ಬ್ರೇಕಿಂಗ್ ನ್ಯೂಸ್
06-09-20 02:17 pm Bangalore Correspondant ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 6: ಬಿಬಿಎಂಪಿ ಕಾರ್ಪೋರೇಟರ್ ಒಬ್ಬರ ಮಗನಿಗೆ ಡ್ರಗ್ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ರಾಜಾಜಿನಗರದ ಕಾರ್ಪೋರೇಟರ್ ಕೇಶವ ಮೂರ್ತಿ ಮಗ ಯಶಸ್ ಮತ್ತು ಮುಂಬೈನಲ್ಲಿ ಬಂಧಿಯಾಗಿರುವ ಡ್ರಗ್ ಪೆಡ್ಲರ್ ಮಹಮ್ಮದ್ ರೆಹಮಾನ್ ನಡುವೆ ಸಂಪರ್ಕ ಇದ್ದುದು ಪತ್ತೆಯಾಗಿತ್ತು. ಹೀಗಾಗಿ ಬೆಂಗಳೂರಿಗೆ ಆಗಮಿಸಿದ್ದ ಎನ್ಸಿಬಿ ಅಧಿಕಾರಿಗಳು ಕಾರ್ಪೋರೇಟರ್ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ವೇಳೆ ಯಾವುದೇ ಮಾದಕ ವಸ್ತುಗಳು ಪತ್ತೆಯಾಗಿಲ್ಲ. ಸದ್ಯ ವಿಚಾರಣೆಗೆ ಹಾಜರಾಗಲು ಕಾರ್ಪೋರೇಟರ್ ಮಗನಿಗೆ ಎನ್ಸಿಬಿ ನೋಟಿಸ್ ನೀಡಿದೆ. ಮುಂಬೈ ಡ್ರಗ್ಸ್ ಪೆಡ್ಲರ್ ಮಹಮದ್ ರೆಹಮಾನ್ ಜತೆ ಸೇರಿ ಡ್ರಗ್ಸ್ ಖರೀದಿ ಮತ್ತು ಡ್ರಗ್ಸ್ ಮಾರಾಟ ಮಾಡಿರುವ ಅನುಮಾನದ ಮೇಲೆ ನೋಟಿಸ್ ನೀಡಿ, ವಿಚಾರಣೆಗೆ ಕರೆದಿದ್ದಾರೆ. ಮುಂಬೈನ ಎನ್ಸಿಬಿ ಕಚೇರಿಗೆ ಆಗಮಿಸಿ ವಿವರಣೆ ನೀಡುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಡ್ರಗ್ಸ್ ಪೆಡ್ಲಿಂಗ್ ಜೊತೆಗೆ ಈ ನಿಕಟವರ್ತಿಗಳಿಗೆ ಯಶಸ್ ಹಲವು ಬಾರಿ ಹಣ ವರ್ಗಾವಣೆ ಮಾಡಿರುವುದೂ ಪತ್ತೆಯಾಗಿದೆ. ಸದ್ಯ ಕೇಶವ ಮೂರ್ತಿ ಮಗ ಯಶಸ್ ನಾಪತ್ತೆಯಾಗಿದ್ದು, ಆತನಿಗಾಗಿ ಎನ್ಸಿಬಿ ಹುಡುಕಾಟ ನಡೆಸುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾರ್ಪೊರೇಟರ್ ಕೇಶವಮೂರ್ತಿ, ಮಗನಿಗೆ ಧೈರ್ಯವಾಗಿರಲು ಹೇಳಿದ್ದೇನೆ. ಮಗ ತಪ್ಪು ಮಾಡಿಲ್ಲ. ಎರಡು ಬಾರಿ ಗೋವಾಗೆ ಹೋಗಿ ಬಂದಿದ್ದ. ಬಂಧಿತರ ಮೊಬೈಲ್ ನಲ್ಲಿ ಮಗನ ನಂಬರ್ ಇದ್ದ ಕಾರಣಕ್ಕೆ ವಿಚಾರಣೆಗೆ ಕರೆದಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm