ಬ್ರೇಕಿಂಗ್ ನ್ಯೂಸ್
06-09-20 02:17 pm Bangalore Correspondant ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 6: ಬಿಬಿಎಂಪಿ ಕಾರ್ಪೋರೇಟರ್ ಒಬ್ಬರ ಮಗನಿಗೆ ಡ್ರಗ್ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ರಾಜಾಜಿನಗರದ ಕಾರ್ಪೋರೇಟರ್ ಕೇಶವ ಮೂರ್ತಿ ಮಗ ಯಶಸ್ ಮತ್ತು ಮುಂಬೈನಲ್ಲಿ ಬಂಧಿಯಾಗಿರುವ ಡ್ರಗ್ ಪೆಡ್ಲರ್ ಮಹಮ್ಮದ್ ರೆಹಮಾನ್ ನಡುವೆ ಸಂಪರ್ಕ ಇದ್ದುದು ಪತ್ತೆಯಾಗಿತ್ತು. ಹೀಗಾಗಿ ಬೆಂಗಳೂರಿಗೆ ಆಗಮಿಸಿದ್ದ ಎನ್ಸಿಬಿ ಅಧಿಕಾರಿಗಳು ಕಾರ್ಪೋರೇಟರ್ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ವೇಳೆ ಯಾವುದೇ ಮಾದಕ ವಸ್ತುಗಳು ಪತ್ತೆಯಾಗಿಲ್ಲ. ಸದ್ಯ ವಿಚಾರಣೆಗೆ ಹಾಜರಾಗಲು ಕಾರ್ಪೋರೇಟರ್ ಮಗನಿಗೆ ಎನ್ಸಿಬಿ ನೋಟಿಸ್ ನೀಡಿದೆ. ಮುಂಬೈ ಡ್ರಗ್ಸ್ ಪೆಡ್ಲರ್ ಮಹಮದ್ ರೆಹಮಾನ್ ಜತೆ ಸೇರಿ ಡ್ರಗ್ಸ್ ಖರೀದಿ ಮತ್ತು ಡ್ರಗ್ಸ್ ಮಾರಾಟ ಮಾಡಿರುವ ಅನುಮಾನದ ಮೇಲೆ ನೋಟಿಸ್ ನೀಡಿ, ವಿಚಾರಣೆಗೆ ಕರೆದಿದ್ದಾರೆ. ಮುಂಬೈನ ಎನ್ಸಿಬಿ ಕಚೇರಿಗೆ ಆಗಮಿಸಿ ವಿವರಣೆ ನೀಡುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಡ್ರಗ್ಸ್ ಪೆಡ್ಲಿಂಗ್ ಜೊತೆಗೆ ಈ ನಿಕಟವರ್ತಿಗಳಿಗೆ ಯಶಸ್ ಹಲವು ಬಾರಿ ಹಣ ವರ್ಗಾವಣೆ ಮಾಡಿರುವುದೂ ಪತ್ತೆಯಾಗಿದೆ. ಸದ್ಯ ಕೇಶವ ಮೂರ್ತಿ ಮಗ ಯಶಸ್ ನಾಪತ್ತೆಯಾಗಿದ್ದು, ಆತನಿಗಾಗಿ ಎನ್ಸಿಬಿ ಹುಡುಕಾಟ ನಡೆಸುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾರ್ಪೊರೇಟರ್ ಕೇಶವಮೂರ್ತಿ, ಮಗನಿಗೆ ಧೈರ್ಯವಾಗಿರಲು ಹೇಳಿದ್ದೇನೆ. ಮಗ ತಪ್ಪು ಮಾಡಿಲ್ಲ. ಎರಡು ಬಾರಿ ಗೋವಾಗೆ ಹೋಗಿ ಬಂದಿದ್ದ. ಬಂಧಿತರ ಮೊಬೈಲ್ ನಲ್ಲಿ ಮಗನ ನಂಬರ್ ಇದ್ದ ಕಾರಣಕ್ಕೆ ವಿಚಾರಣೆಗೆ ಕರೆದಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm