ಬ್ರೇಕಿಂಗ್ ನ್ಯೂಸ್
04-09-20 07:01 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಕೊನೆಗೂ ಸಿಸಿಬಿ ಪೊಲೀಸರು ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಯನ್ನು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು ಈಗ ಅಧಿಕೃತವಾಗಿ ಬಂಧಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಸಿಸಿಬಿ ಆಯುಕ್ತ ಸಂದೀಪ್ ಪಾಟೀಲ್ ಚಿತ್ರನಟಿಯ ಬಂಧನವನ್ನು ಖಚಿತಪಡಿಸಿದ್ದಾರೆ.
ಈ ನಡುವೆ, ಬೆಂಗಳೂರಿನ ಸಿಸಿಎಚ್ ಕೋರ್ಟಿಗೆ ರಾಗಿಣಿ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಈ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದ್ದು ತುಪ್ಪದ ನಟಿ ರಾಗಿಣಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತು. ಈ ನಡುವೆ, ಸುದೀರ್ಘ ಏಳು ಗಂಟೆಗಳ ವಿಚಾರಣೆ ನಡೆಸಿದ ಎಸಿಪಿ ಗೌತಮ್ ನೇತೃತ್ವದ ತಂಡ, ನಟಿ ರಾಗಿಣಿ ಬಂಧಿಸುವ ಅಗತ್ಯವನ್ನು ಮೇಲಧಿಕಾರಿಗಳಿಗೆ ವಿವರಣೆ ನೀಡಿದ್ದಾರೆ. ಆಪ್ತ ರವಿಶಂಕರ್ ಮತ್ತು ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯನ್ನು ಪ್ರಬಲ ಸಾಕ್ಷ್ಯವಾಗಿ ಪರಿಗಣಿಸಿದ ಸಿಸಿಬಿ ತಂಡ ರಾಗಿಣಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸುವ ಸುಳಿವು ನೀಡಿದೆ.
ಇಂದು ಬೆಳಗ್ಗೆ ಯಲಹಂಕದ ರಾಗಿಣಿ ಮನೆಗೆ ರೈಡ್ ಮಾಡಿದ್ದ ಪೊಲೀಸರಿಗೆ ಅಲ್ಲಿ ಗಾಂಜಾ ಸ್ಟಾಕ್ ಸಿಕ್ಕಿತ್ತು ಎನ್ನಲಾಗ್ತಿದೆ. ಇವೆಲ್ಲ ಕಾರಣದಿಂದ ಬಂಧಿಸಿರುವ ಪೊಲೀಸರು, ಇನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಮತ್ತಷ್ಟು ದಿನಗಳ ಕಾಲ ವಿಚಾರಣೆಗಾಗಿ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm