ಬ್ರೇಕಿಂಗ್ ನ್ಯೂಸ್
10-08-21 01:25 pm Headline Karnataka News Network ಕ್ರೈಂ
ಥಾಣೆ, ಆಗಸ್ಟ್ 10: ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಹದಿನೈದು ವರ್ಷದ ಬಾಲಕಿಯೊಬ್ಬಳು, ತನ್ನ ತಾಯಿಯೊಂದಿಗೆ ಜಗಳವಾಡಿ, ಕೊನೆಗೆ ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನವಿ ಮುಂಬೈ ಉಪನಗರದಲ್ಲಿ ನಡೆದಿದೆ.
ನವಿ ಮುಂಬೈ ಉಪನಗರದ ಐರೋಲಿ ಪ್ರದೇಶದಲ್ಲಿ ಜುಲೈ 30ರಂದು ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದು ಆಕಸ್ಮಿಕವಾಗಿ ನಡೆದ ಘಟನೆ ಎಂದು ಹುಡುಗಿ ಹೇಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರದಲ್ಲಿ, ಈ ಬಾಲಕಿ ಮತ್ತು ತಾಯಿಯ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ತಾಯಿ, ತನ್ನ ಮಗಳು ವೈದ್ಯಕೀಯ ಪದವಿ ಓದಬೇಕೆಂದು ಬಯಸಿದ್ದರು. ಮಗಳಿಗೆ ಇದು ಇಷ್ಟವಿರಲಿಲ್ಲ. ಈ ಸಂಬಂಧ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ರಬಾಲೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ತಾಯಿ–ಮಗಳ ಘರ್ಷಣೆ ಒಮ್ಮೆ ಪೊಲೀಸ್ ಠಾಣೆ ಮೆಟ್ಟಿಲನ್ನೂ ಏರಿದೆ. ಕಳೆದ ತಿಂಗಳು ಈ ಬಾಲಕಿ, ತನ್ನ ತಾಯಿಯ ವಿರುದ್ಧ ದೂರು ದಾಖಲಿಸಿದ್ದಳು. ಪೊಲೀಸರು ಬಾಲಕಿಯ ಕುಟುಂಬದ ಸದಸ್ಯರನ್ನು ಠಾಣೆಗೆ ಕರೆಸಿ, ಮಾತುಕತೆ ನಡೆಸಿ ಕಳಿಸಿಕೊಟ್ಟಿದರು. ನಂತರ ಜುಲೈ 30ರಂದು ಇದೇ ಬಾಲಕಿ, ‘ತನ್ನ ತಾಯಿ ಮೇಲಿಂದ ಬಿದ್ದು ಸತ್ತು ಹೋಗಿದ್ದಾರೆ‘ ಎಂದು ಪೊಲೀಸರಿಗೆ ತಿಳಿಸಿದ್ದಳು.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆ ಕಳಿಸಿದರು. ಪರೀಕ್ಷೆ ವರದಿ ಪರಿಶೀಲಿಸಿದಾಗ, ಕುತ್ತಿಗೆ ಹಿಸುಕಿದ್ದರಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿತು. ನಂತರ ಪೊಲೀಸರು ಬಾಲಕಿಯನ್ನು ವಿಚಾರಣೆಗೊಳಪಡಿಸಿದಾಗ, ‘ತಾಯಿ, ತನ್ನೊಂದಿಗೆ ಜಗಳವಾಡಿದಾಗ, ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿದೆ‘ ಎಂದು ಒಪ್ಪಿಕೊಂಡಿದ್ದಾಳೆ. ಬಾಲಕಿಯನ್ನು ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 302ರ ಪ್ರಕಾರ ಮೊಕದ್ದಮೆ ದಾಖಲಿಸಲಾಗಿದೆ.
A 15-year-old girl allegedly strangulated her mother to death with a karate belt after a fight over her studies in Navi Mumbai, police said on Tuesday. The girl later tried to pass it off as a case of accidental death, they said.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am