ಬ್ರೇಕಿಂಗ್ ನ್ಯೂಸ್
10-08-21 01:25 pm Headline Karnataka News Network ಕ್ರೈಂ
ಥಾಣೆ, ಆಗಸ್ಟ್ 10: ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ ಹದಿನೈದು ವರ್ಷದ ಬಾಲಕಿಯೊಬ್ಬಳು, ತನ್ನ ತಾಯಿಯೊಂದಿಗೆ ಜಗಳವಾಡಿ, ಕೊನೆಗೆ ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನವಿ ಮುಂಬೈ ಉಪನಗರದಲ್ಲಿ ನಡೆದಿದೆ.
ನವಿ ಮುಂಬೈ ಉಪನಗರದ ಐರೋಲಿ ಪ್ರದೇಶದಲ್ಲಿ ಜುಲೈ 30ರಂದು ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದು ಆಕಸ್ಮಿಕವಾಗಿ ನಡೆದ ಘಟನೆ ಎಂದು ಹುಡುಗಿ ಹೇಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವೈದ್ಯಕೀಯ ಕೋರ್ಸ್ಗೆ ಸೇರುವ ವಿಚಾರದಲ್ಲಿ, ಈ ಬಾಲಕಿ ಮತ್ತು ತಾಯಿಯ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ತಾಯಿ, ತನ್ನ ಮಗಳು ವೈದ್ಯಕೀಯ ಪದವಿ ಓದಬೇಕೆಂದು ಬಯಸಿದ್ದರು. ಮಗಳಿಗೆ ಇದು ಇಷ್ಟವಿರಲಿಲ್ಲ. ಈ ಸಂಬಂಧ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ರಬಾಲೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ತಾಯಿ–ಮಗಳ ಘರ್ಷಣೆ ಒಮ್ಮೆ ಪೊಲೀಸ್ ಠಾಣೆ ಮೆಟ್ಟಿಲನ್ನೂ ಏರಿದೆ. ಕಳೆದ ತಿಂಗಳು ಈ ಬಾಲಕಿ, ತನ್ನ ತಾಯಿಯ ವಿರುದ್ಧ ದೂರು ದಾಖಲಿಸಿದ್ದಳು. ಪೊಲೀಸರು ಬಾಲಕಿಯ ಕುಟುಂಬದ ಸದಸ್ಯರನ್ನು ಠಾಣೆಗೆ ಕರೆಸಿ, ಮಾತುಕತೆ ನಡೆಸಿ ಕಳಿಸಿಕೊಟ್ಟಿದರು. ನಂತರ ಜುಲೈ 30ರಂದು ಇದೇ ಬಾಲಕಿ, ‘ತನ್ನ ತಾಯಿ ಮೇಲಿಂದ ಬಿದ್ದು ಸತ್ತು ಹೋಗಿದ್ದಾರೆ‘ ಎಂದು ಪೊಲೀಸರಿಗೆ ತಿಳಿಸಿದ್ದಳು.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆ ಕಳಿಸಿದರು. ಪರೀಕ್ಷೆ ವರದಿ ಪರಿಶೀಲಿಸಿದಾಗ, ಕುತ್ತಿಗೆ ಹಿಸುಕಿದ್ದರಿಂದ ಮೃತಪಟ್ಟಿದ್ದಾರೆಂದು ತಿಳಿದುಬಂದಿತು. ನಂತರ ಪೊಲೀಸರು ಬಾಲಕಿಯನ್ನು ವಿಚಾರಣೆಗೊಳಪಡಿಸಿದಾಗ, ‘ತಾಯಿ, ತನ್ನೊಂದಿಗೆ ಜಗಳವಾಡಿದಾಗ, ಕರಾಟೆ ಬೆಲ್ಟ್ನಿಂದ ಆಕೆಯ ಕತ್ತು ಹಿಸುಕಿದೆ‘ ಎಂದು ಒಪ್ಪಿಕೊಂಡಿದ್ದಾಳೆ. ಬಾಲಕಿಯನ್ನು ಬಂಧಿಸಲಾಗಿದ್ದು, ಐಪಿಸಿ ಸೆಕ್ಷನ್ 302ರ ಪ್ರಕಾರ ಮೊಕದ್ದಮೆ ದಾಖಲಿಸಲಾಗಿದೆ.
A 15-year-old girl allegedly strangulated her mother to death with a karate belt after a fight over her studies in Navi Mumbai, police said on Tuesday. The girl later tried to pass it off as a case of accidental death, they said.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm