ಬ್ರೇಕಿಂಗ್ ನ್ಯೂಸ್
31-07-21 10:19 pm Mangaluru Correspondent ಕ್ರೈಂ
ಬೆಂಗಳೂರು, ಜುಲೈ 31: ಸಿಎಂ ಬಸವರಾಜ್ ಬೊಮ್ಮಾಯಿ ಸರಕಾರದಲ್ಲಿ ಸಚಿವರಾಗುವ ಮಂದಿ ಕಳಂಕ ರಹಿತರು ಆಗಿರಬೇಕೆಂದು ಆರೆಸ್ಸೆಸ್ ಹೊಸ ಡಿಮ್ಯಾಂಡ್ ಇಟ್ಟಿದೆ. ಅದರಂತೆ, ಸಿಡಿ ಭಯದಿಂದ ಕೋರ್ಟಿಗೆ ಹೋಗಿರುವ ಶಾಸಕರು ಮತ್ತು ಕಳೆದ ಬಾರಿ ಸಚಿವರಾಗಿದ್ದ ಕೆಲವು ಮಂದಿಗೆ ಸಚಿವ ಸ್ಥಾನ ನೀಡಬಾರದೆಂದು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದ್ದಾಗಿ ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ. ಈ ರೀತಿಯ ವದಂತಿ ಹರಡಿದ್ದರೂ, ಕಳಂಕಿತ ಸಚಿವರನ್ನು ಬಿಟ್ಟು ಸಚಿವ ಸಂಪುಟ ಮಾಡುವುದು ಬಿಜೆಪಿಗೆ ಅಷ್ಟೇ ಕಷ್ಟವೂ ಆಗಲಿದೆ.
ಕಳೆದ ಬಾರಿ ಪ್ರಭಾವಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರ ಸಿಡಿ ಹೊರಬಂದು ರಾಜಕೀಯದಲ್ಲಿ ಭಾರೀ ರಾಡಿ ಎಬ್ಬಿಸಿತ್ತು. ಅದರ ಬೆನ್ನಲ್ಲೇ ಹಲವು ಸಚಿವರು ಮತ್ತು ಕೆಲವು ಶಾಸಕರು ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗದಂತೆ ಕೋರ್ಟ್ ಮೂಲಕ ತಡೆಯಾಜ್ಞೆ ತಂದಿದ್ದರು. ಶಾಸಕರು, ಸಚಿವರು ಈ ರೀತಿ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ಬಿಜೆಪಿಗೆ ಇರಿಸು ಮುರಿಸು ಮಾಡಿತ್ತು. ರಾಷ್ಟ್ರ ಮಟ್ಟದಲ್ಲಿಯೂ ಬಿಜೆಪಿಗೆ ಮುಜುಗರ ಉಂಟು ಮಾಡಿತ್ತು.
ಇದೀಗ ಅಂಥ ಕಳಂಕಿತರು ಯಾರಿದ್ದಾರೆ, ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕೊಡಬಾರದೆಂದು ಆರೆಸ್ಸೆಸ್ ನಾಯಕರು ಕೂಡ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಕಳೆದ ಬಾರಿ ಬಿಜೆಪಿ ಸೇರಿದ್ದ ಬಹುತೇಕ ವಲಸಿಗ ಶಾಸಕರು ತಮ್ಮ ವಿರುದ್ಧ ಮಾಧ್ಯಮದಲ್ಲಿ ಸುದ್ದಿ ಪ್ರಕಟಿಸಬಾರದೆಂದು ಸ್ಟೇ ತಂದಿದ್ದರು. ಅವರನ್ನು ಹೊರತುಪಡಿಸಿ ಬಿಜೆಪಿ ಸರಕಾರದಲ್ಲಿ ಸಂಪುಟ ರಚನೆ ಮಾಡುವುದು ಕಷ್ಟ ಎನ್ನಲಾಗುತ್ತಿದ್ದರೂ, ಹೈಕಮಾಂಡ್ ಮತ್ತು ಆರೆಸ್ಸೆಸ್ ನಾಯಕರ ಸೂಚನೆಯಿಂದಾಗಿ ಸಿಎಂ ಬೊಮ್ಮಾಯಿ ಸಂಕಟದಲ್ಲಿ ಬಿದ್ದಂತಾಗಿದೆ.

ಈ ನಡುವೆ, ಹೊನ್ನಾಳಿ ಶಾಸಕ ಮತ್ತು ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಎಂ.ಪಿ. ರೇಣುಕಾಚಾರ್ಯ ಕೂಡ ಕೋರ್ಟ್ ಸ್ಟೇ ತಂದಿದ್ದು, ತಮ್ಮ ವಿರುದ್ಧ ನಿಂದನಾತ್ಮಕ ಸುದ್ದಿಗಳನ್ನು ಬಿತ್ತರಿಸದಂತೆ ಮಾಧ್ಯಮಗಳ ವಿರುದ್ಧ ತಡೆಯಾಜ್ಞೆ ತಂದಿದ್ದಾರೆ. ಆರೆಸ್ಸೆಸ್ ನಾಯಕರ ಈ ರೀತಿಯ ನಿರ್ಧಾರ ರೇಣುಕಾಚಾರ್ಯ ಕೂಡ ಸಚಿವ ಸ್ಥಾನಕ್ಕೇರದಂತೆ ಬ್ರೇಕ್ ನೀಡಿದಂತಾಗಿದೆ.
Karnataka cabinet expansion CD Fallout 6 Karnataka Ministers Move Seeking Restraint on Defamatory Content
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am