ಬ್ರೇಕಿಂಗ್ ನ್ಯೂಸ್
05-09-20 05:33 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 5: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಡ್ರಗ್ಸ್ ನಂಟು ಕೂಡ ತಗ್ಲಾಕ್ಕೊಂಡಿದೆ. ಡ್ರಗ್ಸ್ ಪ್ರಕರಣದಲ್ಲಿ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಸಹೋದರನನ್ನು ಅಧಿಕಾರಿಗಳು ಬಂಧಿಸಿದ್ದು ಸುಶಾಂತ್ ಕೂಡ ಡ್ರಗ್ಸ್ ಒಡನಾಟದಲ್ಲಿದ್ದರೇ ಅನುಮಾನ ಹುಟ್ಟಿಸಿದೆ.
ಸುಶಾಂತ್ ಸಿಂಗ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕುವ ಕಾರ್ಯದಲ್ಲಿ ಸಿಬಿಐ ಅಧಿಕಾರಿಗಳು ಮಗ್ನರಾಗಿದ್ದರೆ, ಇತ್ತ ರಿಯಾ ಡ್ರಗ್ಸ್ ನಂಟಿನ ಬಗ್ಗೆ ತನಿಖೆ ನಡೆಸಲು ಎನ್ಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ. ರಿಯಾ ನಿವಾಸದ ಮೇಲೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ರಿಯಾ ಸಹೋದರ ಶೋವಿಕ್ ನನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಎನ್ಸಿಬಿ ಅಧಿಕಾರಿಗಳು ನಿನ್ನೆ ನಟಿ ರಿಯಾ, ಆಕೆಯ ಸಹೋದರ ಶೋವಿಕ್ ಮತ್ತು ಸುಶಾಂತ್ ಸಿಂಗ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ನಿವಾಸದ ಮೇಲೆ ದಾಳಿ ನಡೆಸಿದ್ದರು. ಸುಮಾರು ನಾಲ್ಕೈದು ಗಂಟೆಗಳ ಶೋಧ ನಡೆಸಿದ ಅಧಿಕಾರಿಗಳ ತಂಡ ಬಳಿಕ ರಿಯಾ ಸಹೋದರ ಶೋವಿಕ್ ಹಾಗೂ ಮ್ಯಾನೇಜರ್ ಸ್ಯಾಮುಯೆಲ್ನನ್ನು ಬಂಧಿಸಿದ್ದರು. ಡ್ರಗ್ಸ್ ವಿಚಾರದಲ್ಲಿ ಅಧಿಕಾರಿಗಳ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಲು ವಿಫಲರಾದ ಕಾರಣಕ್ಕೆ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈಗಾಗಲೇ ಡ್ರಗ್ ಡೀಲರ್ ಮಿಲಾತ್ರಾ, ಬಾಸಿತ್ನನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎನ್ಸಿಬಿ ಡೈರೆಕ್ಟರ್ ಎಂಕೆ ಜೈನ್, ರಿಯಾ ಸಹೋದರ ಶೋವಿಕ್ ನೀಡಿದ ಮಾಹಿತಿಯಂತೆ ಸ್ಯಾಮುವೆಲ್ ಡ್ರಗ್ಸ್ ಸಂಗ್ರಹಿಸಿರುವ ಬಗ್ಗೆ ತಿಳಿದುಬಂತು ಎಂದು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಸ್ಯಾಮುಯೆಲ್ನನ್ನು ಸುಶಾಂತ್ ಸಿಂಗ್ ಮನೆಯಲ್ಲಿ ಮ್ಯಾನೇಜರ್ ಆಗಿ ರಿಯಾ ನೇಮಕ ಮಾಡಿದ್ದಳು. ಆಕೆಯಾ ಕಾರಣದಿಂದಲೇ ಸುಶಾಂತ್ ಡ್ರಗ್ಸ್ ಸೇವನೆ ಆರಂಭಿಸಿದ್ದ ಎಂಬ ಸಂಶಯ ಹುಟ್ಟಿಕೊಂಡಿದೆ.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm