ಬ್ರೇಕಿಂಗ್ ನ್ಯೂಸ್
07-08-21 05:48 pm Headline Karnataka News Network ಕ್ರೈಂ
ಚೆನ್ನೈ, ಆಗಸ್ಟ್ 7: ಸೈಬರ್ ಕ್ರೈಮ್ ಪೊಲೀಸರ ಸೋಗಿನಲ್ಲಿ ವಿದ್ಯಾರ್ಥಿಗಳಿಗೆ ಕರೆ ಮಾಡಿ ಹಣಕ್ಕಾಗಿ ಪೀಡಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ತಮಿಳುನಾಡಿನ ಪುದುಕೋಟ್ಟೈ ನಗರದಲ್ಲಿ ನಡೆದಿದೆ.
ವಿದ್ಯಾರ್ಥಿಗೆ ಕರೆ ಮಾಡಿದ್ದ ಇಬ್ಬರು ವ್ಯಕ್ತಿಗಳು ತಾವು ಚೆನ್ನೈ ಸೈಬರ್ ಕ್ರೈಮ್ ಬ್ರಾಂಚ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ನೀನು ಮೊಬೈಲಿನಲ್ಲಿ ಬ್ಲೂ ಫಿಲಂ ನೋಡಿದ್ದೀಯಾ ಎಂದು ಬ್ಲಾಕ್ಮೇಲ್ ಮಾಡಿದ್ದು, ಹುಡುಗನನ್ನು ವಶಕ್ಕೆ ಪಡೆಯುವುದಾಗಿ ಹೆದರಿಸಿದ್ದಾರೆ. ಆನಂತರ 20 ಸಾವಿರ ಹಣ ಕೊಟ್ಟರೆ ಬಿಟ್ಟು ಬಿಡುವುದಾಗಿ ಹೇಳಿದ್ದರು. ಅದರಂತೆ, ಹುಡುಗ ತಂದೆಯ ಖಾತೆಯಿಂದ ಹಣ ಕಳಿಸಿದ್ದಾನೆ.

ಹಣ ಕಳೆದುಕೊಂಡ ವಿಷಯ ತಂದೆಗೆ ಗೊತ್ತಾಗುತ್ತಿದ್ದಂತೆ ಹುಡುಗನ್ನು ನಿಜ ವಿಚಾರ ಕೇಳಿದ್ದಾರೆ. ಹುಡುಗ ಎಲ್ಲವನ್ನೂ ಹೇಳುತ್ತಲೇ ಈ ಬಗ್ಗೆ ಹುಡುಗನ ತಂದೆ, ತನ್ನ ಸ್ನೇಹಿತರಿಗೆ ತಿಳಿಸಿದ್ದು, ಇದರಲ್ಲೇನೋ ಮೋಸ ಅಡಗಿದೆ ಎನ್ನುವ ಬಗ್ಗೆ ಸಂಶಯ ಬಂದಿದೆ. ಕೂಡಲೇ ಪುದುಕೋಟ್ಟೈ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕರೆ ಮಾಡಿದ ಮೊಬೈಲ್ ನಂಬರ್ ಟ್ರೇಸ್ ಮಾಡಿದಾಗ, ಖದೀಮರು ಸಿಕ್ಕಿಬಿದ್ದಿದ್ದಾರೆ.
ಆಬಳಿಕ ನೈಜ ಸೈಬರ್ ಕ್ರೈಮ್ ಪೊಲೀಸರು ಆರೋಪಿಗಳ ಹಿಂದೆ ಬಿದ್ದು ಅರೆಸ್ಟ್ ಮಾಡಿದ್ದಾರೆ. ಕೃಷ್ಣಗಿರಿ ಜಿಲ್ಲೆಯ ಗಣೇಶನ್ ಮತ್ತು ಪ್ರಕಾಶ್ ಬಂಧಿತರಾಗಿದ್ದು, ಅವರನ್ನು ಜೈಲಿಗೆ ತಳ್ಳಿದ್ದಾರೆ. ವಿಚಾರಣೆ ವೇಳೆ ಇದೇ ರೀತಿ ಹಲವು ವಿದ್ಯಾರ್ಥಿಗಳನ್ನು ಮೋಸ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಇವರಿಗೆ ವಿದ್ಯಾರ್ಥಿಗಳ ಮೊಬೈಲ್ ನಂಬರ್ ಹೇಗೆ ಸಿಕ್ಕಿತ್ತು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಆನ್ ಲೈನ್ ಕ್ಲಾಸ್ ಆಗಿರುವುದರಿಂದ ವಿದ್ಯಾರ್ಥಿಗಳ ಕೈಯಲ್ಲಿ ಮೊಬೈಲ್ ಬಳಕೆ ಹೆಚ್ಚಿದ್ದು, ಹೆಚ್ಚಿನ ಮಂದಿ ಬ್ಲೂ ಫಿಲಂ ನೋಡಲು ಬಳಸುತ್ತಿರುವುದು ಪತ್ತೆಯಾಗಿತ್ತು. ಹೀಗಾಗಿ ಇದೇ ವಿಚಾರವನ್ನು ಮುಂದಿಟ್ಟು ಖದೀಮರು ವಿದ್ಯಾರ್ಥಿಗಳಿಗೇ ಬಲೆ ಹಾಕಿದ್ದರು.
Two people were arrested in Tamil Nadu for posing as police officials, threatening a student and duping him of Rs 20,000 over watching porn. The accused confessed to have duped several students in this manner.
02-01-26 10:24 pm
HK News Desk
CM Siddaramaiah, Ballari Clash, MLA Bharat Re...
02-01-26 06:09 pm
Ballari Banner Fight, FIR, Death: ಬ್ಯಾನರ್ ವಿಚ...
02-01-26 04:13 pm
ಕೋಗಿಲು ಬಡಾವಣೆ ನಿರಾಶ್ರಿತರಿಗೆ ಮನೆ ಹಂಚಿಕೆ ; ವ್ಯಾ...
02-01-26 01:58 pm
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ ; ಕುರ್ಚಿ ಫೈಟ್ ನಡು...
01-01-26 06:21 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
02-01-26 11:01 pm
Mangalore Correspondent
ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಮೊದಲೇ ನೀರಿನ ಸಮಸ್ಯ...
02-01-26 11:00 pm
Pratibha Kulai: ಹಿಂದು ಮುಖಂಡರು ಮರ್ಯಾದೆ ಕಳಕೊಂಡಿ...
02-01-26 09:32 pm
ಕಿಲಿಮಂಜಾರೋ ಬಳಿಕ ಮೌಂಟ್ ಕೆನ್ಯಾ ಹತ್ತಿದ 11ರ ಪೋರ ;...
02-01-26 02:02 pm
Dr Vinaya Hegde Death, NItte Mangalore: ನಿಟ್ಟ...
01-01-26 09:43 am
02-01-26 12:58 pm
Mangalore Correspondent
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm