ಬ್ರೇಕಿಂಗ್ ನ್ಯೂಸ್
15-08-21 09:37 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ರಥವನ್ನು ತಡೆದು ಕಿಡಿಗೇಡಿ ಕೃತ್ಯ ಎಸಗಿದ ಘಟನೆ ಬಗ್ಗೆ ಕಬಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರದ ಸೂಚನೆಯಂತೆ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಬಕ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ರಥ ಏರ್ಪಡಿಸಲಾಗಿತ್ತು. ರಥ ಹೊರಡುವುದಕ್ಕೂ ಮುನ್ನ ಕಬಕ ಗ್ರಾಮ ಪಂಚಾಯತಿ ಎದುರು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಗಿತ್ತು. ಬಳಿಕ ಭಾರತ ಮಾತೆಯ ಬ್ಯಾನರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಇರಿಸಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಹನ ಜಾಥಾ ಹಮ್ಮಿಕೊಂಡಿದ್ದಾಗ ಆರೋಪಿಗಳಾದ ಅಜೀಜ್, ನೌಷಾದ್, ಹಾರೀಸ್, ಅದ್ದು, ತೌಸೀಫ್, ಶಾಫಿ ಹಾಗೂ ಇತರರು ಅಕ್ರಮ ಕೂಟ ಸೇರಿಕೊಂಡು ಕೋವಿಡ್ ನಿಯಮ ಉಲ್ಲಂಘಿಸಿ, ಸ್ವಾತಂತ್ರ್ಯೋತ್ಸವ ಆಚರಿಸದಂತೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಪಂಚಾಯತ್ ಅಧ್ಯಕ್ಷರನ್ನು ಕೈಯಿಂದ ದೂಡಿ, ಭಾರತ ಮಾತೆಯ ಭಾವಚಿತ್ರವನ್ನು ಹಾನಿಗೊಳಿಸಿದ್ದಾಗಿ ಪಿಡಿಓ ಆಶಾ ಪೊಲೀಸರಿಗೆ ದೂರು ನೀಡಿದ್ದರು.
ಘಟನೆ ಬಗ್ಗೆ ಐಪಿಸಿ ಕಲಂ 143, 147, 269, 353, 323, 427 ಜೊತೆಗೆ 149 ಐಪಿಸಿ ಕಾಯ್ದೆಯಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ, ಅಜೀಜ್, ಅಬ್ದುಲ್ ರಹಿಮಾನ್, ಶಮೀರ್ ಎಂಬವರನ್ನು ಪೊಲೀಸರು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಲಾಗಿದೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
SDPI activists disrupt Independence celebrations over Savarkar's photo in Puttur Kadaba three taken to custody and have been arrested.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm