ಬ್ರೇಕಿಂಗ್ ನ್ಯೂಸ್
31-07-21 10:19 pm Mangaluru Correspondent ಕ್ರೈಂ
ಬೆಂಗಳೂರು, ಜುಲೈ 31: ಸಿಎಂ ಬಸವರಾಜ್ ಬೊಮ್ಮಾಯಿ ಸರಕಾರದಲ್ಲಿ ಸಚಿವರಾಗುವ ಮಂದಿ ಕಳಂಕ ರಹಿತರು ಆಗಿರಬೇಕೆಂದು ಆರೆಸ್ಸೆಸ್ ಹೊಸ ಡಿಮ್ಯಾಂಡ್ ಇಟ್ಟಿದೆ. ಅದರಂತೆ, ಸಿಡಿ ಭಯದಿಂದ ಕೋರ್ಟಿಗೆ ಹೋಗಿರುವ ಶಾಸಕರು ಮತ್ತು ಕಳೆದ ಬಾರಿ ಸಚಿವರಾಗಿದ್ದ ಕೆಲವು ಮಂದಿಗೆ ಸಚಿವ ಸ್ಥಾನ ನೀಡಬಾರದೆಂದು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದ್ದಾಗಿ ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ. ಈ ರೀತಿಯ ವದಂತಿ ಹರಡಿದ್ದರೂ, ಕಳಂಕಿತ ಸಚಿವರನ್ನು ಬಿಟ್ಟು ಸಚಿವ ಸಂಪುಟ ಮಾಡುವುದು ಬಿಜೆಪಿಗೆ ಅಷ್ಟೇ ಕಷ್ಟವೂ ಆಗಲಿದೆ.
ಕಳೆದ ಬಾರಿ ಪ್ರಭಾವಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರ ಸಿಡಿ ಹೊರಬಂದು ರಾಜಕೀಯದಲ್ಲಿ ಭಾರೀ ರಾಡಿ ಎಬ್ಬಿಸಿತ್ತು. ಅದರ ಬೆನ್ನಲ್ಲೇ ಹಲವು ಸಚಿವರು ಮತ್ತು ಕೆಲವು ಶಾಸಕರು ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗದಂತೆ ಕೋರ್ಟ್ ಮೂಲಕ ತಡೆಯಾಜ್ಞೆ ತಂದಿದ್ದರು. ಶಾಸಕರು, ಸಚಿವರು ಈ ರೀತಿ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ಬಿಜೆಪಿಗೆ ಇರಿಸು ಮುರಿಸು ಮಾಡಿತ್ತು. ರಾಷ್ಟ್ರ ಮಟ್ಟದಲ್ಲಿಯೂ ಬಿಜೆಪಿಗೆ ಮುಜುಗರ ಉಂಟು ಮಾಡಿತ್ತು.
ಇದೀಗ ಅಂಥ ಕಳಂಕಿತರು ಯಾರಿದ್ದಾರೆ, ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕೊಡಬಾರದೆಂದು ಆರೆಸ್ಸೆಸ್ ನಾಯಕರು ಕೂಡ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಕಳೆದ ಬಾರಿ ಬಿಜೆಪಿ ಸೇರಿದ್ದ ಬಹುತೇಕ ವಲಸಿಗ ಶಾಸಕರು ತಮ್ಮ ವಿರುದ್ಧ ಮಾಧ್ಯಮದಲ್ಲಿ ಸುದ್ದಿ ಪ್ರಕಟಿಸಬಾರದೆಂದು ಸ್ಟೇ ತಂದಿದ್ದರು. ಅವರನ್ನು ಹೊರತುಪಡಿಸಿ ಬಿಜೆಪಿ ಸರಕಾರದಲ್ಲಿ ಸಂಪುಟ ರಚನೆ ಮಾಡುವುದು ಕಷ್ಟ ಎನ್ನಲಾಗುತ್ತಿದ್ದರೂ, ಹೈಕಮಾಂಡ್ ಮತ್ತು ಆರೆಸ್ಸೆಸ್ ನಾಯಕರ ಸೂಚನೆಯಿಂದಾಗಿ ಸಿಎಂ ಬೊಮ್ಮಾಯಿ ಸಂಕಟದಲ್ಲಿ ಬಿದ್ದಂತಾಗಿದೆ.

ಈ ನಡುವೆ, ಹೊನ್ನಾಳಿ ಶಾಸಕ ಮತ್ತು ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಎಂ.ಪಿ. ರೇಣುಕಾಚಾರ್ಯ ಕೂಡ ಕೋರ್ಟ್ ಸ್ಟೇ ತಂದಿದ್ದು, ತಮ್ಮ ವಿರುದ್ಧ ನಿಂದನಾತ್ಮಕ ಸುದ್ದಿಗಳನ್ನು ಬಿತ್ತರಿಸದಂತೆ ಮಾಧ್ಯಮಗಳ ವಿರುದ್ಧ ತಡೆಯಾಜ್ಞೆ ತಂದಿದ್ದಾರೆ. ಆರೆಸ್ಸೆಸ್ ನಾಯಕರ ಈ ರೀತಿಯ ನಿರ್ಧಾರ ರೇಣುಕಾಚಾರ್ಯ ಕೂಡ ಸಚಿವ ಸ್ಥಾನಕ್ಕೇರದಂತೆ ಬ್ರೇಕ್ ನೀಡಿದಂತಾಗಿದೆ.
Karnataka cabinet expansion CD Fallout 6 Karnataka Ministers Move Seeking Restraint on Defamatory Content
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm