ಬ್ರೇಕಿಂಗ್ ನ್ಯೂಸ್
05-09-20 12:17 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 5: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ಜನಪ್ರಿಯ ಚಿತ್ರನಟಿ ರಾಗಿಣಿ ದ್ವಿವೇದಿ ದೊಡ್ಡ ಸಂಕಷ್ಟದಲ್ಲಿ ಬಿದ್ದಿದ್ದಾರೆ. ಪ್ರಕರಣದಲ್ಲಿ ಕಠಿಣ ಸೆಕ್ಷನ್ ಗಳನ್ನು ದಾಖಲಿಸಿರುವ ಸಿಸಿಬಿ ಪೊಲೀಸರಿಂದಾಗಿ ರಾಗಿಣಿ ಅದರಿಂದ ಹೊರಬರುವುದು ಕಷ್ಟ ಎಂದೇ ಹೇಳಲಾಗುತ್ತಿದೆ.
ರಾಗಿಣಿ ವಿರುದ್ಧ 1985ರ ಎನ್ಡಿಪಿಎಸ್ ಕಾಯ್ದೆಯ ಸೆಕ್ಷನ್ 21(ಬಿ), 21(ಸಿ) ಮತ್ತು 22(ಸಿ) ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ಇವು ಮಾದಕ ವಸ್ತು ಮತ್ತು ಮಾನಸಿಕ ಪ್ರಭಾವ ಬೀರುವ ವಸ್ತುಗಳನ್ನ ಹೊಂದಿರುವುದು, ಅವುಗಳ ತಯಾರಿಕೆ, ಮಾರಾಟ, ಖರೀದಿ, ಸಾಗಣೆ ಮಾಡಿದ ಅಪರಾಧಗಳಾಗಿದ್ದು ಆರೋಪ ಸಾಬೀತಾದರೆ ಕಠಿಣ ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ. ಒಂದು ವೇಳೆ ಸ್ಯಾಂಡಲ್ವುಡ್ ನಟಿ ರಾಗಿಣಿ ಮೇಲಿನ ಆರೋಪ ಸಾಬೀತಾದಲ್ಲಿ ನ್ಯಾಯಾಲಯವು ಆಕೆಗೆ 20 ವರ್ಷಗಳ ವರೆಗೆ ಜೈಲು ಶಿಕ್ಷೆ ಮತ್ತು 2 ಲಕ್ಷ ರೂ. ವರೆಗೆ ದಂಡ ವಿಧಿಸಬಹುದು. ಹೀಗಾದರೆ ಚಿತ್ರನಟಿ ಒಬ್ಬರು ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಶಿಕ್ಷೆಗೆ ಗುರಿಯಾದ ಮೊದಲ ಭಾರತೀಯ ನಟಿ ಎಂಬ ಅಪಖ್ಯಾತಿಯೂ ಜೊತೆ ಸೇರಲಿದೆ.

ಇನ್ನು ಡ್ರಗ್ಸ್ ಪೆಡ್ಲರ್ಗಳಾದ ರಾಹುಲ್ ಮತ್ತು ರವಿಶಂಕರ್ ಜೊತೆಗೆ ಹೊಂದಿದ್ದ ನಂಟೇ ಇದೀಗ ನಟಿ ರಾಗಿಣಿಗೆ ದುಬಾರಿಯಾಗಿ ಪರಿಣಮಿಸಿದೆ. ಆರ್ಟಿಒ ಅಧಿಕಾರಿ ಮತ್ತು ರಾಗಿಣಿ ಆಪ್ತನಾಗಿದ್ದ ರವಿಶಂಕರ್ ಬಂಧನದ ಬಳಿಕ ಸಿಸಿಬಿಗೆ ಚಿತ್ರನಟ ನಟಿಯರು ಡ್ರಗ್ ದಂಧೆಯಲ್ಲಿರುವ ಖಚಿತ ಸಾಕ್ಷ್ಯಗಳು ಲಭಿಸಿದ್ದವು. ರವಿಶಂಕರ್ ಜೊತೆ ಸೇರಿ ರಾಗಿಣಿ ಡ್ರಗ್ಸ್ ಜಾಲದಲ್ಲೂ ಭಾಗಿಯಾಗಿದ್ದು, ಜೊತೆಗೆ ಹಣಕಾಸಿವ ವ್ಯವಹಾರವನ್ನೂ ನಡೆಸಿದ್ದಕ್ಕೆ ಸಾಕಷ್ಟು ಸಾಕ್ಷ್ಯಾಧಾರಗಳು ಸಿಕ್ಕಿದೆ ಎನ್ನಲಾಗುತ್ತಿದ್ದು ರಾಗಿಣಿ ಪಾಲಿಗೆ ಕುಣಿಗೆ ಬಿಗಿಯಾಗುವ ಸಾಧ್ಯತೆ ಕಂಡುಬಂದಿದೆ. ರಾಗಿಣಿಯನ್ನು ಎರಡು ದಿನಗಳ ಹಿಂದೆಯೇ ವಿಚಾರಣೆ ನಡೆಸಬೇಕಿತ್ತು. ಅನಾರೋಗ್ಯದ ನಾಟಕ ಆಡಿದ್ದರಿಂದ ನಿನ್ನೆ ಮನೆಗೇ ತೆರಳಿ, ಆಕೆಯನ್ನು ವಿಚಾರಣೆಗೆ ಕರೆತಂದಿದ್ದರು. ನಂತರ ವಿಡಿಯೋ ಕಾನ್ಫೆರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಲ್ಲದೆ, 3 ದಿನ ಪೊಲೀಸ್ ಕಸ್ಟಡಿಗೆ ಪಡೆಯಲು ಸಿಸಿಬಿ ಯಶಸ್ವಿಯಾಗಿದೆ.

ನಿನ್ನೆ ಸಂಜೆ ಬಂಧನ ಖಚಿತ ಪಡಿಸಿದ ಪೊಲೀಸರು, ರಾತ್ರಿ ಕಳೆಯಲು ರಾಗಿಣಿ ಅವರನ್ನ ಕಿದ್ವಾಯಿ ಆಸ್ಪತ್ರೆ ಸಮೀಪದ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಸಾಮಾನ್ಯ ಆರೋಪಿಗಳ ರೀತಿಯಲ್ಲಿ ರಾಗಿಣಿಗೆ ಊಟ ಹಾಗೂ ಸೌಲಭ್ಯ ನೀಡಲಾಗಿತ್ತು. ಇಂದು ಸಿಸಿಬಿ ಕಚೇರಿಯಲ್ಲಿ ಡಿಸಿಪಿ ರವಿಕುಮಾರ್ ಮತ್ತು ಇನ್ಸ್ಪೆಕ್ಟರ್ ಅಂಜುಮಾಲ ನೇತೃತ್ವದಲ್ಲಿ ರಾಗಿಣಿ ವಿಚಾರಣೆ ಮುಂದುವರಿಯಲಿದೆ.
ಬೆಂಗಳೂರಿನಲ್ಲಿರುವ ಡ್ರಗ್ಸ್ ಜಾಲವನ್ನು ಅಮೂಲಾಗ್ರವಾಗಿ ಬಯಲಿಗೆಳೆಯಲು ಸಿಸಿಬಿಯಿಂದ ಆರು ತಂಡಗಳನ್ನು ನಿಯೋಜನೆ ಮಾಡಲಾಗಿದ್ದು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ. ಹಲವು ಡ್ರಗ್ಸ್ ಪೆಡ್ಲರ್ಗಳನ್ನ ಬಂಧಿಸಲಾಗಿದೆ. ರಾಗಿಣಿ ದ್ವಿವೇದಿ, ರಾಹುಲ್, ರವಿಶಂಕರ್ ಮತ್ತು ವೀರೇನ್ ಖನ್ನಾ ಅವರನ್ನ ಪ್ರತ್ಯೇಕವಾಗಿ ವಿಚಾರಣೆ ಮಾಡಲಾಗತ್ತಿದೆ. ವೀರೇನ್ ಖನ್ನಾ ದೆಹಲಿಯವನಾಗಿದ್ದು ಫ್ಯಾಷನ್ ಲೋಕದಲ್ಲಿ ಹೆಸರು ಮಾಡಿದಾತ. ಬೆಂಗಳೂರಿನಲ್ಲಿ ಹೈಫೈ ಪಾರ್ಟಿಗಳ ಆಯೋಜಕನೂ ಆಗಿದ್ದ. ಅವರ ಸಂಪರ್ಕದಲ್ಲಿರುವವರನ್ನ ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm