ಬ್ರೇಕಿಂಗ್ ನ್ಯೂಸ್
30-07-21 12:18 pm Mangaluru Correspondent ಕ್ರೈಂ
ಮಂಗಳೂರು, ಜುಲೈ 30: ಮನೆಯ ಕಪಾಟಿನಲ್ಲಿರಿಸಿದ್ದ ತಂಗಿಯ ಒಡವೆಗಳನ್ನು ದೋಚಿಕೊಂಡು ಅಕ್ಕನೇ ತನ್ನ ಪ್ರಿಯತಮನ ಜೊತೆ ಪರಾರಿಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದ್ದು ಈ ಬಗ್ಗೆ ಮಗಳನ್ನು ಹುಡುಕಿಕೊಡುವಂತೆ ತಂದೆಯೇ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ನಿವಾಸಿ ಇಬ್ರಾಹಿಂ ಅವರ ಹಿರಿಯ ಮಗಳು ರಿಜ್ವಾನಾ(25) ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು, ಗಂಡ ದುಬೈನಲ್ಲಿರುವ ಕಾರಣ ತಂದೆಯ ಮನೆಯಲ್ಲಿಯೇ ಉಳಿದಿದ್ದಳು. ಆಕೆಯ ತಂಗಿ ರಾಝ್ವಿನಾಳಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಮದುವೆಯಾಗಿದ್ದು, ಆಕೆಯ ಒಡವೆಗಳನ್ನು ತಂದೆಯ ಮನೆಯಲ್ಲಿಯೇ ಇರಿಸಿದ್ದಳು. ಒಡವೆಗಳಿದ್ದ ಕಪಾಟಿನ ಕೀ ಹಿರಿಯ ಮಗಳಾದ ರಿಜ್ವಾನಾ ಬಳಿ ಇತ್ತು. ಇತ್ತೀಚೆಗೆ ತಂದೆ ಇಬ್ರಾಹಿಂ ತನಗೆ ಹಣದ ಅವಶ್ಯಕತೆ ಇದ್ದ ಕಾರಣ ಒಡವೆಗಳನ್ನು ಅಡವಿರಿಸಲೆಂದು ಜುಲೈ 26ರಂದು ಕಪಾಟಿನ ಕೀ ಕೇಳಿದ್ದರು. ತಂದೆ ಕೀ ಕೇಳಿದ್ದಕ್ಕೆ ರಿಜ್ವಾನಾ ಕೊಡಲು ನಿರಾಕರಿಸಿದ್ದಳು. ಆನಂತರ ಶಾಲೆಗೆಂದು ಮನೆಯಿಂದ ತೆರಳಿದ್ದಳು.
ಆದರೆ, ತಾನು ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಚೊಕ್ಕಬೆಟ್ಟಿನ ಜಾಮಿಯಾ ಇಂಗ್ಲೀಷ್ ಮೀಡಿಯಂ ಶಾಲೆಗೆ ಹೋದವಳು ವಾಪಾಸ್ ಮನೆಗೆ ಬರಲಿಲ್ಲ. ಆಕೆಯ ಮೊಬೈಲ್ ಪೋನ್ ಕೂಡ ಸ್ವಿಚ್ ಆಫ್ ಆಗಿದ್ದು ನಾಪತ್ತೆಯಾಗಿದ್ದಳು. ಮರುದಿನ ತಂದೆ ಸಂಶಯ ಬಂದು ಕಪಾಟಿನ ಬಾಗಿಲು ಒಡೆದು ನೋಡಿದ್ದು ಒಡವೆಗಳು ಕಾಣೆಯಾಗಿದ್ದವು.
ರಿಜ್ವಾನಾಗೆ ಗಂಡ ವಿದೇಶದಲ್ಲಿದ್ದರೂ, ಕೃಷ್ಣಾಪುರದ ಬಶೀರ್ ಎಂಬಾತನೊಂದಿಗೆ ಪ್ರೀತಿಯ ನೆಪದಲ್ಲಿ ಸಲುಗೆಯಿತ್ತು ಎನ್ನಲಾಗಿದೆ. ಒಡವೆಗಳ ಜೊತೆ ಆತನೊಂದಿಗೆ ಪರಾರಿಯಾಗಿರುವ ಬಗ್ಗೆ ಸಂಶಯಪಡಿಸಿ ಆಕೆಯ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore Woman flees with her boyfriend by stealing jewellery of her younger sister. A case has been registered at the surathkal police station.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm