ಬ್ರೇಕಿಂಗ್ ನ್ಯೂಸ್
30-07-21 12:18 pm Mangaluru Correspondent ಕ್ರೈಂ
ಮಂಗಳೂರು, ಜುಲೈ 30: ಮನೆಯ ಕಪಾಟಿನಲ್ಲಿರಿಸಿದ್ದ ತಂಗಿಯ ಒಡವೆಗಳನ್ನು ದೋಚಿಕೊಂಡು ಅಕ್ಕನೇ ತನ್ನ ಪ್ರಿಯತಮನ ಜೊತೆ ಪರಾರಿಯಾಗಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದ್ದು ಈ ಬಗ್ಗೆ ಮಗಳನ್ನು ಹುಡುಕಿಕೊಡುವಂತೆ ತಂದೆಯೇ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ನಿವಾಸಿ ಇಬ್ರಾಹಿಂ ಅವರ ಹಿರಿಯ ಮಗಳು ರಿಜ್ವಾನಾ(25) ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು, ಗಂಡ ದುಬೈನಲ್ಲಿರುವ ಕಾರಣ ತಂದೆಯ ಮನೆಯಲ್ಲಿಯೇ ಉಳಿದಿದ್ದಳು. ಆಕೆಯ ತಂಗಿ ರಾಝ್ವಿನಾಳಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಮದುವೆಯಾಗಿದ್ದು, ಆಕೆಯ ಒಡವೆಗಳನ್ನು ತಂದೆಯ ಮನೆಯಲ್ಲಿಯೇ ಇರಿಸಿದ್ದಳು. ಒಡವೆಗಳಿದ್ದ ಕಪಾಟಿನ ಕೀ ಹಿರಿಯ ಮಗಳಾದ ರಿಜ್ವಾನಾ ಬಳಿ ಇತ್ತು. ಇತ್ತೀಚೆಗೆ ತಂದೆ ಇಬ್ರಾಹಿಂ ತನಗೆ ಹಣದ ಅವಶ್ಯಕತೆ ಇದ್ದ ಕಾರಣ ಒಡವೆಗಳನ್ನು ಅಡವಿರಿಸಲೆಂದು ಜುಲೈ 26ರಂದು ಕಪಾಟಿನ ಕೀ ಕೇಳಿದ್ದರು. ತಂದೆ ಕೀ ಕೇಳಿದ್ದಕ್ಕೆ ರಿಜ್ವಾನಾ ಕೊಡಲು ನಿರಾಕರಿಸಿದ್ದಳು. ಆನಂತರ ಶಾಲೆಗೆಂದು ಮನೆಯಿಂದ ತೆರಳಿದ್ದಳು.

ಆದರೆ, ತಾನು ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಚೊಕ್ಕಬೆಟ್ಟಿನ ಜಾಮಿಯಾ ಇಂಗ್ಲೀಷ್ ಮೀಡಿಯಂ ಶಾಲೆಗೆ ಹೋದವಳು ವಾಪಾಸ್ ಮನೆಗೆ ಬರಲಿಲ್ಲ. ಆಕೆಯ ಮೊಬೈಲ್ ಪೋನ್ ಕೂಡ ಸ್ವಿಚ್ ಆಫ್ ಆಗಿದ್ದು ನಾಪತ್ತೆಯಾಗಿದ್ದಳು. ಮರುದಿನ ತಂದೆ ಸಂಶಯ ಬಂದು ಕಪಾಟಿನ ಬಾಗಿಲು ಒಡೆದು ನೋಡಿದ್ದು ಒಡವೆಗಳು ಕಾಣೆಯಾಗಿದ್ದವು.
ರಿಜ್ವಾನಾಗೆ ಗಂಡ ವಿದೇಶದಲ್ಲಿದ್ದರೂ, ಕೃಷ್ಣಾಪುರದ ಬಶೀರ್ ಎಂಬಾತನೊಂದಿಗೆ ಪ್ರೀತಿಯ ನೆಪದಲ್ಲಿ ಸಲುಗೆಯಿತ್ತು ಎನ್ನಲಾಗಿದೆ. ಒಡವೆಗಳ ಜೊತೆ ಆತನೊಂದಿಗೆ ಪರಾರಿಯಾಗಿರುವ ಬಗ್ಗೆ ಸಂಶಯಪಡಿಸಿ ಆಕೆಯ ತಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Mangalore Woman flees with her boyfriend by stealing jewellery of her younger sister. A case has been registered at the surathkal police station.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am