿನ ಕೀ ಕೇಳಿದ್ದರು. ತಂದೆ ಕೀ ಕೇಳಿದ್ದಕ್ಕೆ ರಿಜ್ವಾನಾ ಕೊಡಲು ನಿರಾಕರಿಸಿದ್ದಳು. ಆನಂತರ ಶಾಲೆಗೆಂದು ಮನೆಯಿಂದ ತೆರಳಿದ್ದಳು.

ಆದರೆ, ತಾನು ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಚೊಕ್ಕಬೆಟ್ಟಿನ ಜಾಮಿಯಾ ಇಂಗ್ಲೀಷ್ ಮೀಡಿಯಂ ಶಾಲೆಗೆ ಹೋದವಳು ವಾಪಾಸ್ ಮನೆಗೆ ಬರಲಿಲ್ಲ. ಆಕೆಯ ಮೊಬೈಲ್ ಪೋನ್ ಕೂಡ ಸ್ವಿಚ್ ಆಫ್ ಆಗಿದ್ದು ನಾಪತ್ತೆಯಾಗಿದ್ದಳು. ಮರುದಿನ ತಂದೆ ಸಂಶಯ ಬಂದು ಕಪಾಟಿನ ಬಾಗಿಲು ಒಡೆದು ನೋಡಿದ್ದು ಒಡವೆಗಳು ಕಾಣೆಯಾಗಿದ್ದವು.
ರಿಜ್ವಾನಾಗೆ ಗಂಡ ವಿದೇಶದಲ್ಲಿದ್ದರೂ, ಕೃಷ್ಣಾಪುರದ ಬಶೀರ್ ಎಂಬಾತನೊಂದಿಗೆ ಪ್ರೀತಿಯ ನೆಪದಲ್ಲಿ ಸಲುಗೆಯಿತ್ತು ಎನ್ನಲಾಗಿದೆ. ಒಡವೆಗಳ ಜೊತೆ ಆತನೊಂದಿಗೆ ಪರಾರಿಯಾಗಿರುವ ಬಗ್ಗೆ ಸಂಶಯಪಡಿಸಿ ಆಕೆಯ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore Woman flees with her boyfriend by stealing jewellery of her younger sister. A case has been registered at the surathkal police station.
08-12-25 06:58 pm
HK News Desk
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm