ಬ್ರೇಕಿಂಗ್ ನ್ಯೂಸ್
31-07-21 03:19 pm Mangaluru Correspondent ಕ್ರೈಂ
ಬಂಟ್ವಾಳ, ಜುಲೈ 31: ಮಂಗಳೂರಿನಿಂದ ಹಾಸನ ಭಾಗಕ್ಕೆ ಡೀಸೆಲ್ ಸರಬರಾಜು ಮಾಡುವ ಪೈಪ್ ಲೈನಿಗೆ ಕನ್ನ ಕೊರೆದು ಡೀಸೆಲ್ ಕಳವು ಮಾಡುತ್ತಿದ್ದ ಜಾಲವನ್ನು ಬಂಟ್ವಾಳ ಪೊಲೀಸರು ಪತ್ತೆ ಮಾಡಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಹಿಂದುಸ್ತಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಡೀಸೆಲ್ ಪೈಪ್ ಲೈನ್ ಮಂಗಳೂರಿನಿಂದ ಬಂಟ್ವಾಳ ಮೂಲಕ ಹಾದು ಹೋಗಿದ್ದು, ಅದಕ್ಕೆ ಬಂಟ್ವಾಳ ತಾಲೂಕಿನ ಸೊರ್ನಾಡು ಎಂಬಲ್ಲಿ ಖಾಸಗಿ ವ್ಯಕ್ತಿಯ ಜಮೀನಿನಲ್ಲಿ ಕನ್ನ ಕೊರೆಯಲಾಗಿದೆ. ಡೀಸೆಲ್ ಪೂರೈಕೆಯಲ್ಲಿ ಭಾರೀ ವ್ಯತ್ಯಯ ಕಂಡುಬಂದಿದ್ದರಿಂದ ಹಿಂದುಸ್ತಾನ್ ಕಂಪನಿಯ ಅಧಿಕಾರಿಗಳು ಪತ್ತೆ ಕಾರ್ಯ ಮಾಡಿದ್ದರು. ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಸೊರ್ನಾಡು ಎಂಬಲ್ಲಿ ಸೋರಿಕೆ ಆಗುತ್ತಿರುವ ಶಂಕೆಯಿಂದ ಪೊಲೀಸರಿಗೆ ದೂರು ನೀಡಿದ್ದರು.


ಜುಲೈ 11ರಿಂದ 30ರ ನಡುವೆ ಡೀಸೆಲ್ ಪೂರೈಕೆಯಲ್ಲಿ ಒಂದು ಸಾವಿರ ಲೀಟರ್ ನಷ್ಟು ವ್ಯತ್ಯಾಸ ಕಂಡುಬಂದಿದ್ದು, ಇದರಿಂದ ಕಂಪನಿಯ ತಂತ್ರಜ್ಞರು ಮೆಟಾಲಿಕ್ ತಂತ್ರಜ್ಞಾನದ ಮೂಲಕ ಪತ್ತೆ ಕಾರ್ಯ ಮಾಡಿದ್ದಾರೆ. ಶಂಕೆಯ ಮೇರೆಗೆ ಸೊರ್ನಾಡು ಎಂಬಲ್ಲಿ ಐವನ್ ಎಂಬವರಿಗೆ ಸೇರಿದ ಖಾಸಗಿ ಜಮೀನಿನಲ್ಲಿ ಪೈಪ್ ಲೈನ್ ಹಾದು ಹೋಗುತ್ತಿರುವ ಜಾಗದಲ್ಲಿ ಪರಿಶೀಲನೆ ನಡೆಸಿದಾಗ ಕನ್ನ ಹಾಕಿರುವುದು ಕಂಡುಬಂದಿದೆ.
ಆರೋಪಿಗಳು 20 ಅಡಿ ಆಳದಲ್ಲಿ ಹಾದು ಹೋಗಿರುವ ಪೈಪ್ ಲೈನನ್ನು ಕೊರೆದಿದ್ದು, ಅದಕ್ಕೆ ಒಂದೂವರೆ ಇಂಚಿನ ಇನ್ನೊಂದು ಪೈಪ್ ಸಿಕ್ಕಿಸಿ 50 ಮೀಟರ್ ದೂರದಲ್ಲಿ ಮಣ್ಣಿನಡಿಯಲ್ಲೇ ಸಾಗಿಸಿ ಹೊರಬಿಟ್ಟಿರುವ ಪೈಪ್ ನಲ್ಲಿ ಗೇಟ್ ವಾಲ್ ಹಾಕಿರುವುದು ಕಂಡುಬಂದಿದೆ. ಡೀಸೆಲ್ ಕಳವು ಮಾಡುತ್ತಿದ್ದ ಜಾಗವು ಐವನ್ ಎಂಬವರಿಗೆ ಸೇರಿರುವುದರಿಂದ ಕೃತ್ಯದಲ್ಲಿ ಐವನ್ ಪಾತ್ರ ಇರುವ ಅನುಮಾನ ವ್ಯಕ್ತವಾಗಿದೆ. ಪೈಪ್ ಲೈನ್ ಒಡೆದು ಹಾನಿಯಾಗಿದ್ದರಿಂದ ಇದಕ್ಕೆ 90 ಸಾವಿರ ರೂ. ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳವಾದ ಡೀಸೆಲ್ ಮೌಲ್ಯದ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವಾರು ಸಮಯಗಳಿಂದ ಈ ರೀತಿ ವ್ಯವಸ್ಥಿತವಾಗಿ ಡೀಸೆಲ್ ಕಳವು ಜಾಲ ನಡೆಯುತ್ತಿರುವ ಶಂಕೆಯಿದ್ದು, ಇದರಲ್ಲಿ ಹಲವರು ಕೈಯಾಡಿಸಿರುವ ಸಾಧ್ಯತೆಯಿದೆ. ಡೀಸೆಲ್ ಕಳವು ಮಾಡಿ, ಟ್ಯಾಂಕರಿನಲ್ಲೇ ಅಲ್ಲಿಂದ ಬೇರೆ ಕಡೆಗೆ ಸಾಗಿಸಿರುವ ಅನುಮಾನವಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
An incident of diesel theft by rigging a hole in the underground pipeline of MRPL came to light on Friday July 30. Diesel was reportedly stolen from the pipeline which supplies diesel to Hassan. The incident was reported at Arbi, Sornadu here. Bantwal rural police have started a probe.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm