ಬ್ರೇಕಿಂಗ್ ನ್ಯೂಸ್
03-08-21 04:00 pm Headline Karnataka News Network ಕ್ರೈಂ
ತುಮಕೂರು, ಆಗಸ್ಟ್ 3 : ಆರು ವರ್ಷಗಳ ಹಿಂದೆ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಮದರಸಾ ಶಿಕ್ಷಕನಿಗೆ 11 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 30 ಸಾವಿರ ರೂ. ದಂಡ ವಿಧಿಸಿ ತುಮಕೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಉತ್ತರ ಪ್ರದೇಶ ಮೂಲದ ಮಫ್ತಿ ಮುಷರಫ್ ಶಿಕ್ಷೆಗೆ ಗುರಿಯಾಗಿರುವ ಮದರಸಾ ಶಿಕ್ಷಕ. ತುಮಕೂರು ತಾಲೂಕಿನ ಅಮಲಾಪುರ ಗ್ರಾಮದ ಮದರಸಾದಲ್ಲಿ ಶಿಕ್ಷಕನಾಗಿದ್ದ ಈತ, 2015ರ ಏಪ್ರಿಲ್ 17ರಂದು 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ. ಪ್ರಕರಣ ದಾಖಲಾಗಿ ಆರೋಪ ಸಾಬೀತಾದ ಕಾರಣ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎನ್. ಕೃಷ್ಣಯ್ಯ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ.

ಅಲ್ಲದೆ ಸಂತ್ರಸ್ತ ಬಾಲಕನಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಆದೇಶ ನೀಡಿದ್ದಾರೆ. ಅಮಲಾಪುರ ಗ್ರಾಮದ ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ಮಫ್ತಿ ಮುಷರಕ್, 2015ರ ಏಪ್ರಿಲ್ 17ರಂದು ರೈಲ್ವೆ ಟಿಕೆಟ್ ಬುಕ್ಕಿಂಗ್ ಮಾಡಲು ಕನ್ನಡ ಭಾಷೆ ಅರ್ಥವಾಗದ ಕಾರಣ ಸಹಾಯಕ್ಕೆಂದು ಬಾಲಕನನ್ನು ರೈಲ್ವೆ ನಿಲ್ದಾಣಕ್ಕೆ ಕರೆದುಕೊಂಡು ಹೋಗಿದ್ದ. ಬಳಿಕ ತನ್ನ ಬೈಕ್ನ ಪೆಟ್ರೋಲ್ ಖಾಲಿಯಾಗಿದೆ, ಲಾಡ್ಜ್ನಲ್ಲಿ ಉಳಿಯೋಣ ಎಂದು ಬಾಲಕನನ್ನು ಬಲವಂತದಿಂದ ರೈಲ್ವೇ ನಿಲ್ದಾಣ ಸಮೀಪದ ಲಾಡ್ಜ್ಗೆ ಕರೆದುಕೊಂಡು ಹೋಗಿದ್ದ.
ಅಲ್ಲಿ ಬಾಲಕನ ಮೇಲೆ ದೌರ್ಜನ್ಯ ಎಸಗಿದ್ದ. ಮರುದಿನ ಬೈಕ್ನಲ್ಲಿ ಬಾಲಕನನ್ನು ಮರಳಿ ಹಾಸ್ಟೆಲ್ಗೆ ಬಿಟ್ಟು, ಯಾರಿಗೂ ವಿಚಾರ ಹೇಳದಂತೆ ಆತನಿಗೆ ಬೆದರಿಕೆ ಹಾಕಿ ಅದೇ ದಿನ ಮಧ್ಯಾಹ್ನ ಲಾಡ್ಜ್ ಖಾಲಿ ಮಾಡಿಕೊಂಡು ಪರಾರಿಯಾಗಿದ್ದ. ಆದರೆ ಲಾಡ್ಜ್ ಪ್ರವೇಶ ಸಂದರ್ಭದಲ್ಲಿ ರಿಜಿಸ್ಟ್ರಾರ್ ಬುಕ್ ನಲ್ಲಿ ಆರೋಪಿ ತನ್ನ ಹೆಸರು ಮತ್ತು ಹುಡುಗನ ಹೆಸರನ್ನು ಉಲ್ಲೇಖಿಸಿದ್ದ. ಖಾಲಿ ಮಾಡುವಾಗ ಆರೋಪಿಯ ಹೆಸರು ಮಾತ್ರ ಬರೆದಿರುವುದು ದಾಖಲಾಗಿತ್ತು.

ಘಟನೆ ನಡೆದ ನಂತರ ಬಾಲಕನನ್ನು ಆತನ ತಾಯಿ ಭೇಟಿಯಾದ ಸಮಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ವಿಷಯ ಬೆಳಕಿಗೆ ಬಂದಿತ್ತು. ತಾಯಿಯ ಮುಂದೆ ಬಾಲಕ ತನ್ನ ನೋವನ್ನು ಹೇಳಿಕೊಂಡಿದ್ದನು. ಅಲ್ಲದೆ, ಹಾಸ್ಟೆಲ್ನಿಂದ ತನ್ನನ್ನು ಕರೆದು ಹೋಗುವಂತೆ ಕೇಳಿಕೊಂಡಿದ್ದ. ಈ ಬಗ್ಗೆ ಬಾಲಕನ ತಾಯಿ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿದ ಪೊಲೀಸರು, ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377(ಅಸಹಜ ಲೈಂಗಿಕತೆ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ನ್ಯಾಯಾಲಯವು ವಿಚಾರಣೆ ವೇಳೆ 11 ಮಂದಿ ಪ್ರತ್ಯಕ್ಷ ದರ್ಶಿಗಳ ಸಾಕ್ಷಿಯನ್ನು ಪಡೆದಿದ್ದು, ದೌರ್ಜನ್ಯಕ್ಕೊಳಗಾದ ಬಾಲಕ ಮತ್ತು ತಾಯಿಯ ಹೇಳಿಕೆಗಳು ನಿರ್ಣಾಯಕವೆಂದು ಪರಿಗಣಿಸಿ, ಅಪರಾಧಿ ಮದರಸಾ ಶಿಕ್ಷಕನಿಗೆ ಶಿಕ್ಷೆ ನೀಡಿದೆ. ಪ್ರಕರಣದಲ್ಲಿ ಸಂತ್ರಸ್ತ ಬಾಲಕನ ಪರವಾಗಿ ಸರ್ಕಾರಿ ಅಭಿಯೋಜಕಿ ಗಾಯತ್ರಿ ವಾದ ಮಂಡಿಸಿದ್ದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm