ಬ್ರೇಕಿಂಗ್ ನ್ಯೂಸ್
10-08-21 01:25 pm Headline Karnataka News Network ಕ್ರೈಂ
ಥಾಣೆ, ಆಗಸ್ಟ್ 10: ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಹದಿನೈದು ವರ್ಷದ ಬಾಲಕಿಯೊಬ್ಬಳು, ತನ್ನ ತಾಯಿಯೊಂದಿಗೆ ಜಗಳವಾಡಿ, ಕೊನೆಗೆ ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನವಿ ಮುಂಬೈ ಉಪನಗರದಲ್ಲಿ ನಡೆದಿದೆ.
ನವಿ ಮುಂಬೈ ಉಪನಗರದ ಐರೋಲಿ ಪ್ರದೇಶದಲ್ಲಿ ಜುಲೈ 30ರಂದು ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದು ಆಕಸ್ಮಿಕವಾಗಿ ನಡೆದ ಘಟನೆ ಎಂದು ಹುಡುಗಿ ಹೇಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರದಲ್ಲಿ, ಈ ಬಾಲಕಿ ಮತ್ತು ತಾಯಿಯ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ತಾಯಿ, ತನ್ನ ಮಗಳು ವೈದ್ಯಕೀಯ ಪದವಿ ಓದಬೇಕೆಂದು ಬಯಸಿದ್ದರು. ಮಗಳಿಗೆ ಇದು ಇಷ್ಟವಿರಲಿಲ್ಲ. ಈ ಸಂಬಂಧ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ರಬಾಲೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ತಾಯಿ–ಮಗಳ ಘರ್ಷಣೆ ಒಮ್ಮೆ ಪೊಲೀಸ್ ಠಾಣೆ ಮೆಟ್ಟಿಲನ್ನೂ ಏರಿದೆ. ಕಳೆದ ತಿಂಗಳು ಈ ಬಾಲಕಿ, ತನ್ನ ತಾಯಿಯ ವಿರುದ್ಧ ದೂರು ದಾಖಲಿಸಿದ್ದಳು. ಪೊಲೀಸರು ಬಾಲಕಿಯ ಕುಟುಂಬದ ಸದಸ್ಯರನ್ನು ಠಾಣೆಗೆ ಕರೆಸಿ, ಮಾತುಕತೆ ನಡೆಸಿ ಕಳಿಸಿಕೊಟ್ಟಿದರು. ನಂತರ ಜುಲೈ 30ರಂದು ಇದೇ ಬಾಲಕಿ, ‘ತನ್ನ ತಾಯಿ ಮೇಲಿಂದ ಬಿದ್ದು ಸತ್ತು ಹೋಗಿದ್ದಾರೆ‘ ಎಂದು ಪೊಲೀಸರಿಗೆ ತಿಳಿಸಿದ್ದಳು.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆ ಕಳಿಸಿದರು. ಪರೀಕ್ಷೆ ವರದಿ ಪರಿಶೀಲಿಸಿದಾಗ, ಕುತ್ತಿಗೆ ಹಿಸುಕಿದ್ದರಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿತು. ನಂತರ ಪೊಲೀಸರು ಬಾಲಕಿಯನ್ನು ವಿಚಾರಣೆಗೊಳಪಡಿಸಿದಾಗ, ‘ತಾಯಿ, ತನ್ನೊಂದಿಗೆ ಜಗಳವಾಡಿದಾಗ, ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿದೆ‘ ಎಂದು ಒಪ್ಪಿಕೊಂಡಿದ್ದಾಳೆ. ಬಾಲಕಿಯನ್ನು ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 302ರ ಪ್ರಕಾರ ಮೊಕದ್ದಮೆ ದಾಖಲಿಸಲಾಗಿದೆ.
A 15-year-old girl allegedly strangulated her mother to death with a karate belt after a fight over her studies in Navi Mumbai, police said on Tuesday. The girl later tried to pass it off as a case of accidental death, they said.
08-12-25 06:58 pm
HK News Desk
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 04:52 pm
Mangalore Correspondent
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm