ಬ್ರೇಕಿಂಗ್ ನ್ಯೂಸ್
07-08-21 05:48 pm Headline Karnataka News Network ಕ್ರೈಂ
ಚೆನ್ನೈ, ಆಗಸ್ಟ್ 7: ಸೈಬರ್ ಕ್ರೈಮ್ ಪೊಲೀಸರ ಸೋಗಿನಲ್ಲಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ಹಣಕ್ಕಾಗಿ ಪೀಡಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ತಮಿಳುನಾಡಿನ ಪುದುಕೋಟ್ಟೈ ನಗರದಲ್ಲಿ ನಡೆದಿದೆ.
ವಿದ್ಯಾರ್ಥಿಗೆ ಕರೆ ಮಾಡಿದ್ದ ಇಬ್ಬರು ವ್ಯಕ್ತಿಗಳು ತಾವು ಚೆನ್ನೈ ಸೈಬರ್ ಕ್ರೈಮ್ ಬ್ರಾಂಚ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ನೀನು ಮೊಬೈಲಿನಲ್ಲಿ ಬ್ಲೂ ಫಿಲಂ ನೋಡಿದ್ದೀಯಾ ಎಂದು ಬ್ಲಾಕ್ಮೇಲ್ ಮಾಡಿದ್ದು, ಹುಡುಗನನ್ನು ವಶಕ್ಕೆ ಪಡೆಯುವುದಾಗಿ ಹೆದರಿಸಿದ್ದಾರೆ. ಆನಂತರ 20 ಸಾವಿರ ಹಣ ಕೊಟ್ಟರೆ ಬಿಟ್ಟು ಬಿಡುವುದಾಗಿ ಹೇಳಿದ್ದರು. ಅದರಂತೆ, ಹುಡುಗ ತಂದೆಯ ಖಾತೆಯಿಂದ ಹಣ ಕಳಿಸಿದ್ದಾನೆ.

ಹಣ ಕಳೆದುಕೊಂಡ ವಿಷಯ ತಂದೆಗೆ ಗೊತ್ತಾಗುತ್ತಿದ್ದಂತೆ ಹುಡುಗನ್ನು ನಿಜ ವಿಚಾರ ಕೇಳಿದ್ದಾರೆ. ಹುಡುಗ ಎಲ್ಲವನ್ನೂ ಹೇಳುತ್ತಲೇ ಈ ಬಗ್ಗೆ ಹುಡುಗನ ತಂದೆ, ತನ್ನ ಸ್ನೇಹಿತರಿಗೆ ತಿಳಿಸಿದ್ದು, ಇದರಲ್ಲೇನೋ ಮೋಸ ಅಡಗಿದೆ ಎನ್ನುವ ಬಗ್ಗೆ ಸಂಶಯ ಬಂದಿದೆ. ಕೂಡಲೇ ಪುದುಕೋಟ್ಟೈ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರೆ ಮಾಡಿದ ಮೊಬೈಲ್ ನಂಬರ್ ಟ್ರೇಸ್ ಮಾಡಿದಾಗ, ಖದೀಮರು ಸಿಕ್ಕಿಬಿದ್ದಿದ್ದಾರೆ.
ಆಬಳಿಕ ನೈಜ ಸೈಬರ್ ಕ್ರೈಮ್ ಪೊಲೀಸರು ಆರೋಪಿಗಳ ಹಿಂದೆ ಬಿದ್ದು ಅರೆಸ್ಟ್ ಮಾಡಿದ್ದಾರೆ. ಕೃಷ್ಣಗಿರಿ ಜಿಲ್ಲೆಯ ಗಣೇಶನ್ ಮತ್ತು ಪ್ರಕಾಶ್ ಬಂಧಿತರಾಗಿದ್ದು, ಅವರನ್ನು ಜೈಲಿಗೆ ತಳ್ಳಿದ್ದಾರೆ. ವಿಚಾರಣೆ ವೇಳೆ ಇದೇ ರೀತಿ ಹಲವು ವಿದ್ಯಾರ್ಥಿಗಳನ್ನು ಮೋಸ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಇವರಿಗೆ ವಿದ್ಯಾರ್ಥಿಗಳ ಮೊಬೈಲ್ ನಂಬರ್ ಹೇಗೆ ಸಿಕ್ಕಿತ್ತು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಆನ್ ಲೈನ್ ಕ್ಲಾಸ್ ಆಗಿರುವುದರಿಂದ ವಿದ್ಯಾರ್ಥಿಗಳ ಕೈಯಲ್ಲಿ ಮೊಬೈಲ್ ಬಳಕೆ ಹೆಚ್ಚಿದ್ದು, ಹೆಚ್ಚಿನ ಮಂದಿ ಬ್ಲೂ ಫಿಲಂ ನೋಡಲು ಬಳಸುತ್ತಿರುವುದು ಪತ್ತೆಯಾಗಿತ್ತು. ಹೀಗಾಗಿ ಇದೇ ವಿಚಾರವನ್ನು ಮುಂದಿಟ್ಟು ಖದೀಮರು ವಿದ್ಯಾರ್ಥಿಗಳಿಗೇ ಬಲೆ ಹಾಕಿದ್ದರು.
Two people were arrested in Tamil Nadu for posing as police officials, threatening a student and duping him of Rs 20,000 over watching porn. The accused confessed to have duped several students in this manner.
08-12-25 06:58 pm
HK News Desk
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm