ಬ್ರೇಕಿಂಗ್ ನ್ಯೂಸ್
03-08-21 04:00 pm Headline Karnataka News Network ಕ್ರೈಂ
ತುಮಕೂರು, ಆಗಸ್ಟ್ 3 : ಆರು ವರ್ಷಗಳ ಹಿಂದೆ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಮದರಸಾ ಶಿಕ್ಷಕನಿಗೆ 11 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 30 ಸಾವಿರ ರೂ. ದಂಡ ವಿಧಿಸಿ ತುಮಕೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಉತ್ತರ ಪ್ರದೇಶ ಮೂಲದ ಮಫ್ತಿ ಮುಷರಫ್ ಶಿಕ್ಷೆಗೆ ಗುರಿಯಾಗಿರುವ ಮದರಸಾ ಶಿಕ್ಷಕ. ತುಮಕೂರು ತಾಲೂಕಿನ ಅಮಲಾಪುರ ಗ್ರಾಮದ ಮದರಸಾದಲ್ಲಿ ಶಿಕ್ಷಕನಾಗಿದ್ದ ಈತ, 2015ರ ಏಪ್ರಿಲ್ 17ರಂದು 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ. ಪ್ರಕರಣ ದಾಖಲಾಗಿ ಆರೋಪ ಸಾಬೀತಾದ ಕಾರಣ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎನ್. ಕೃಷ್ಣಯ್ಯ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ.

ಅಲ್ಲದೆ ಸಂತ್ರಸ್ತ ಬಾಲಕನಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಆದೇಶ ನೀಡಿದ್ದಾರೆ. ಅಮಲಾಪುರ ಗ್ರಾಮದ ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಮಫ್ತಿ ಮುಷರಕ್, 2015ರ ಏಪ್ರಿಲ್ 17ರಂದು ರೈಲ್ವೆ ಟಿಕೆಟ್ ಬುಕ್ಕಿಂಗ್ ಮಾಡಲು ಕನ್ನಡ ಭಾಷೆ ಅರ್ಥವಾಗದ ಕಾರಣ ಸಹಾಯಕ್ಕೆಂದು ಬಾಲಕನನ್ನು ರೈಲ್ವೆ ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದ. ಬಳಿಕ ತನ್ನ ಬೈಕ್ನ ಪೆಟ್ರೋಲ್ ಖಾಲಿಯಾಗಿದೆ, ಲಾಡ್ಜ್ನಲ್ಲಿ ಉಳಿಯೋಣ ಎಂದು ಬಾಲಕನನ್ನು ಬಲವಂತದಿಂದ ರೈಲ್ವೇ ನಿಲ್ದಾಣ ಸಮೀಪದ ಲಾಡ್ಜ್ಗೆ ಕರೆದುಕೊಂಡು ಹೋಗಿದ್ದ.
ಅಲ್ಲಿ ಬಾಲಕನ ಮೇಲೆ ದೌರ್ಜನ್ಯ ಎಸಗಿದ್ದ. ಮರುದಿನ ಬೈಕ್ನಲ್ಲಿ ಬಾಲಕನನ್ನು ಮರಳಿ ಹಾಸ್ಟೆಲ್ಗೆ ಬಿಟ್ಟು, ಯಾರಿಗೂ ವಿಚಾರ ಹೇಳದಂತೆ ಆತನಿಗೆ ಬೆದರಿಕೆ ಹಾಕಿ ಅದೇ ದಿನ ಮಧ್ಯಾಹ್ನ ಲಾಡ್ಜ್ ಖಾಲಿ ಮಾಡಿಕೊಂಡು ಪರಾರಿಯಾಗಿದ್ದ. ಆದರೆ ಲಾಡ್ಜ್ ಪ್ರವೇಶ ಸಂದರ್ಭದಲ್ಲಿ ರಿಜಿಸ್ಟ್ರಾರ್ ಬುಕ್ ನಲ್ಲಿ ಆರೋಪಿ ತನ್ನ ಹೆಸರು ಮತ್ತು ಹುಡುಗನ ಹೆಸರನ್ನು ಉಲ್ಲೇಖಿಸಿದ್ದ. ಖಾಲಿ ಮಾಡುವಾಗ ಆರೋಪಿಯ ಹೆಸರು ಮಾತ್ರ ಬರೆದಿರುವುದು ದಾಖಲಾಗಿತ್ತು.

ಘಟನೆ ನಡೆದ ನಂತರ ಬಾಲಕನನ್ನು ಆತನ ತಾಯಿ ಭೇಟಿಯಾದ ಸಮಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ವಿಷಯ ಬೆಳಕಿಗೆ ಬಂದಿತ್ತು. ತಾಯಿಯ ಮುಂದೆ ಬಾಲಕ ತನ್ನ ನೋವನ್ನು ಹೇಳಿಕೊಂಡಿದ್ದನು. ಅಲ್ಲದೆ, ಹಾಸ್ಟೆಲ್ನಿಂದ ತನ್ನನ್ನು ಕರೆದು ಹೋಗುವಂತೆ ಕೇಳಿಕೊಂಡಿದ್ದ. ಈ ಬಗ್ಗೆ ಬಾಲಕನ ತಾಯಿ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿದ ಪೊಲೀಸರು, ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377(ಅಸಹಜ ಲೈಂಗಿಕತೆ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ನ್ಯಾಯಾಲಯವು ವಿಚಾರಣೆ ವೇಳೆ 11 ಮಂದಿ ಪ್ರತ್ಯಕ್ಷ ದರ್ಶಿಗಳ ಸಾಕ್ಷಿಯನ್ನು ಪಡೆದಿದ್ದು, ದೌರ್ಜನ್ಯಕ್ಕೊಳಗಾದ ಬಾಲಕ ಮತ್ತು ತಾಯಿಯ ಹೇಳಿಕೆಗಳು ನಿರ್ಣಾಯಕವೆಂದು ಪರಿಗಣಿಸಿ, ಅಪರಾಧಿ ಮದರಸಾ ಶಿಕ್ಷಕನಿಗೆ ಶಿಕ್ಷೆ ನೀಡಿದೆ. ಪ್ರಕರಣದಲ್ಲಿ ಸಂತ್ರಸ್ತ ಬಾಲಕನ ಪರವಾಗಿ ಸರ್ಕಾರಿ ಅಭಿಯೋಜಕಿ ಗಾಯತ್ರಿ ವಾದ ಮಂಡಿಸಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am