ಬ್ರೇಕಿಂಗ್ ನ್ಯೂಸ್
03-08-21 04:00 pm Headline Karnataka News Network ಕ್ರೈಂ
ತುಮಕೂರು, ಆಗಸ್ಟ್ 3 : ಆರು ವರ್ಷಗಳ ಹಿಂದೆ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಮದರಸಾ ಶಿಕ್ಷಕನಿಗೆ 11 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 30 ಸಾವಿರ ರೂ. ದಂಡ ವಿಧಿಸಿ ತುಮಕೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಉತ್ತರ ಪ್ರದೇಶ ಮೂಲದ ಮಫ್ತಿ ಮುಷರಫ್ ಶಿಕ್ಷೆಗೆ ಗುರಿಯಾಗಿರುವ ಮದರಸಾ ಶಿಕ್ಷಕ. ತುಮಕೂರು ತಾಲೂಕಿನ ಅಮಲಾಪುರ ಗ್ರಾಮದ ಮದರಸಾದಲ್ಲಿ ಶಿಕ್ಷಕನಾಗಿದ್ದ ಈತ, 2015ರ ಏಪ್ರಿಲ್ 17ರಂದು 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ. ಪ್ರಕರಣ ದಾಖಲಾಗಿ ಆರೋಪ ಸಾಬೀತಾದ ಕಾರಣ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎನ್. ಕೃಷ್ಣಯ್ಯ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ.

ಅಲ್ಲದೆ ಸಂತ್ರಸ್ತ ಬಾಲಕನಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಆದೇಶ ನೀಡಿದ್ದಾರೆ. ಅಮಲಾಪುರ ಗ್ರಾಮದ ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಮಫ್ತಿ ಮುಷರಕ್, 2015ರ ಏಪ್ರಿಲ್ 17ರಂದು ರೈಲ್ವೆ ಟಿಕೆಟ್ ಬುಕ್ಕಿಂಗ್ ಮಾಡಲು ಕನ್ನಡ ಭಾಷೆ ಅರ್ಥವಾಗದ ಕಾರಣ ಸಹಾಯಕ್ಕೆಂದು ಬಾಲಕನನ್ನು ರೈಲ್ವೆ ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದ. ಬಳಿಕ ತನ್ನ ಬೈಕ್ನ ಪೆಟ್ರೋಲ್ ಖಾಲಿಯಾಗಿದೆ, ಲಾಡ್ಜ್ನಲ್ಲಿ ಉಳಿಯೋಣ ಎಂದು ಬಾಲಕನನ್ನು ಬಲವಂತದಿಂದ ರೈಲ್ವೇ ನಿಲ್ದಾಣ ಸಮೀಪದ ಲಾಡ್ಜ್ಗೆ ಕರೆದುಕೊಂಡು ಹೋಗಿದ್ದ.
ಅಲ್ಲಿ ಬಾಲಕನ ಮೇಲೆ ದೌರ್ಜನ್ಯ ಎಸಗಿದ್ದ. ಮರುದಿನ ಬೈಕ್ನಲ್ಲಿ ಬಾಲಕನನ್ನು ಮರಳಿ ಹಾಸ್ಟೆಲ್ಗೆ ಬಿಟ್ಟು, ಯಾರಿಗೂ ವಿಚಾರ ಹೇಳದಂತೆ ಆತನಿಗೆ ಬೆದರಿಕೆ ಹಾಕಿ ಅದೇ ದಿನ ಮಧ್ಯಾಹ್ನ ಲಾಡ್ಜ್ ಖಾಲಿ ಮಾಡಿಕೊಂಡು ಪರಾರಿಯಾಗಿದ್ದ. ಆದರೆ ಲಾಡ್ಜ್ ಪ್ರವೇಶ ಸಂದರ್ಭದಲ್ಲಿ ರಿಜಿಸ್ಟ್ರಾರ್ ಬುಕ್ ನಲ್ಲಿ ಆರೋಪಿ ತನ್ನ ಹೆಸರು ಮತ್ತು ಹುಡುಗನ ಹೆಸರನ್ನು ಉಲ್ಲೇಖಿಸಿದ್ದ. ಖಾಲಿ ಮಾಡುವಾಗ ಆರೋಪಿಯ ಹೆಸರು ಮಾತ್ರ ಬರೆದಿರುವುದು ದಾಖಲಾಗಿತ್ತು.

ಘಟನೆ ನಡೆದ ನಂತರ ಬಾಲಕನನ್ನು ಆತನ ತಾಯಿ ಭೇಟಿಯಾದ ಸಮಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ವಿಷಯ ಬೆಳಕಿಗೆ ಬಂದಿತ್ತು. ತಾಯಿಯ ಮುಂದೆ ಬಾಲಕ ತನ್ನ ನೋವನ್ನು ಹೇಳಿಕೊಂಡಿದ್ದನು. ಅಲ್ಲದೆ, ಹಾಸ್ಟೆಲ್ನಿಂದ ತನ್ನನ್ನು ಕರೆದು ಹೋಗುವಂತೆ ಕೇಳಿಕೊಂಡಿದ್ದ. ಈ ಬಗ್ಗೆ ಬಾಲಕನ ತಾಯಿ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿದ ಪೊಲೀಸರು, ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377(ಅಸಹಜ ಲೈಂಗಿಕತೆ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ನ್ಯಾಯಾಲಯವು ವಿಚಾರಣೆ ವೇಳೆ 11 ಮಂದಿ ಪ್ರತ್ಯಕ್ಷ ದರ್ಶಿಗಳ ಸಾಕ್ಷಿಯನ್ನು ಪಡೆದಿದ್ದು, ದೌರ್ಜನ್ಯಕ್ಕೊಳಗಾದ ಬಾಲಕ ಮತ್ತು ತಾಯಿಯ ಹೇಳಿಕೆಗಳು ನಿರ್ಣಾಯಕವೆಂದು ಪರಿಗಣಿಸಿ, ಅಪರಾಧಿ ಮದರಸಾ ಶಿಕ್ಷಕನಿಗೆ ಶಿಕ್ಷೆ ನೀಡಿದೆ. ಪ್ರಕರಣದಲ್ಲಿ ಸಂತ್ರಸ್ತ ಬಾಲಕನ ಪರವಾಗಿ ಸರ್ಕಾರಿ ಅಭಿಯೋಜಕಿ ಗಾಯತ್ರಿ ವಾದ ಮಂಡಿಸಿದ್ದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm