ಬ್ರೇಕಿಂಗ್ ನ್ಯೂಸ್
10-08-21 01:25 pm Headline Karnataka News Network ಕ್ರೈಂ
ಥಾಣೆ, ಆಗಸ್ಟ್ 10: ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಹದಿನೈದು ವರ್ಷದ ಬಾಲಕಿಯೊಬ್ಬಳು, ತನ್ನ ತಾಯಿಯೊಂದಿಗೆ ಜಗಳವಾಡಿ, ಕೊನೆಗೆ ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನವಿ ಮುಂಬೈ ಉಪನಗರದಲ್ಲಿ ನಡೆದಿದೆ.
ನವಿ ಮುಂಬೈ ಉಪನಗರದ ಐರೋಲಿ ಪ್ರದೇಶದಲ್ಲಿ ಜುಲೈ 30ರಂದು ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದು ಆಕಸ್ಮಿಕವಾಗಿ ನಡೆದ ಘಟನೆ ಎಂದು ಹುಡುಗಿ ಹೇಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರದಲ್ಲಿ, ಈ ಬಾಲಕಿ ಮತ್ತು ತಾಯಿಯ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ತಾಯಿ, ತನ್ನ ಮಗಳು ವೈದ್ಯಕೀಯ ಪದವಿ ಓದಬೇಕೆಂದು ಬಯಸಿದ್ದರು. ಮಗಳಿಗೆ ಇದು ಇಷ್ಟವಿರಲಿಲ್ಲ. ಈ ಸಂಬಂಧ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ರಬಾಲೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ತಾಯಿ–ಮಗಳ ಘರ್ಷಣೆ ಒಮ್ಮೆ ಪೊಲೀಸ್ ಠಾಣೆ ಮೆಟ್ಟಿಲನ್ನೂ ಏರಿದೆ. ಕಳೆದ ತಿಂಗಳು ಈ ಬಾಲಕಿ, ತನ್ನ ತಾಯಿಯ ವಿರುದ್ಧ ದೂರು ದಾಖಲಿಸಿದ್ದಳು. ಪೊಲೀಸರು ಬಾಲಕಿಯ ಕುಟುಂಬದ ಸದಸ್ಯರನ್ನು ಠಾಣೆಗೆ ಕರೆಸಿ, ಮಾತುಕತೆ ನಡೆಸಿ ಕಳಿಸಿಕೊಟ್ಟಿದರು. ನಂತರ ಜುಲೈ 30ರಂದು ಇದೇ ಬಾಲಕಿ, ‘ತನ್ನ ತಾಯಿ ಮೇಲಿಂದ ಬಿದ್ದು ಸತ್ತು ಹೋಗಿದ್ದಾರೆ‘ ಎಂದು ಪೊಲೀಸರಿಗೆ ತಿಳಿಸಿದ್ದಳು.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆ ಕಳಿಸಿದರು. ಪರೀಕ್ಷೆ ವರದಿ ಪರಿಶೀಲಿಸಿದಾಗ, ಕುತ್ತಿಗೆ ಹಿಸುಕಿದ್ದರಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿತು. ನಂತರ ಪೊಲೀಸರು ಬಾಲಕಿಯನ್ನು ವಿಚಾರಣೆಗೊಳಪಡಿಸಿದಾಗ, ‘ತಾಯಿ, ತನ್ನೊಂದಿಗೆ ಜಗಳವಾಡಿದಾಗ, ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿದೆ‘ ಎಂದು ಒಪ್ಪಿಕೊಂಡಿದ್ದಾಳೆ. ಬಾಲಕಿಯನ್ನು ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 302ರ ಪ್ರಕಾರ ಮೊಕದ್ದಮೆ ದಾಖಲಿಸಲಾಗಿದೆ.
A 15-year-old girl allegedly strangulated her mother to death with a karate belt after a fight over her studies in Navi Mumbai, police said on Tuesday. The girl later tried to pass it off as a case of accidental death, they said.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm