ಬ್ರೇಕಿಂಗ್ ನ್ಯೂಸ್
31-07-21 10:19 pm Mangaluru Correspondent ಕ್ರೈಂ
ಬೆಂಗಳೂರು, ಜುಲೈ 31: ಸಿಎಂ ಬಸವರಾಜ್ ಬೊಮ್ಮಾಯಿ ಸರಕಾರದಲ್ಲಿ ಸಚಿವರಾಗುವ ಮಂದಿ ಕಳಂಕ ರಹಿತರು ಆಗಿರಬೇಕೆಂದು ಆರೆಸ್ಸೆಸ್ ಹೊಸ ಡಿಮ್ಯಾಂಡ್ ಇಟ್ಟಿದೆ. ಅದರಂತೆ, ಸಿಡಿ ಭಯದಿಂದ ಕೋರ್ಟಿಗೆ ಹೋಗಿರುವ ಶಾಸಕರು ಮತ್ತು ಕಳೆದ ಬಾರಿ ಸಚಿವರಾಗಿದ್ದ ಕೆಲವು ಮಂದಿಗೆ ಸಚಿವ ಸ್ಥಾನ ನೀಡಬಾರದೆಂದು ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದ್ದಾಗಿ ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ. ಈ ರೀತಿಯ ವದಂತಿ ಹರಡಿದ್ದರೂ, ಕಳಂಕಿತ ಸಚಿವರನ್ನು ಬಿಟ್ಟು ಸಚಿವ ಸಂಪುಟ ಮಾಡುವುದು ಬಿಜೆಪಿಗೆ ಅಷ್ಟೇ ಕಷ್ಟವೂ ಆಗಲಿದೆ.
ಕಳೆದ ಬಾರಿ ಪ್ರಭಾವಿ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರ ಸಿಡಿ ಹೊರಬಂದು ರಾಜಕೀಯದಲ್ಲಿ ಭಾರೀ ರಾಡಿ ಎಬ್ಬಿಸಿತ್ತು. ಅದರ ಬೆನ್ನಲ್ಲೇ ಹಲವು ಸಚಿವರು ಮತ್ತು ಕೆಲವು ಶಾಸಕರು ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗದಂತೆ ಕೋರ್ಟ್ ಮೂಲಕ ತಡೆಯಾಜ್ಞೆ ತಂದಿದ್ದರು. ಶಾಸಕರು, ಸಚಿವರು ಈ ರೀತಿ ಮಾಡಿದ್ದು ಸಾರ್ವಜನಿಕ ವಲಯದಲ್ಲಿ ಬಿಜೆಪಿಗೆ ಇರಿಸು ಮುರಿಸು ಮಾಡಿತ್ತು. ರಾಷ್ಟ್ರ ಮಟ್ಟದಲ್ಲಿಯೂ ಬಿಜೆಪಿಗೆ ಮುಜುಗರ ಉಂಟು ಮಾಡಿತ್ತು.
ಇದೀಗ ಅಂಥ ಕಳಂಕಿತರು ಯಾರಿದ್ದಾರೆ, ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕೊಡಬಾರದೆಂದು ಆರೆಸ್ಸೆಸ್ ನಾಯಕರು ಕೂಡ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಕಳೆದ ಬಾರಿ ಬಿಜೆಪಿ ಸೇರಿದ್ದ ಬಹುತೇಕ ವಲಸಿಗ ಶಾಸಕರು ತಮ್ಮ ವಿರುದ್ಧ ಮಾಧ್ಯಮದಲ್ಲಿ ಸುದ್ದಿ ಪ್ರಕಟಿಸಬಾರದೆಂದು ಸ್ಟೇ ತಂದಿದ್ದರು. ಅವರನ್ನು ಹೊರತುಪಡಿಸಿ ಬಿಜೆಪಿ ಸರಕಾರದಲ್ಲಿ ಸಂಪುಟ ರಚನೆ ಮಾಡುವುದು ಕಷ್ಟ ಎನ್ನಲಾಗುತ್ತಿದ್ದರೂ, ಹೈಕಮಾಂಡ್ ಮತ್ತು ಆರೆಸ್ಸೆಸ್ ನಾಯಕರ ಸೂಚನೆಯಿಂದಾಗಿ ಸಿಎಂ ಬೊಮ್ಮಾಯಿ ಸಂಕಟದಲ್ಲಿ ಬಿದ್ದಂತಾಗಿದೆ.

ಈ ನಡುವೆ, ಹೊನ್ನಾಳಿ ಶಾಸಕ ಮತ್ತು ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಎಂ.ಪಿ. ರೇಣುಕಾಚಾರ್ಯ ಕೂಡ ಕೋರ್ಟ್ ಸ್ಟೇ ತಂದಿದ್ದು, ತಮ್ಮ ವಿರುದ್ಧ ನಿಂದನಾತ್ಮಕ ಸುದ್ದಿಗಳನ್ನು ಬಿತ್ತರಿಸದಂತೆ ಮಾಧ್ಯಮಗಳ ವಿರುದ್ಧ ತಡೆಯಾಜ್ಞೆ ತಂದಿದ್ದಾರೆ. ಆರೆಸ್ಸೆಸ್ ನಾಯಕರ ಈ ರೀತಿಯ ನಿರ್ಧಾರ ರೇಣುಕಾಚಾರ್ಯ ಕೂಡ ಸಚಿವ ಸ್ಥಾನಕ್ಕೇರದಂತೆ ಬ್ರೇಕ್ ನೀಡಿದಂತಾಗಿದೆ.
Karnataka cabinet expansion CD Fallout 6 Karnataka Ministers Move Seeking Restraint on Defamatory Content
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am