ಬ್ರೇಕಿಂಗ್ ನ್ಯೂಸ್
17-08-21 02:34 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಲಿಥುವಾನಿಯಾದಲ್ಲಿ ಕೆಲಸ ಇದೆಯೆಂದು ಹೇಳಿ ಮಹಿಳೆಯೊಬ್ಬರಿಂದ ಎರಡು ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ನಕಲಿ ಏಜನ್ಸಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ನಗರದ ಬಲ್ಮಠದಲ್ಲಿ ಜೀರೇ ಪಾತ್ ವೇ ಅಬ್ರಾಡ್ ಅಫೀಸ್ ಎಂಬ ಹೆಸರಲ್ಲಿ ಕಚೇರಿ ಮಾಡಿಕೊಂಡಿದ್ದ ಜೆರಿ ಇಥಿಲ್ ಸಿಖಾ ಎಂಬಾತನನ್ನು ಬಂಧಿಸಲಾಗಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಆರೋಪಿ ಜೆರಿ, ಲಿಥುವಾನಿಯಾದಲ್ಲಿ ಆಫೀಸ್ ಕೆಲಸದ ಬಗ್ಗೆ ವರ್ಕ್ ವೀಸಾ ಇದೆ. ಅದಕ್ಕಾಗಿ 5 ಲಕ್ಷ 50 ಸಾವಿರ ರೂಪಾಯಿ ಹಣ ಕೊಡಬೇಕು ಎಂದು ಮಹಿಳೆಯೊಬ್ಬರನ್ನು ನಂಬಿಸಿದ್ದಾರೆ. ಅಲ್ಲದೆ, ತಿಂಗಳಿಗೆ 3 ಲಕ್ಷ 50 ಸಾವಿರ ರೂ. ಸಂಬಳ ಇದೆಯೆಂದು ಹೇಳಿದ್ದರು.


ಇದನ್ನು ನಂಬಿದ ಕಾವೂರು ಮೂಲದ ಮಹಿಳೆ ತನ್ನ ಚಿನ್ನಾಭರಣ ಅಡವಿಟ್ಟು ಒಂದು ಲಕ್ಷ ನಗದು ನೇರವಾಗಿ ಮತ್ತು ಒಂದು ಲಕ್ಷ ರೂ. ಹಣವನ್ನು ನೆಫ್ಟ್ ಮೂಲಕ ಆರೋಪಿಯ ಕಚೇರಿಯ ಬ್ಯಾಂಕ್ ಖಾತೆಗೆ ಸಲ್ಲಿಸಿದ್ದ. ಈ ಬಗ್ಗೆ ದೂರುದಾರ ವ್ಯಕ್ತಿ ಇತ್ತೀಚೆಗೆ ಕೆಲವರಲ್ಲಿ ವಿಚಾರಿಸಿದಾಗ ಜೀರೇ ಪಾತ್ ವೇ ಸಂಸ್ಥೆಯ ಬಗ್ಗೆ ಸಂಶಯ ಮೂಡಿತ್ತು. ಅಲ್ಲದೆ, ಕಳೆದ ವಾರ ಪೊಲೀಸರು ಅಧಿಕೃತ ವೀಸಾ ಏಜನ್ಸಿಗಳ ಬಗ್ಗೆ ಪಟ್ಟಿ ಬಿಡುಗಡೆಗೊಳಿಸಿದ್ದರು. ಇದರಲ್ಲಿ ಜಿರೇ ಪಾತ್ ವೇ ಸಂಸ್ಥೆಯ ಹೆಸರು ಉಲ್ಲೇಖ ಆಗಿರದ ಕಾರಣ ದೂರುದಾರ ಮಹಿಳೆಗೆ ಸಂಶಯ ಬಂದು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಅದರಂತೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
The Mangalore police have arrested owner of Jireh Pathway Abraod travel agency for cheating woman of Three lakhs stating to send her aboard for Job in Lithuania. The arrested has been identified as Jireh Sika.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm