ಬ್ರೇಕಿಂಗ್ ನ್ಯೂಸ್
14-08-21 01:38 pm Headline Karnataka News Network ಕ್ರೈಂ
ಚಾಮರಾಜನಗರ, ಆ.14: ಪ್ರೀತಿಸಿದ ಯುವತಿ ತನ್ನನ್ನು ನಿರಾಕರಿಸುತ್ತಿದ್ದಳು ಎಂಬ ಕಾರಣಕ್ಕೆ ಯುವಕನೊಬ್ಬ ಯುವತಿಯನ್ನು ಕಾರಿನಲ್ಲಿ ಕೂರಿಸಿಕೊಂಡೇ ಬೆಂಕಿ ಹಚ್ಚಿಕೊಂಡು ಇಬ್ಬರೂ ಸಾವಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಾಂಬಳ್ಳಿಯಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಶ್ರೀನಿವಾಸ್ (23) ಹಾಗೂ ಅದೇ ಗ್ರಾಮದ ಕಾಂಚನಾ (22) ಮೃತಪಟ್ಟವರು.
ಕಾರಿನ ಒಳಭಾಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಬಗ್ಗೆ ಪೊಲೀಸರು ಶಂಕಿಸಿದ್ದು, ಒಳಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಒಂದೇ ಸೀಟಿನಲ್ಲಿ ಇಬ್ಬರ ತಲೆಬುರುಡೆಗಳು ಮಾತ್ರ ಕಂಡುಬಂದಿವೆ.
ಕಾಂಚನಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಆಗಿದ್ದರೆ, ಶ್ರೀನಿವಾಸ್ ಕ್ಯಾಬ್ ಚಾಲಕನಾಗಿದ್ದ. ಈ ಹಿಂದೆ ಶಿಕ್ಷಣ ಪಡೆಯುತ್ತಿದ್ದಾಗ ಇಬ್ಬರೂ ಸಹಪಾಠಿಗಳಾಗಿದ್ದರು. ಶ್ರೀನಿವಾಸ್, ಯುವತಿಯನ್ನು ಪ್ರೀತಿಸುತ್ತಿದ್ದರು ಎನ್ನಲಾಗಿದ್ದು ಯುವತಿಯ ಕುಟುಂಬದವರಿಗೆ ಇದು ಇಷ್ಟವಿರಲಿಲ್ಲ. ಹಾಗಾಗಿ, ಕಾಂಚನಾ ಕೂಡ ಶ್ರೀನಿವಾಸ್ ನಿಂದ ದೂರ ಇದ್ದಳು ಎನ್ನಲಾಗುತ್ತಿದೆ.



ಇದರಿಂದ ಬೇಸತ್ತಿದ್ದ ಶ್ರೀನಿವಾಸ್, ಕಾಂಚನಾರನ್ನು ಕಾರಿನಲ್ಲಿ ಕೂರಿಸಿಕೊಂಡು ಮಾಂಬಳ್ಳಿಯಿಂದ ಕಿನಕಳ್ಳಿಗೆ ಹೋಗುವ ಮುಖ್ಯ ರಸ್ತೆಯಿಂದ ಎರಡು ಕಿ.ಮೀ. ದೂರದಲ್ಲಿ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ, ಒಳಗೆ ಕುಳಿತುಕೊಂಡೇ ಬೆಂಕಿ ಹಚ್ಚಿಕೊಂಡಿದ್ದಾರೆನ್ನಲಾಗಿದೆ. ಪಕ್ಕದ ಜಮೀನಿನಲ್ಲಿ ಹಸು ಮೇಯಿಸಿಕೊಂಡಿದ್ದ ವ್ಯಕ್ತಿಯೊಬ್ಬರು, ಕಾರು ಉರಿಯುತ್ತಿದ್ದುದನ್ನು ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಬಂದಾಗ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿರಬಹುದು ಎಂದು ಭಾವಿಸಿದ್ದರು. ಆದರೆ, ಹತ್ತಿರ ಹೋಗಿ ನೋಡಿದಾಗ ಒಳಗಡೆ ಎರಡು ತಲೆ ಬುರುಡೆಗಳು ಕಂಡುಬಂದಿದ್ದು ಕಾರಿನ ಬಾಗಿಲು ಲಾಕ್ ಆಗಿತ್ತು.
ಆರಂಭದಲ್ಲಿ ಪ್ರೇಮಿಗಳ ಆತ್ಮಹತ್ಯೆ ಎಂದು ಹೇಳಲಾಗಿತ್ತು. ಆದರೆ, ವಿಚಾರಣೆ ನಡೆಸಿದಾಗ ಶ್ರೀನಿವಾಸ್ ಅವರನ್ನು ಮದುವೆಯಾಗುವುದು ಕಾಂಚನಾ ಕುಟುಂಬದವರಿಗೆ ಇಷ್ಟ ಇರಲಿಲ್ಲ ಹಾಗಾಗಿ ಕಾಂಚನಾ, ದೂರವಾಗಿದ್ದರು ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಇದೇ ವಿಚಾರದಲ್ಲಿ ಮೂರು ತಿಂಗಳ ಹಿಂದೆಯೂ ಶ್ರೀನಿವಾಸ್ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm