ಬ್ರೇಕಿಂಗ್ ನ್ಯೂಸ್
05-09-20 05:23 pm Bangalore Correspondent ಕ್ರೈಂ
ಬೆಂಗಳೂರು, ಸೆ. 05: ಡ್ರಗ್ಸ್ ನಂಟಿನ ಹಿಂದೆ ಬಿದ್ದಿರುವ ಪೊಲೀಸರು ಈವರೆಗೆ ಸಿಕ್ಕಿಬಿದ್ದಿರುವ ಪ್ರಮುಖ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಟಿ ರಾಗಿಣಿ ದ್ವಿವೇದಿ ಸೇರಿದಂತೆ 12 ಮಂದಿ ವಿರುದ್ಧ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದರಲ್ಲಿ ಸೆನೆಗಲ್ ದೇಶದ ಪ್ರಜೆ ಲೂಮ್ ಪೆಪ್ಪರ್ ಕೂಡ ಇದ್ದಾರೆ. ವಿಶೇಷ ಅಂದ್ರೆ ರಾಗಿಣಿ ಸಿಕ್ಕಿಬೀಳಲು ಕಾರಣನಾಗಿದ್ದ ರವಿಶಂಕರ್ ಹೆಸರೇ ಎಫ್ಐಆರ್ ನಲ್ಲಿ ಇಲ್ಲ.
ಶಿವಪ್ರಕಾಶ್ ಎಂಬವರನ್ನು ಎ1 ಆರೋಪಿ ಎಂದು ಹೆಸರಿಸಲಾಗಿದೆ. ನಟಿ ರಾಗಿಣಿ ದ್ವಿವೇದಿ ಎ2 ಆರೋಪಿಯಾದರೆ, ಫ್ಯಾಷನ್ ಲೋಕದ ಸೆಲಬ್ರಿಟಿ ವೀರೇನ್ ಖನ್ನಾ ಎ3 ಆರೋಪಿಯಾಗಿದ್ಧಾರೆ. ಪ್ರಶಾಂತ್ ರಾಂಕಾ, ವೈಭವ್ ಜೈನ್, ಆದಿತ್ಯ ಆಳ್ವ, ಲೂಮ್ ಪೆಪ್ಪರ್, ಸೈಮನ್, ಪ್ರಶಾಂತ್ ಬಾಬು, ಅಶ್ವಿನ್ ಅಲಿಯಾಸ್ ಬೂಗಿ, ರಾಹುಲ್ ತೋನ್ಸೆ, ವಿನಯ್ ಹಾಗೂ ಇತರರನ್ನು ಕ್ರಮ ಪ್ರಕಾರ ಇತರೇ ಆರೋಪಿಗಳನ್ನಾಗಿ ಎಫ್ಐಆರ್ನಲ್ಲಿ ದಾಖಲಿಸಲಾಗಿದೆ. ಸೆಕ್ಷನ್ 120 ಬಿ ಹಾಗೂ ಎನ್ಡಿಪಿಎಸ್ ಕಾಯ್ದೆಯ 21, 21ಸಿ, 27ಎ, 27ಬಿ, 29 ಸೆಕ್ಷನ್ ಅಡಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ. ಎನ್ಡಿಪಿಎಸ್ ಸೆಕ್ಷನ್ 21ಸಿ ಅಡಿ ಆರೋಪ ಸಾಬೀತಾದರೆ 10 ವರ್ಷಗಳಿಗೂ ಮೇಲ್ಪಟ್ಟು ಜೈಲು ಶಿಕ್ಷೆ ವಿಧಿಸುವ ಅವಕಾಶ ಇದೆ.
ವಿಶೇಷ ಅಂದ್ರೆ, ರಾಗಿಣಿ ದ್ವಿವೇದಿ ಸಿಕ್ಕಿಬೀಳಲು ಕಾರಣವಾದ ಆರ್ಟಿಒ ಅಧಿಕಾರಿ ರವಿಶಂಕರ್ ಹೆಸರು ಎಫ್ಐಆರ್ನಲ್ಲಿ ಇಲ್ಲ.
ಪ್ರಕರಣದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಮೊದಲ ಆರೋಪಿಗಳ ಪೈಕಿ ರವಿಶಂಕರ್ ಕೂಡ ಒಬ್ಬರು. ವಿಚಾರಣೆಯಲ್ಲಿ ಡ್ರಗ್ ಸಪ್ಲೈ, ಪಾರ್ಟಿ ಆಯೋಜನೆ ಮಾಡುತ್ತಿದ್ದ ಮಾಹಿತಿಯನ್ನು ಇವರು ನೀಡಿದ್ದರೆನ್ನಲಾಗಿದೆ. ನಟಿ ರಾಗಿಣಿ ದ್ವಿವೇದಿ ಮತ್ತು ವಿರೇನ್ ಖನ್ನಾ ಬಗ್ಗೆಯೂ ಮಾಹಿತಿ ನೀಡಿದ್ದು ಇದೇ ರವಿಶಂಕರ್. ಸಿಸಿಬಿ ಮೂಲಗಳ ಪ್ರಕಾರ, ರವಿಶಂಕರ್ ಅವರನ್ನು ಅಪ್ರೂವರ್ ಆಗಿ ಮಾಡಲಾಗಿದೆ. ಹೀಗಾಗಿ ಎಫ್ಐಆರ್ನಲ್ಲಿ ಅವರ ಹೆಸರು ದಾಖಲಾಗಿಲ್ಲ ಎನ್ನಲಾಗಿದೆ.
ಎ7 ಆರೋಪಿ ಸೆನೆಗಲ್ ದೇಶದ ಪ್ರಜೆ ಲೂಮ್ ಪೆಪ್ಪರ್ ಅಲಿಯಾಸ್ ಸೈಮನ್ ವಿದೇಶದಿಂದ ಬರುತ್ತಿದ್ದ ಡ್ರಗ್ಸ್ ಅನ್ನು ಬೆಂಗಳೂರಿನಲ್ಲಿ ಸರಬರಾಜು ಮಾಡುತ್ತಿದ್ದ ವ್ಯಕ್ತಿ ಎನ್ನಲಾಗಿದೆ. ಸಿಸಿಬಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಇನ್ನೊಂದೆಡೆ, ಆರೋಪಿ ರಾಹುಲ್ ವಿಚಾರಣೆ ಕೂಡ ನಡೆಯುತ್ತಿದೆ. ಸಂಜನಾ ಗಲ್ರಾಣಿ ಆಪ್ತನಾಗಿರುವ ರಾಹುಲ್ ವಿಚಾರಣೆ ವೇಳೆ ನೀಡುವ ಮಾಹಿತಿ ಆಧರಿಸಿ, ಸಂಜನಾ ವಿಚಾರಣೆ ನಡೆಸುವ ಸಾಧ್ಯತೆ ಇದೆ.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm