ಬ್ರೇಕಿಂಗ್ ನ್ಯೂಸ್
10-08-21 01:35 pm Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 10 : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಅಂತರಾಜ್ಯ ಡ್ರಗ್ಸ್ ದಂಧೆಕೋರರನ್ನು ಸಿ.ಟಿ. ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದು, 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
ರಾಜಸ್ಥಾನ ಮೂಲದ ಪಪ್ಪುರಾಮ್ ಅಲಿಯಾಸ್ ಪಪ್ಪು (20), ಚುನ್ನಿಲಾಲ್ (20) ಬಂಧಿತರು. ಆರೋಪಿಗಳಿಂದ ಒಂದು ಕೆ.ಜಿ 820 ಗ್ರಾಂ ಬ್ರೌನ್ ಶುಗರ್, 859 ಗ್ರಾಂ ಎಂಡಿಎಂಎ, ಒಂದು ಕೆಜಿ ಮಿಕ್ಸಿಂಗ್ ಪೌಡರ್, 1,700 ಕೆಜಿ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಸ್ವಿಫ್ಟ್ ಕಾರು, ದ್ವಿಚಕ್ರ ವಾಹನ, ಎರಡು ತೂಕದ ಯಂತ್ರ ಜಪ್ತಿ ಮಾಡಲಾಗಿದೆ. ಮಾದಕ ವಸ್ತುವಿನ ಮೌಲ್ಯ ರೂ.2 ಕೋಟಿ ಎಂದು ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಎಂ. ಪಾಟೀಲ್ ಅವರು ಹೇಳಿದ್ದಾರೆ.

ಬಂಧಿತ ಪಪ್ಪುರಾಮ್ ಬಿಎ ವ್ಯಾಸಂಗವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ. ಆರೋಪಿಗಳು ರಾಜಸ್ಥಾನದಿಂದ ರೈಲಿನಲ್ಲಿ ಬೆಂಗಳೂರಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು. ತಮ್ಮ ಪರಿಚಿತ ಗ್ರಾಹಕರಿಗೆ ಮಾತ್ರ ಮಾರಾಟ ಮಾಡುತ್ತಿದ್ದರು. ಪೊಲೀಸರಿಗೆ ಸುಳಿವು ಸಿಗಬಾರದು ಎಂಬ ಕಾರಣದಿಂದ ಹೊಸಬರಿಗೆ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರಲಿಲ್ಲ. ಈ ಬಗ್ಗೆ ಮಾಹಿತಿ ಪಡೆದಿದ್ದ ಸಿಟಿ ಮಾರುಕಟ್ಟೆ ಠಾಣೆ ಪೊಲೀಸರು ಇವರಿಗಾಗಿ ಶೋಧ ನಡೆಸುತ್ತಿದ್ದರು.
ಆರೋಪಿಗಳಿಬ್ಬರು ಗೋಡೌನ್ ಸ್ಟ್ರೀಟ್ ನಲ್ಲಿ ಭಾನುವಾರ ಸಂಜೆ 5.30ರ ಸುಮಾರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಸಿಟಿ ಮಾರುಕಟ್ಟೆ ಠಾಣೆ ಪೊಲೀಸರ ತಂಡಕ್ಕೆ ಮಾಹಿತಿ ಲಭ್ಯವಾಗಿತ್ತು. ಕಾರ್ಯಾಚರಣೆ ನಡೆಸಿದ ಇನ್ಸ್ ಪೆಕ್ಟರ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.
ಪಪ್ಪುರಾಮ್ ಚಂದಾಪುರ, ಆನೇಕಲ್ ಭಾಗದಲ್ಲಿ ಮನೆ ಮಾಡುತ್ತಿದ್ದ. ಪ್ರತಿ ಮೂರು ತಿಂಗಳಿಗೊಮ್ಮೆ ಮನೆ ಹಾಗೂ ಸಿಮ್ ಕಾರ್ಡ್ ಬದಲಿಸುತ್ತಿದ್ದ. ಮಾದಕ ವಸ್ತುವನ್ನು ಸಂಗ್ರಹಿಸಿ ಇಡಲು ಒಂದು ಸಣ್ಣ ರೂಮ್ ಮಾಡಿಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
The City Market police have arrested two men from Rajasthan for drug peddling, and have seized drugs worth Rs 2 crore. The duo, Pappuram alias Raj alias Ravi Purohit and Chunnilal alias Sunil, are both aged 20 years, and hail from Rajasthan. They are residents of Attibele.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm