ಬ್ರೇಕಿಂಗ್ ನ್ಯೂಸ್
31-07-21 03:19 pm Mangaluru Correspondent ಕ್ರೈಂ
ಬಂಟ್ವಾಳ, ಜುಲೈ 31: ಮಂಗಳೂರಿನಿಂದ ಹಾಸನ ಭಾಗಕ್ಕೆ ಡೀಸೆಲ್ ಸರಬರಾಜು ಮಾಡುವ ಪೈಪ್ ಲೈನಿಗೆ ಕನ್ನ ಕೊರೆದು ಡೀಸೆಲ್ ಕಳವು ಮಾಡುತ್ತಿದ್ದ ಜಾಲವನ್ನು ಬಂಟ್ವಾಳ ಪೊಲೀಸರು ಪತ್ತೆ ಮಾಡಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಹಿಂದುಸ್ತಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಡೀಸೆಲ್ ಪೈಪ್ ಲೈನ್ ಮಂಗಳೂರಿನಿಂದ ಬಂಟ್ವಾಳ ಮೂಲಕ ಹಾದು ಹೋಗಿದ್ದು, ಅದಕ್ಕೆ ಬಂಟ್ವಾಳ ತಾಲೂಕಿನ ಸೊರ್ನಾಡು ಎಂಬಲ್ಲಿ ಖಾಸಗಿ ವ್ಯಕ್ತಿಯ ಜಮೀನಿನಲ್ಲಿ ಕನ್ನ ಕೊರೆಯಲಾಗಿದೆ. ಡೀಸೆಲ್ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಕಂಡುಬಂದಿದ್ದರಿಂದ ಹಿಂದುಸ್ತಾನ್ ಕಂಪನಿಯ ಅಧಿಕಾರಿಗಳು ಪತ್ತೆ ಕಾರ್ಯ ಮಾಡಿದ್ದರು. ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಸೊರ್ನಾಡು ಎಂಬಲ್ಲಿ ಸೋರಿಕೆ ಆಗುತ್ತಿರುವ ಶಂಕೆಯಿಂದ ಪೊಲೀಸರಿಗೆ ದೂರು ನೀಡಿದ್ದರು.


ಜುಲೈ 11ರಿಂದ 30ರ ನಡುವೆ ಡೀಸೆಲ್ ಪೂರೈಕೆಯಲ್ಲಿ ಒಂದು ಸಾವಿರ ಲೀಟರ್ ನಷ್ಟು ವ್ಯತ್ಯಾಸ ಕಂಡುಬಂದಿದ್ದು, ಇದರಿಂದ ಕಂಪನಿಯ ತಂತ್ರಜ್ಞರು ಮೆಟಾಲಿಕ್ ತಂತ್ರಜ್ಞಾನದ ಮೂಲಕ ಪತ್ತೆ ಕಾರ್ಯ ಮಾಡಿದ್ದಾರೆ. ಶಂಕೆಯ ಮೇರೆಗೆ ಸೊರ್ನಾಡು ಎಂಬಲ್ಲಿ ಐವನ್ ಎಂಬವರಿಗೆ ಸೇರಿದ ಖಾಸಗಿ ಜಮೀನಿನಲ್ಲಿ ಪೈಪ್ ಲೈನ್ ಹಾದು ಹೋಗುತ್ತಿರುವ ಜಾಗದಲ್ಲಿ ಪರಿಶೀಲನೆ ನಡೆಸಿದಾಗ ಕನ್ನ ಹಾಕಿರುವುದು ಕಂಡುಬಂದಿದೆ.
ಆರೋಪಿಗಳು 20 ಅಡಿ ಆಳದಲ್ಲಿ ಹಾದು ಹೋಗಿರುವ ಪೈಪ್ ಲೈನನ್ನು ಕೊರೆದಿದ್ದು, ಅದಕ್ಕೆ ಒಂದೂವರೆ ಇಂಚಿನ ಇನ್ನೊಂದು ಪೈಪ್ ಸಿಕ್ಕಿಸಿ 50 ಮೀಟರ್ ದೂರದಲ್ಲಿ ಮಣ್ಣಿನಡಿಯಲ್ಲೇ ಸಾಗಿಸಿ ಹೊರಬಿಟ್ಟಿರುವ ಪೈಪ್ ನಲ್ಲಿ ಗೇಟ್ ವಾಲ್ ಹಾಕಿರುವುದು ಕಂಡುಬಂದಿದೆ. ಡೀಸೆಲ್ ಕಳವು ಮಾಡುತ್ತಿದ್ದ ಜಾಗವು ಐವನ್ ಎಂಬವರಿಗೆ ಸೇರಿರುವುದರಿಂದ ಕೃತ್ಯದಲ್ಲಿ ಐವನ್ ಪಾತ್ರ ಇರುವ ಅನುಮಾನ ವ್ಯಕ್ತವಾಗಿದೆ. ಪೈಪ್ ಲೈನ್ ಒಡೆದು ಹಾನಿಯಾಗಿದ್ದರಿಂದ ಇದಕ್ಕೆ 90 ಸಾವಿರ ರೂ. ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳವಾದ ಡೀಸೆಲ್ ಮೌಲ್ಯದ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವಾರು ಸಮಯಗಳಿಂದ ಈ ರೀತಿ ವ್ಯವಸ್ಥಿತವಾಗಿ ಡೀಸೆಲ್ ಕಳವು ಜಾಲ ನಡೆಯುತ್ತಿರುವ ಶಂಕೆಯಿದ್ದು, ಇದರಲ್ಲಿ ಹಲವರು ಕೈಯಾಡಿಸಿರುವ ಸಾಧ್ಯತೆಯಿದೆ. ಡೀಸೆಲ್ ಕಳವು ಮಾಡಿ, ಟ್ಯಾಂಕರಿನಲ್ಲೇ ಅಲ್ಲಿಂದ ಬೇರೆ ಕಡೆಗೆ ಸಾಗಿಸಿರುವ ಅನುಮಾನವಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
An incident of diesel theft by rigging a hole in the underground pipeline of MRPL came to light on Friday July 30. Diesel was reportedly stolen from the pipeline which supplies diesel to Hassan. The incident was reported at Arbi, Sornadu here. Bantwal rural police have started a probe.
08-12-25 06:58 pm
HK News Desk
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm