ಬ್ರೇಕಿಂಗ್ ನ್ಯೂಸ್
15-08-21 09:37 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ರಥವನ್ನು ತಡೆದು ಕಿಡಿಗೇಡಿ ಕೃತ್ಯ ಎಸಗಿದ ಘಟನೆ ಬಗ್ಗೆ ಕಬಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರದ ಸೂಚನೆಯಂತೆ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಬಕ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ರಥ ಏರ್ಪಡಿಸಲಾಗಿತ್ತು. ರಥ ಹೊರಡುವುದಕ್ಕೂ ಮುನ್ನ ಕಬಕ ಗ್ರಾಮ ಪಂಚಾಯತಿ ಎದುರು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಗಿತ್ತು. ಬಳಿಕ ಭಾರತ ಮಾತೆಯ ಬ್ಯಾನರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಇರಿಸಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಹನ ಜಾಥಾ ಹಮ್ಮಿಕೊಂಡಿದ್ದಾಗ ಆರೋಪಿಗಳಾದ ಅಜೀಜ್, ನೌಷಾದ್, ಹಾರೀಸ್, ಅದ್ದು, ತೌಸೀಫ್, ಶಾಫಿ ಹಾಗೂ ಇತರರು ಅಕ್ರಮ ಕೂಟ ಸೇರಿಕೊಂಡು ಕೋವಿಡ್ ನಿಯಮ ಉಲ್ಲಂಘಿಸಿ, ಸ್ವಾತಂತ್ರ್ಯೋತ್ಸವ ಆಚರಿಸದಂತೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಪಂಚಾಯತ್ ಅಧ್ಯಕ್ಷರನ್ನು ಕೈಯಿಂದ ದೂಡಿ, ಭಾರತ ಮಾತೆಯ ಭಾವಚಿತ್ರವನ್ನು ಹಾನಿಗೊಳಿಸಿದ್ದಾಗಿ ಪಿಡಿಓ ಆಶಾ ಪೊಲೀಸರಿಗೆ ದೂರು ನೀಡಿದ್ದರು.
ಘಟನೆ ಬಗ್ಗೆ ಐಪಿಸಿ ಕಲಂ 143, 147, 269, 353, 323, 427 ಜೊತೆಗೆ 149 ಐಪಿಸಿ ಕಾಯ್ದೆಯಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ, ಅಜೀಜ್, ಅಬ್ದುಲ್ ರಹಿಮಾನ್, ಶಮೀರ್ ಎಂಬವರನ್ನು ಪೊಲೀಸರು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಲಾಗಿದೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
SDPI activists disrupt Independence celebrations over Savarkar's photo in Puttur Kadaba three taken to custody and have been arrested.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm