ಬ್ರೇಕಿಂಗ್ ನ್ಯೂಸ್
15-08-21 09:37 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ರಥವನ್ನು ತಡೆದು ಕಿಡಿಗೇಡಿ ಕೃತ್ಯ ಎಸಗಿದ ಘಟನೆ ಬಗ್ಗೆ ಕಬಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರದ ಸೂಚನೆಯಂತೆ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಬಕ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ರಥ ಏರ್ಪಡಿಸಲಾಗಿತ್ತು. ರಥ ಹೊರಡುವುದಕ್ಕೂ ಮುನ್ನ ಕಬಕ ಗ್ರಾಮ ಪಂಚಾಯತಿ ಎದುರು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಗಿತ್ತು. ಬಳಿಕ ಭಾರತ ಮಾತೆಯ ಬ್ಯಾನರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಇರಿಸಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಹನ ಜಾಥಾ ಹಮ್ಮಿಕೊಂಡಿದ್ದಾಗ ಆರೋಪಿಗಳಾದ ಅಜೀಜ್, ನೌಷಾದ್, ಹಾರೀಸ್, ಅದ್ದು, ತೌಸೀಫ್, ಶಾಫಿ ಹಾಗೂ ಇತರರು ಅಕ್ರಮ ಕೂಟ ಸೇರಿಕೊಂಡು ಕೋವಿಡ್ ನಿಯಮ ಉಲ್ಲಂಘಿಸಿ, ಸ್ವಾತಂತ್ರ್ಯೋತ್ಸವ ಆಚರಿಸದಂತೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಪಂಚಾಯತ್ ಅಧ್ಯಕ್ಷರನ್ನು ಕೈಯಿಂದ ದೂಡಿ, ಭಾರತ ಮಾತೆಯ ಭಾವಚಿತ್ರವನ್ನು ಹಾನಿಗೊಳಿಸಿದ್ದಾಗಿ ಪಿಡಿಓ ಆಶಾ ಪೊಲೀಸರಿಗೆ ದೂರು ನೀಡಿದ್ದರು.
ಘಟನೆ ಬಗ್ಗೆ ಐಪಿಸಿ ಕಲಂ 143, 147, 269, 353, 323, 427 ಜೊತೆಗೆ 149 ಐಪಿಸಿ ಕಾಯ್ದೆಯಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ, ಅಜೀಜ್, ಅಬ್ದುಲ್ ರಹಿಮಾನ್, ಶಮೀರ್ ಎಂಬವರನ್ನು ಪೊಲೀಸರು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಲಾಗಿದೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
SDPI activists disrupt Independence celebrations over Savarkar's photo in Puttur Kadaba three taken to custody and have been arrested.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am